AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India Bid Winner: ವೆಲ್​ಕಮ್ ಬ್ಯಾಕ್ ಏರ್​ ಇಂಡಿಯಾ: ಬಿಡ್ ವಿಜೇತ ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ ಭಾವುಕ ಪತ್ರ

‘ಏರ್​ ಇಂಡಿಯಾ ನಿನಗೆ ಮತ್ತೆ ಸ್ವಾಗತ’ ಎಂದು ರತನ್ ಟಾಟಾ ಪತ್ರವನ್ನು ಮುಗಿಸಿದ್ದಾರೆ.

Air India Bid Winner: ವೆಲ್​ಕಮ್ ಬ್ಯಾಕ್ ಏರ್​ ಇಂಡಿಯಾ: ಬಿಡ್ ವಿಜೇತ ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ ಭಾವುಕ ಪತ್ರ
ಏರ್​ ಇಂಡಿಯಾ ವಿಮಾನ ಮತ್ತು ರತನ್ ಟಾಟಾ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Oct 08, 2021 | 6:26 PM

Share

ಏರ್​ ಇಂಡಿಯಾ ಬಿಡ್​ ಗೆಲುವನ್ನು ಟಾಟಾ ಸನ್ಸ್​ ಕಂಪನಿಯ ಮುಖ್ಯಸ್ಥ ರತನ್ ಟಾಟಾ ಭಾವುಕ ಪತ್ರವೊಂದನ್ನು ಟ್ವೀಟ್ ಮಾಡಿ ಸ್ವಾಗತಿಸಿದ್ದಾರೆ. ‘Welcome Back, Air India’ (ಏರ್​ ಇಂಡಿಯಾ ನಿನಗೆ ಮತ್ತೆ ಸ್ವಾಗತ) ಎಂಬ ಆಪ್ತ ಸಾಲುಗಳೊಂದಿಗೆ ಪತ್ರವನ್ನು ಮುಗಿಸಿದ್ದಾರೆ. ಜೆಆರ್​ಡಿ ಟಾಟಾ ಅವರು ವಿಮಾನದ ಮುಂದೆ ನಿಂತಿರುವ ಐತಿಹಾಸಿಕ ಚಿತ್ರವನ್ನು ತಮ್ಮ ಪತ್ರದೊಂದಿಗೆ ಸೇರಿಸಿದ್ದಾರೆ.

ಏರ್​ ಇಂಡಿಯಾ ಸಂಸ್ಥೆಯು ಮತ್ತೆ ಟಾಟಾ ಗ್ರೂಪ್​ ಭಾಗವಾಗುತ್ತಿರುವುದು ದೊಡ್ಡ ಸುದ್ದಿ. ಏರ್​ ಇಂಡಿಯಾ ಸಂಸ್ಥೆಯನ್ನು ಮತ್ತೆ ಕಟ್ಟಲು ಸಾಕಷ್ಟು ಪರಿಶ್ರಮ ಬೇಕು. ವಿಮಾನಯಾನ ಕ್ಷೇತ್ರದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಟಾಟಾ ಗ್ರೂಪ್​ಗೆ ಇದು ಮತ್ತಷ್ಟು ಅವಕಾಶಗಳನ್ನು ವಿಸ್ತರಿಸಲಿದೆ ಎಂದು ರತನ್ ಟಾಟಾ ಹೇಳಿದ್ದಾರೆ.

ಶ್ರೀಯುತ ಜೆಆರ್​ಡಿ ಟಾಟಾ ಅವರ ನಾಯಕತ್ವದಲ್ಲಿ ಏರ್​ ಇಂಡಿಯಾ ವಿಶ್ವದ ಪ್ರತಿಷ್ಠಿತ ವಿಮಾನಯಾನ ಸಂಸ್ಥೆಗಳಲ್ಲಿ ಒಂದು ಎನಿಸಿತ್ತು. ಇದೇ ಪ್ರತಿಷ್ಠೆಯನ್ನು ಸಂಸ್ಥೆಗೆ ಮರಳಿ ತಂದುಕೊಡಲು ಟಾಟಾ ಗ್ರೂಪ್ ಪ್ರಯತ್ನಿಸಲಿದೆ. ನಮ್ಮ ನಡುವೆ ಜೆಆರ್​ಡಿ ಟಾಟಾ ಇಂದು ಇದ್ದಿದ್ದರೆ ಅವರಿಗೆ ಅತ್ಯಂತ ಸಂತೋಷವಾಗುತ್ತಿತ್ತು ಎಂದು ನೆನಪಿಸಿಕೊಂಡಿದ್ದಾರೆ.

ಕೆಲ ಉದ್ಯಮಗಳನ್ನು ಖಾಸಗಿ ರಂಗಕ್ಕೆ ಮುಕ್ತಗೊಳಿಸುವ ಸರ್ಕಾರದ ಇತ್ತೀಚೆಗಿನ ತೀರ್ಮಾನವನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿರುವ ರತನ್ ಟಾಟಾ, ‘ಏರ್​ ಇಂಡಿಯಾ ನಿನಗೆ ಮತ್ತೆ ಸ್ವಾಗತ’ ಎಂದು ಪತ್ರವನ್ನು ಮುಗಿಸಿದ್ದಾರೆ.

ಟಾಟಾ ಸನ್ಸ್​ ತೆಕ್ಕೆಗೆ ಏರ್​ ಇಂಡಿಯಾ

ಟಾಟಾ ಸನ್ಸ್​ ಪ್ರೈವೇಟ್ ಲಿಮಿಟೆಡ್​ 18,000 ಕೋಟಿಗೆ ಇವಿ ಕೋಟ್ ಸಲ್ಲಿಸಿತ್ತು. ಏರ್​ ಇಂಡಿಯಾ ಕಂಪನಿಯ ಬಿಡಿಂಗ್​ನಲ್ಲಿ ಟಾಟಾ ಸನ್ಸ್​ ಗೆಲುವು ಸಾಧಿಸಿದೆ ಎಂದು ಅವರು ತಿಳಿಸಿದರು. ಭಾರತ ಸರ್ಕಾರವು ತನ್ನ ಅಧೀನದಲ್ಲಿರುವ ಏರ್​ ಇಂಡಿಯಾದ ಶೇ 100ರಷ್ಟು ಷೇರುಗಳನ್ನೂ ಮಾರಾಟ ಮಾಡಲು ಒಪ್ಪಿಕೊಂಡಿದ್ದು, ಏರ್​ ಇಂಡಿಯಾ ಖಾಸಗೀಕರಣದ ಕುರಿತು ಇಷ್ಟು ವರ್ಷ ಕೇಳಿಬರುತ್ತಿದ್ದ ಪ್ರಶ್ನೆಗಳಿಗೆ ಉತ್ತರ ದೊರೆತಿದೆ.

ಇದನ್ನೂ ಓದಿ: Air India: ಟಾಟಾ ಸನ್ಸ್​ ತೆಕ್ಕೆಗೆ ಏರ್​ ಇಂಡಿಯಾ: ಸರ್ಕಾರದಿಂದ ಅಧಿಕೃತ ಘೋಷಣೆ ಇದನ್ನೂ ಓದಿ: ಏರ್​ ಇಂಡಿಯಾ ಖರೀದಿಗೆ ಟಾಟಾ ಸನ್ಸ್​ ಬಿಡ್: ಯಾರಿಗೆ ಸಿಗಲಿದೆ ದೈತ್ಯ ಕಂಪನಿಯ ಆಧಿಪತ್ಯ

Published On - 5:25 pm, Fri, 8 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ