AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India Bid Winner: ವೆಲ್​ಕಮ್ ಬ್ಯಾಕ್ ಏರ್​ ಇಂಡಿಯಾ: ಬಿಡ್ ವಿಜೇತ ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ ಭಾವುಕ ಪತ್ರ

‘ಏರ್​ ಇಂಡಿಯಾ ನಿನಗೆ ಮತ್ತೆ ಸ್ವಾಗತ’ ಎಂದು ರತನ್ ಟಾಟಾ ಪತ್ರವನ್ನು ಮುಗಿಸಿದ್ದಾರೆ.

Air India Bid Winner: ವೆಲ್​ಕಮ್ ಬ್ಯಾಕ್ ಏರ್​ ಇಂಡಿಯಾ: ಬಿಡ್ ವಿಜೇತ ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ ಭಾವುಕ ಪತ್ರ
ಏರ್​ ಇಂಡಿಯಾ ವಿಮಾನ ಮತ್ತು ರತನ್ ಟಾಟಾ
TV9 Web
| Edited By: |

Updated on:Oct 08, 2021 | 6:26 PM

Share

ಏರ್​ ಇಂಡಿಯಾ ಬಿಡ್​ ಗೆಲುವನ್ನು ಟಾಟಾ ಸನ್ಸ್​ ಕಂಪನಿಯ ಮುಖ್ಯಸ್ಥ ರತನ್ ಟಾಟಾ ಭಾವುಕ ಪತ್ರವೊಂದನ್ನು ಟ್ವೀಟ್ ಮಾಡಿ ಸ್ವಾಗತಿಸಿದ್ದಾರೆ. ‘Welcome Back, Air India’ (ಏರ್​ ಇಂಡಿಯಾ ನಿನಗೆ ಮತ್ತೆ ಸ್ವಾಗತ) ಎಂಬ ಆಪ್ತ ಸಾಲುಗಳೊಂದಿಗೆ ಪತ್ರವನ್ನು ಮುಗಿಸಿದ್ದಾರೆ. ಜೆಆರ್​ಡಿ ಟಾಟಾ ಅವರು ವಿಮಾನದ ಮುಂದೆ ನಿಂತಿರುವ ಐತಿಹಾಸಿಕ ಚಿತ್ರವನ್ನು ತಮ್ಮ ಪತ್ರದೊಂದಿಗೆ ಸೇರಿಸಿದ್ದಾರೆ.

ಏರ್​ ಇಂಡಿಯಾ ಸಂಸ್ಥೆಯು ಮತ್ತೆ ಟಾಟಾ ಗ್ರೂಪ್​ ಭಾಗವಾಗುತ್ತಿರುವುದು ದೊಡ್ಡ ಸುದ್ದಿ. ಏರ್​ ಇಂಡಿಯಾ ಸಂಸ್ಥೆಯನ್ನು ಮತ್ತೆ ಕಟ್ಟಲು ಸಾಕಷ್ಟು ಪರಿಶ್ರಮ ಬೇಕು. ವಿಮಾನಯಾನ ಕ್ಷೇತ್ರದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಟಾಟಾ ಗ್ರೂಪ್​ಗೆ ಇದು ಮತ್ತಷ್ಟು ಅವಕಾಶಗಳನ್ನು ವಿಸ್ತರಿಸಲಿದೆ ಎಂದು ರತನ್ ಟಾಟಾ ಹೇಳಿದ್ದಾರೆ.

ಶ್ರೀಯುತ ಜೆಆರ್​ಡಿ ಟಾಟಾ ಅವರ ನಾಯಕತ್ವದಲ್ಲಿ ಏರ್​ ಇಂಡಿಯಾ ವಿಶ್ವದ ಪ್ರತಿಷ್ಠಿತ ವಿಮಾನಯಾನ ಸಂಸ್ಥೆಗಳಲ್ಲಿ ಒಂದು ಎನಿಸಿತ್ತು. ಇದೇ ಪ್ರತಿಷ್ಠೆಯನ್ನು ಸಂಸ್ಥೆಗೆ ಮರಳಿ ತಂದುಕೊಡಲು ಟಾಟಾ ಗ್ರೂಪ್ ಪ್ರಯತ್ನಿಸಲಿದೆ. ನಮ್ಮ ನಡುವೆ ಜೆಆರ್​ಡಿ ಟಾಟಾ ಇಂದು ಇದ್ದಿದ್ದರೆ ಅವರಿಗೆ ಅತ್ಯಂತ ಸಂತೋಷವಾಗುತ್ತಿತ್ತು ಎಂದು ನೆನಪಿಸಿಕೊಂಡಿದ್ದಾರೆ.

ಕೆಲ ಉದ್ಯಮಗಳನ್ನು ಖಾಸಗಿ ರಂಗಕ್ಕೆ ಮುಕ್ತಗೊಳಿಸುವ ಸರ್ಕಾರದ ಇತ್ತೀಚೆಗಿನ ತೀರ್ಮಾನವನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿರುವ ರತನ್ ಟಾಟಾ, ‘ಏರ್​ ಇಂಡಿಯಾ ನಿನಗೆ ಮತ್ತೆ ಸ್ವಾಗತ’ ಎಂದು ಪತ್ರವನ್ನು ಮುಗಿಸಿದ್ದಾರೆ.

ಟಾಟಾ ಸನ್ಸ್​ ತೆಕ್ಕೆಗೆ ಏರ್​ ಇಂಡಿಯಾ

ಟಾಟಾ ಸನ್ಸ್​ ಪ್ರೈವೇಟ್ ಲಿಮಿಟೆಡ್​ 18,000 ಕೋಟಿಗೆ ಇವಿ ಕೋಟ್ ಸಲ್ಲಿಸಿತ್ತು. ಏರ್​ ಇಂಡಿಯಾ ಕಂಪನಿಯ ಬಿಡಿಂಗ್​ನಲ್ಲಿ ಟಾಟಾ ಸನ್ಸ್​ ಗೆಲುವು ಸಾಧಿಸಿದೆ ಎಂದು ಅವರು ತಿಳಿಸಿದರು. ಭಾರತ ಸರ್ಕಾರವು ತನ್ನ ಅಧೀನದಲ್ಲಿರುವ ಏರ್​ ಇಂಡಿಯಾದ ಶೇ 100ರಷ್ಟು ಷೇರುಗಳನ್ನೂ ಮಾರಾಟ ಮಾಡಲು ಒಪ್ಪಿಕೊಂಡಿದ್ದು, ಏರ್​ ಇಂಡಿಯಾ ಖಾಸಗೀಕರಣದ ಕುರಿತು ಇಷ್ಟು ವರ್ಷ ಕೇಳಿಬರುತ್ತಿದ್ದ ಪ್ರಶ್ನೆಗಳಿಗೆ ಉತ್ತರ ದೊರೆತಿದೆ.

ಇದನ್ನೂ ಓದಿ: Air India: ಟಾಟಾ ಸನ್ಸ್​ ತೆಕ್ಕೆಗೆ ಏರ್​ ಇಂಡಿಯಾ: ಸರ್ಕಾರದಿಂದ ಅಧಿಕೃತ ಘೋಷಣೆ ಇದನ್ನೂ ಓದಿ: ಏರ್​ ಇಂಡಿಯಾ ಖರೀದಿಗೆ ಟಾಟಾ ಸನ್ಸ್​ ಬಿಡ್: ಯಾರಿಗೆ ಸಿಗಲಿದೆ ದೈತ್ಯ ಕಂಪನಿಯ ಆಧಿಪತ್ಯ

Published On - 5:25 pm, Fri, 8 October 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್