AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿತಿಮೀರಿದ ಕೊವಿಡ್ 19; ಹಾಂಗ್​ಕಾಂಗ್​​ಗೆ ವಿಮಾನ ಸಂಚಾರ ರದ್ದುಗೊಳಿಸಿದ ಏರ್​ಇಂಡಿಯಾ ವಿಮಾನಯಾನ ಸಂಸ್ಥೆ

ಹಾಂಗ್​ಕಾಂಗ್​​ನಲ್ಲಿ ಕೊರೊನಾ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಅದು ಅಂತಾರಾಷ್ಟ್ರೀಯ ಪ್ರಯಾಣದ ಮೇಲೆ ನಿರ್ಬಂಧ ವಿಧಿಸಿದೆ. ಏರ್​ ಇಂಡಿಯಾ ವಿಮಾನಗಳ ಹಾರಾಟವನ್ನು ಏಪ್ರಿಲ್​ 24ರವರೆಗೆ ನಿರ್ಬಂಧಿಸಿದ್ದಾಗಿ ಅಲ್ಲಿನ ಸರ್ಕಾರ ಹೇಳಿತ್ತು

ಮಿತಿಮೀರಿದ ಕೊವಿಡ್ 19; ಹಾಂಗ್​ಕಾಂಗ್​​ಗೆ ವಿಮಾನ ಸಂಚಾರ ರದ್ದುಗೊಳಿಸಿದ ಏರ್​ಇಂಡಿಯಾ ವಿಮಾನಯಾನ ಸಂಸ್ಥೆ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Apr 18, 2022 | 10:57 AM

Share

ಚೀನಾದ ಶಾಂಘೈ, ಹಾಂಗ್​ಕಾಂಗ್​​ಗಳಲ್ಲೆಲ್ಲ ಕೊವಿಡ್​ 19 ಸಿಕ್ಕಾಪಟೆ ಹೆಚ್ಚಿದೆ. ಸ್ಥಳೀಯವಾಗಿ ಕಠಿಣ ನಿರ್ಬಂಧ ಹೇರಲಾಗಿದೆ. ಈ ಮಧ್ಯೆ ಏರ್​ ಇಂಡಿಯಾ ವಿಮಾನ ಯಾನ ಸಂಸ್ಥೆ, ಹಾಂಗ್​​ಕಾಂಗ್​ಗೆ ಸಂಚಾರ ಮಾಡುತ್ತಿದ್ದ ವಿಮಾನಗಳನ್ನು ರದ್ದುಗೊಳಿಸಿದೆ. ಅಂದರೆ ಮುಂದಿನ ನಿರ್ಣಯದವರೆಗೆ ಹಾಂಗ್​​ಕಾಂಗ್​​ಗೆ ಏರ್​ ಇಂಡಿಯಾದ ಯಾವುದೇ ವಿಮಾನಗಳೂ ಸಂಚಾರ ಮಾಡುವುದಿಲ್ಲ. ಈ ಬಗ್ಗೆ ಟ್ವೀಟ್ ಮಾಡಿರುವ ಏರ್​ ಇಂಡಿಯಾ, ಹಾಂಗ್​ಕಾಂಗ್​ನಲ್ಲಿ ಕೊವಿಡ್​ 19 ಪ್ರಕರಣಗಳು ಹೆಚ್ಚಾಗಿರುವ ಕಾರಣ ಅಲ್ಲಿನ ಆಡಳಿತ ಕಠಿಣ ನಿರ್ಬಂಧಗಳನ್ನು ಹೇರಿದೆ.  ಹೀಗಾಗಿ ನಮ್ಮ ವಿಮಾನವೂ ಅಲ್ಲಿಗೆ ಸಂಚಾರ ಮಾಡುವುದಿಲ್ಲ ಎಂದು ಹೇಳಿದೆ.

ಹಾಂಗ್​ಕಾಂಗ್​​ನಲ್ಲಿ ಕೊರೊನಾ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಅದು ಅಂತಾರಾಷ್ಟ್ರೀಯ ಪ್ರಯಾಣದ ಮೇಲೆ ನಿರ್ಬಂಧ ವಿಧಿಸಿದೆ. ಏರ್​ ಇಂಡಿಯಾ ವಿಮಾನಗಳ ಹಾರಾಟವನ್ನು ಏಪ್ರಿಲ್​ 24ರವರೆಗೆ ನಿರ್ಬಂಧಿಸಿದ್ದಾಗಿ ಅಲ್ಲಿನ ಸರ್ಕಾರ ಹೇಳಿತ್ತು. ಅಷ್ಟೇ ಅಲ್ಲ, ಭಾರತದಿಂದ ಹಾಂಗ್​ಕಾಂಗ್​ಗೆ ಪ್ರವೇಶ ಮಾಡಬೇಕು ಎಂದರೆ 48 ಗಂಟೆಯ ಮೊದಲು ಕೊವಿಡ್​ 19  ತಪಾಸಣೆ ಮಾಡಿಸಬೇಕು. ಅದರ ವರದಿ ನೆಗೆಟಿವ್​ ಬಂದಿರಬೇಕು ಎಂದೂ ಹಾಂಗ್​ಕಾಂಗ್​ ಸರ್ಕಾರ ಹೇಳಿದೆ.

ಏಪ್ರಿಲ್​ 16ರಂದು ದೆಹಲಿಯಿಂದ ಕೋಲ್ಕತ್ತ ಮಾರ್ಗವಾಗಿ ಹಾಂಗ್​ ಕಾಂಗ್​ ತಲುಪಿದ್ದ ಏರ್​ ಇಂಡಿಯಾದ AI316 ವಿಮಾನದಲ್ಲಿ ಪ್ರಯಾಣಿಸಿದ್ದ ಮೂವರಲ್ಲಿ ಕೊರೊನಾ ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಹಾಂಗ್​ಕಾಂಗ್ ಏರ್​ ಇಂಡಿಯಾ ಫ್ಲೈಟ್​ಗಳಿಗೆ ನಿರ್ಬಂಧ ವಿಧಿಸಿದೆ. ಜನವರಿಯಲ್ಲೂ ಕೂಡ ಭಾರತ ಸೇರಿ ಒಟ್ಟು 8 ದೇಶಗಳ ವಿಮಾನಗಳು ಹಾಂಗ್​ ಕಾಂಗ್​ ಪ್ರವೇಶ ಮಾಡುವುದನ್ನು ನಿರ್ಬಂಧಿಸಲಾಗಿತ್ತು.

ಇದನ್ನೂ ಓದಿ: ಜನ ತಿರಸ್ಕರಿಸಿದ ಪಕ್ಷಗಳಿಂದ ಇನ್ನೇನು ಮಾಡಲು ಸಾಧ್ಯ: ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಜೆಪಿ ನಡ್ಡಾ

Published On - 9:50 am, Mon, 18 April 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್