AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿತಿಮೀರಿದ ಕೊವಿಡ್ 19; ಹಾಂಗ್​ಕಾಂಗ್​​ಗೆ ವಿಮಾನ ಸಂಚಾರ ರದ್ದುಗೊಳಿಸಿದ ಏರ್​ಇಂಡಿಯಾ ವಿಮಾನಯಾನ ಸಂಸ್ಥೆ

ಹಾಂಗ್​ಕಾಂಗ್​​ನಲ್ಲಿ ಕೊರೊನಾ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಅದು ಅಂತಾರಾಷ್ಟ್ರೀಯ ಪ್ರಯಾಣದ ಮೇಲೆ ನಿರ್ಬಂಧ ವಿಧಿಸಿದೆ. ಏರ್​ ಇಂಡಿಯಾ ವಿಮಾನಗಳ ಹಾರಾಟವನ್ನು ಏಪ್ರಿಲ್​ 24ರವರೆಗೆ ನಿರ್ಬಂಧಿಸಿದ್ದಾಗಿ ಅಲ್ಲಿನ ಸರ್ಕಾರ ಹೇಳಿತ್ತು

ಮಿತಿಮೀರಿದ ಕೊವಿಡ್ 19; ಹಾಂಗ್​ಕಾಂಗ್​​ಗೆ ವಿಮಾನ ಸಂಚಾರ ರದ್ದುಗೊಳಿಸಿದ ಏರ್​ಇಂಡಿಯಾ ವಿಮಾನಯಾನ ಸಂಸ್ಥೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Apr 18, 2022 | 10:57 AM

Share

ಚೀನಾದ ಶಾಂಘೈ, ಹಾಂಗ್​ಕಾಂಗ್​​ಗಳಲ್ಲೆಲ್ಲ ಕೊವಿಡ್​ 19 ಸಿಕ್ಕಾಪಟೆ ಹೆಚ್ಚಿದೆ. ಸ್ಥಳೀಯವಾಗಿ ಕಠಿಣ ನಿರ್ಬಂಧ ಹೇರಲಾಗಿದೆ. ಈ ಮಧ್ಯೆ ಏರ್​ ಇಂಡಿಯಾ ವಿಮಾನ ಯಾನ ಸಂಸ್ಥೆ, ಹಾಂಗ್​​ಕಾಂಗ್​ಗೆ ಸಂಚಾರ ಮಾಡುತ್ತಿದ್ದ ವಿಮಾನಗಳನ್ನು ರದ್ದುಗೊಳಿಸಿದೆ. ಅಂದರೆ ಮುಂದಿನ ನಿರ್ಣಯದವರೆಗೆ ಹಾಂಗ್​​ಕಾಂಗ್​​ಗೆ ಏರ್​ ಇಂಡಿಯಾದ ಯಾವುದೇ ವಿಮಾನಗಳೂ ಸಂಚಾರ ಮಾಡುವುದಿಲ್ಲ. ಈ ಬಗ್ಗೆ ಟ್ವೀಟ್ ಮಾಡಿರುವ ಏರ್​ ಇಂಡಿಯಾ, ಹಾಂಗ್​ಕಾಂಗ್​ನಲ್ಲಿ ಕೊವಿಡ್​ 19 ಪ್ರಕರಣಗಳು ಹೆಚ್ಚಾಗಿರುವ ಕಾರಣ ಅಲ್ಲಿನ ಆಡಳಿತ ಕಠಿಣ ನಿರ್ಬಂಧಗಳನ್ನು ಹೇರಿದೆ.  ಹೀಗಾಗಿ ನಮ್ಮ ವಿಮಾನವೂ ಅಲ್ಲಿಗೆ ಸಂಚಾರ ಮಾಡುವುದಿಲ್ಲ ಎಂದು ಹೇಳಿದೆ.

ಹಾಂಗ್​ಕಾಂಗ್​​ನಲ್ಲಿ ಕೊರೊನಾ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಅದು ಅಂತಾರಾಷ್ಟ್ರೀಯ ಪ್ರಯಾಣದ ಮೇಲೆ ನಿರ್ಬಂಧ ವಿಧಿಸಿದೆ. ಏರ್​ ಇಂಡಿಯಾ ವಿಮಾನಗಳ ಹಾರಾಟವನ್ನು ಏಪ್ರಿಲ್​ 24ರವರೆಗೆ ನಿರ್ಬಂಧಿಸಿದ್ದಾಗಿ ಅಲ್ಲಿನ ಸರ್ಕಾರ ಹೇಳಿತ್ತು. ಅಷ್ಟೇ ಅಲ್ಲ, ಭಾರತದಿಂದ ಹಾಂಗ್​ಕಾಂಗ್​ಗೆ ಪ್ರವೇಶ ಮಾಡಬೇಕು ಎಂದರೆ 48 ಗಂಟೆಯ ಮೊದಲು ಕೊವಿಡ್​ 19  ತಪಾಸಣೆ ಮಾಡಿಸಬೇಕು. ಅದರ ವರದಿ ನೆಗೆಟಿವ್​ ಬಂದಿರಬೇಕು ಎಂದೂ ಹಾಂಗ್​ಕಾಂಗ್​ ಸರ್ಕಾರ ಹೇಳಿದೆ.

ಏಪ್ರಿಲ್​ 16ರಂದು ದೆಹಲಿಯಿಂದ ಕೋಲ್ಕತ್ತ ಮಾರ್ಗವಾಗಿ ಹಾಂಗ್​ ಕಾಂಗ್​ ತಲುಪಿದ್ದ ಏರ್​ ಇಂಡಿಯಾದ AI316 ವಿಮಾನದಲ್ಲಿ ಪ್ರಯಾಣಿಸಿದ್ದ ಮೂವರಲ್ಲಿ ಕೊರೊನಾ ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಹಾಂಗ್​ಕಾಂಗ್ ಏರ್​ ಇಂಡಿಯಾ ಫ್ಲೈಟ್​ಗಳಿಗೆ ನಿರ್ಬಂಧ ವಿಧಿಸಿದೆ. ಜನವರಿಯಲ್ಲೂ ಕೂಡ ಭಾರತ ಸೇರಿ ಒಟ್ಟು 8 ದೇಶಗಳ ವಿಮಾನಗಳು ಹಾಂಗ್​ ಕಾಂಗ್​ ಪ್ರವೇಶ ಮಾಡುವುದನ್ನು ನಿರ್ಬಂಧಿಸಲಾಗಿತ್ತು.

ಇದನ್ನೂ ಓದಿ: ಜನ ತಿರಸ್ಕರಿಸಿದ ಪಕ್ಷಗಳಿಂದ ಇನ್ನೇನು ಮಾಡಲು ಸಾಧ್ಯ: ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಜೆಪಿ ನಡ್ಡಾ

Published On - 9:50 am, Mon, 18 April 22

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು