AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿತಿಮೀರಿದ ಕೊವಿಡ್ 19; ಹಾಂಗ್​ಕಾಂಗ್​​ಗೆ ವಿಮಾನ ಸಂಚಾರ ರದ್ದುಗೊಳಿಸಿದ ಏರ್​ಇಂಡಿಯಾ ವಿಮಾನಯಾನ ಸಂಸ್ಥೆ

ಹಾಂಗ್​ಕಾಂಗ್​​ನಲ್ಲಿ ಕೊರೊನಾ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಅದು ಅಂತಾರಾಷ್ಟ್ರೀಯ ಪ್ರಯಾಣದ ಮೇಲೆ ನಿರ್ಬಂಧ ವಿಧಿಸಿದೆ. ಏರ್​ ಇಂಡಿಯಾ ವಿಮಾನಗಳ ಹಾರಾಟವನ್ನು ಏಪ್ರಿಲ್​ 24ರವರೆಗೆ ನಿರ್ಬಂಧಿಸಿದ್ದಾಗಿ ಅಲ್ಲಿನ ಸರ್ಕಾರ ಹೇಳಿತ್ತು

ಮಿತಿಮೀರಿದ ಕೊವಿಡ್ 19; ಹಾಂಗ್​ಕಾಂಗ್​​ಗೆ ವಿಮಾನ ಸಂಚಾರ ರದ್ದುಗೊಳಿಸಿದ ಏರ್​ಇಂಡಿಯಾ ವಿಮಾನಯಾನ ಸಂಸ್ಥೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Apr 18, 2022 | 10:57 AM

Share

ಚೀನಾದ ಶಾಂಘೈ, ಹಾಂಗ್​ಕಾಂಗ್​​ಗಳಲ್ಲೆಲ್ಲ ಕೊವಿಡ್​ 19 ಸಿಕ್ಕಾಪಟೆ ಹೆಚ್ಚಿದೆ. ಸ್ಥಳೀಯವಾಗಿ ಕಠಿಣ ನಿರ್ಬಂಧ ಹೇರಲಾಗಿದೆ. ಈ ಮಧ್ಯೆ ಏರ್​ ಇಂಡಿಯಾ ವಿಮಾನ ಯಾನ ಸಂಸ್ಥೆ, ಹಾಂಗ್​​ಕಾಂಗ್​ಗೆ ಸಂಚಾರ ಮಾಡುತ್ತಿದ್ದ ವಿಮಾನಗಳನ್ನು ರದ್ದುಗೊಳಿಸಿದೆ. ಅಂದರೆ ಮುಂದಿನ ನಿರ್ಣಯದವರೆಗೆ ಹಾಂಗ್​​ಕಾಂಗ್​​ಗೆ ಏರ್​ ಇಂಡಿಯಾದ ಯಾವುದೇ ವಿಮಾನಗಳೂ ಸಂಚಾರ ಮಾಡುವುದಿಲ್ಲ. ಈ ಬಗ್ಗೆ ಟ್ವೀಟ್ ಮಾಡಿರುವ ಏರ್​ ಇಂಡಿಯಾ, ಹಾಂಗ್​ಕಾಂಗ್​ನಲ್ಲಿ ಕೊವಿಡ್​ 19 ಪ್ರಕರಣಗಳು ಹೆಚ್ಚಾಗಿರುವ ಕಾರಣ ಅಲ್ಲಿನ ಆಡಳಿತ ಕಠಿಣ ನಿರ್ಬಂಧಗಳನ್ನು ಹೇರಿದೆ.  ಹೀಗಾಗಿ ನಮ್ಮ ವಿಮಾನವೂ ಅಲ್ಲಿಗೆ ಸಂಚಾರ ಮಾಡುವುದಿಲ್ಲ ಎಂದು ಹೇಳಿದೆ.

ಹಾಂಗ್​ಕಾಂಗ್​​ನಲ್ಲಿ ಕೊರೊನಾ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಅದು ಅಂತಾರಾಷ್ಟ್ರೀಯ ಪ್ರಯಾಣದ ಮೇಲೆ ನಿರ್ಬಂಧ ವಿಧಿಸಿದೆ. ಏರ್​ ಇಂಡಿಯಾ ವಿಮಾನಗಳ ಹಾರಾಟವನ್ನು ಏಪ್ರಿಲ್​ 24ರವರೆಗೆ ನಿರ್ಬಂಧಿಸಿದ್ದಾಗಿ ಅಲ್ಲಿನ ಸರ್ಕಾರ ಹೇಳಿತ್ತು. ಅಷ್ಟೇ ಅಲ್ಲ, ಭಾರತದಿಂದ ಹಾಂಗ್​ಕಾಂಗ್​ಗೆ ಪ್ರವೇಶ ಮಾಡಬೇಕು ಎಂದರೆ 48 ಗಂಟೆಯ ಮೊದಲು ಕೊವಿಡ್​ 19  ತಪಾಸಣೆ ಮಾಡಿಸಬೇಕು. ಅದರ ವರದಿ ನೆಗೆಟಿವ್​ ಬಂದಿರಬೇಕು ಎಂದೂ ಹಾಂಗ್​ಕಾಂಗ್​ ಸರ್ಕಾರ ಹೇಳಿದೆ.

ಏಪ್ರಿಲ್​ 16ರಂದು ದೆಹಲಿಯಿಂದ ಕೋಲ್ಕತ್ತ ಮಾರ್ಗವಾಗಿ ಹಾಂಗ್​ ಕಾಂಗ್​ ತಲುಪಿದ್ದ ಏರ್​ ಇಂಡಿಯಾದ AI316 ವಿಮಾನದಲ್ಲಿ ಪ್ರಯಾಣಿಸಿದ್ದ ಮೂವರಲ್ಲಿ ಕೊರೊನಾ ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಹಾಂಗ್​ಕಾಂಗ್ ಏರ್​ ಇಂಡಿಯಾ ಫ್ಲೈಟ್​ಗಳಿಗೆ ನಿರ್ಬಂಧ ವಿಧಿಸಿದೆ. ಜನವರಿಯಲ್ಲೂ ಕೂಡ ಭಾರತ ಸೇರಿ ಒಟ್ಟು 8 ದೇಶಗಳ ವಿಮಾನಗಳು ಹಾಂಗ್​ ಕಾಂಗ್​ ಪ್ರವೇಶ ಮಾಡುವುದನ್ನು ನಿರ್ಬಂಧಿಸಲಾಗಿತ್ತು.

ಇದನ್ನೂ ಓದಿ: ಜನ ತಿರಸ್ಕರಿಸಿದ ಪಕ್ಷಗಳಿಂದ ಇನ್ನೇನು ಮಾಡಲು ಸಾಧ್ಯ: ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಜೆಪಿ ನಡ್ಡಾ

Published On - 9:50 am, Mon, 18 April 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ