AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India Bid Winner: ವೆಲ್​ಕಮ್ ಬ್ಯಾಕ್ ಏರ್​ ಇಂಡಿಯಾ: ಬಿಡ್ ವಿಜೇತ ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ ಭಾವುಕ ಪತ್ರ

‘ಏರ್​ ಇಂಡಿಯಾ ನಿನಗೆ ಮತ್ತೆ ಸ್ವಾಗತ’ ಎಂದು ರತನ್ ಟಾಟಾ ಪತ್ರವನ್ನು ಮುಗಿಸಿದ್ದಾರೆ.

Air India Bid Winner: ವೆಲ್​ಕಮ್ ಬ್ಯಾಕ್ ಏರ್​ ಇಂಡಿಯಾ: ಬಿಡ್ ವಿಜೇತ ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ ಭಾವುಕ ಪತ್ರ
ಏರ್​ ಇಂಡಿಯಾ ವಿಮಾನ ಮತ್ತು ರತನ್ ಟಾಟಾ
TV9 Web
| Edited By: |

Updated on:Oct 08, 2021 | 6:26 PM

Share

ಏರ್​ ಇಂಡಿಯಾ ಬಿಡ್​ ಗೆಲುವನ್ನು ಟಾಟಾ ಸನ್ಸ್​ ಕಂಪನಿಯ ಮುಖ್ಯಸ್ಥ ರತನ್ ಟಾಟಾ ಭಾವುಕ ಪತ್ರವೊಂದನ್ನು ಟ್ವೀಟ್ ಮಾಡಿ ಸ್ವಾಗತಿಸಿದ್ದಾರೆ. ‘Welcome Back, Air India’ (ಏರ್​ ಇಂಡಿಯಾ ನಿನಗೆ ಮತ್ತೆ ಸ್ವಾಗತ) ಎಂಬ ಆಪ್ತ ಸಾಲುಗಳೊಂದಿಗೆ ಪತ್ರವನ್ನು ಮುಗಿಸಿದ್ದಾರೆ. ಜೆಆರ್​ಡಿ ಟಾಟಾ ಅವರು ವಿಮಾನದ ಮುಂದೆ ನಿಂತಿರುವ ಐತಿಹಾಸಿಕ ಚಿತ್ರವನ್ನು ತಮ್ಮ ಪತ್ರದೊಂದಿಗೆ ಸೇರಿಸಿದ್ದಾರೆ.

ಏರ್​ ಇಂಡಿಯಾ ಸಂಸ್ಥೆಯು ಮತ್ತೆ ಟಾಟಾ ಗ್ರೂಪ್​ ಭಾಗವಾಗುತ್ತಿರುವುದು ದೊಡ್ಡ ಸುದ್ದಿ. ಏರ್​ ಇಂಡಿಯಾ ಸಂಸ್ಥೆಯನ್ನು ಮತ್ತೆ ಕಟ್ಟಲು ಸಾಕಷ್ಟು ಪರಿಶ್ರಮ ಬೇಕು. ವಿಮಾನಯಾನ ಕ್ಷೇತ್ರದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಟಾಟಾ ಗ್ರೂಪ್​ಗೆ ಇದು ಮತ್ತಷ್ಟು ಅವಕಾಶಗಳನ್ನು ವಿಸ್ತರಿಸಲಿದೆ ಎಂದು ರತನ್ ಟಾಟಾ ಹೇಳಿದ್ದಾರೆ.

ಶ್ರೀಯುತ ಜೆಆರ್​ಡಿ ಟಾಟಾ ಅವರ ನಾಯಕತ್ವದಲ್ಲಿ ಏರ್​ ಇಂಡಿಯಾ ವಿಶ್ವದ ಪ್ರತಿಷ್ಠಿತ ವಿಮಾನಯಾನ ಸಂಸ್ಥೆಗಳಲ್ಲಿ ಒಂದು ಎನಿಸಿತ್ತು. ಇದೇ ಪ್ರತಿಷ್ಠೆಯನ್ನು ಸಂಸ್ಥೆಗೆ ಮರಳಿ ತಂದುಕೊಡಲು ಟಾಟಾ ಗ್ರೂಪ್ ಪ್ರಯತ್ನಿಸಲಿದೆ. ನಮ್ಮ ನಡುವೆ ಜೆಆರ್​ಡಿ ಟಾಟಾ ಇಂದು ಇದ್ದಿದ್ದರೆ ಅವರಿಗೆ ಅತ್ಯಂತ ಸಂತೋಷವಾಗುತ್ತಿತ್ತು ಎಂದು ನೆನಪಿಸಿಕೊಂಡಿದ್ದಾರೆ.

ಕೆಲ ಉದ್ಯಮಗಳನ್ನು ಖಾಸಗಿ ರಂಗಕ್ಕೆ ಮುಕ್ತಗೊಳಿಸುವ ಸರ್ಕಾರದ ಇತ್ತೀಚೆಗಿನ ತೀರ್ಮಾನವನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿರುವ ರತನ್ ಟಾಟಾ, ‘ಏರ್​ ಇಂಡಿಯಾ ನಿನಗೆ ಮತ್ತೆ ಸ್ವಾಗತ’ ಎಂದು ಪತ್ರವನ್ನು ಮುಗಿಸಿದ್ದಾರೆ.

ಟಾಟಾ ಸನ್ಸ್​ ತೆಕ್ಕೆಗೆ ಏರ್​ ಇಂಡಿಯಾ

ಟಾಟಾ ಸನ್ಸ್​ ಪ್ರೈವೇಟ್ ಲಿಮಿಟೆಡ್​ 18,000 ಕೋಟಿಗೆ ಇವಿ ಕೋಟ್ ಸಲ್ಲಿಸಿತ್ತು. ಏರ್​ ಇಂಡಿಯಾ ಕಂಪನಿಯ ಬಿಡಿಂಗ್​ನಲ್ಲಿ ಟಾಟಾ ಸನ್ಸ್​ ಗೆಲುವು ಸಾಧಿಸಿದೆ ಎಂದು ಅವರು ತಿಳಿಸಿದರು. ಭಾರತ ಸರ್ಕಾರವು ತನ್ನ ಅಧೀನದಲ್ಲಿರುವ ಏರ್​ ಇಂಡಿಯಾದ ಶೇ 100ರಷ್ಟು ಷೇರುಗಳನ್ನೂ ಮಾರಾಟ ಮಾಡಲು ಒಪ್ಪಿಕೊಂಡಿದ್ದು, ಏರ್​ ಇಂಡಿಯಾ ಖಾಸಗೀಕರಣದ ಕುರಿತು ಇಷ್ಟು ವರ್ಷ ಕೇಳಿಬರುತ್ತಿದ್ದ ಪ್ರಶ್ನೆಗಳಿಗೆ ಉತ್ತರ ದೊರೆತಿದೆ.

ಇದನ್ನೂ ಓದಿ: Air India: ಟಾಟಾ ಸನ್ಸ್​ ತೆಕ್ಕೆಗೆ ಏರ್​ ಇಂಡಿಯಾ: ಸರ್ಕಾರದಿಂದ ಅಧಿಕೃತ ಘೋಷಣೆ ಇದನ್ನೂ ಓದಿ: ಏರ್​ ಇಂಡಿಯಾ ಖರೀದಿಗೆ ಟಾಟಾ ಸನ್ಸ್​ ಬಿಡ್: ಯಾರಿಗೆ ಸಿಗಲಿದೆ ದೈತ್ಯ ಕಂಪನಿಯ ಆಧಿಪತ್ಯ

Published On - 5:25 pm, Fri, 8 October 21

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ