AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿತಿಮೀರಿದ ಕೊವಿಡ್ 19; ಹಾಂಗ್​ಕಾಂಗ್​​ಗೆ ವಿಮಾನ ಸಂಚಾರ ರದ್ದುಗೊಳಿಸಿದ ಏರ್​ಇಂಡಿಯಾ ವಿಮಾನಯಾನ ಸಂಸ್ಥೆ

ಹಾಂಗ್​ಕಾಂಗ್​​ನಲ್ಲಿ ಕೊರೊನಾ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಅದು ಅಂತಾರಾಷ್ಟ್ರೀಯ ಪ್ರಯಾಣದ ಮೇಲೆ ನಿರ್ಬಂಧ ವಿಧಿಸಿದೆ. ಏರ್​ ಇಂಡಿಯಾ ವಿಮಾನಗಳ ಹಾರಾಟವನ್ನು ಏಪ್ರಿಲ್​ 24ರವರೆಗೆ ನಿರ್ಬಂಧಿಸಿದ್ದಾಗಿ ಅಲ್ಲಿನ ಸರ್ಕಾರ ಹೇಳಿತ್ತು

ಮಿತಿಮೀರಿದ ಕೊವಿಡ್ 19; ಹಾಂಗ್​ಕಾಂಗ್​​ಗೆ ವಿಮಾನ ಸಂಚಾರ ರದ್ದುಗೊಳಿಸಿದ ಏರ್​ಇಂಡಿಯಾ ವಿಮಾನಯಾನ ಸಂಸ್ಥೆ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Apr 18, 2022 | 10:57 AM

ಚೀನಾದ ಶಾಂಘೈ, ಹಾಂಗ್​ಕಾಂಗ್​​ಗಳಲ್ಲೆಲ್ಲ ಕೊವಿಡ್​ 19 ಸಿಕ್ಕಾಪಟೆ ಹೆಚ್ಚಿದೆ. ಸ್ಥಳೀಯವಾಗಿ ಕಠಿಣ ನಿರ್ಬಂಧ ಹೇರಲಾಗಿದೆ. ಈ ಮಧ್ಯೆ ಏರ್​ ಇಂಡಿಯಾ ವಿಮಾನ ಯಾನ ಸಂಸ್ಥೆ, ಹಾಂಗ್​​ಕಾಂಗ್​ಗೆ ಸಂಚಾರ ಮಾಡುತ್ತಿದ್ದ ವಿಮಾನಗಳನ್ನು ರದ್ದುಗೊಳಿಸಿದೆ. ಅಂದರೆ ಮುಂದಿನ ನಿರ್ಣಯದವರೆಗೆ ಹಾಂಗ್​​ಕಾಂಗ್​​ಗೆ ಏರ್​ ಇಂಡಿಯಾದ ಯಾವುದೇ ವಿಮಾನಗಳೂ ಸಂಚಾರ ಮಾಡುವುದಿಲ್ಲ. ಈ ಬಗ್ಗೆ ಟ್ವೀಟ್ ಮಾಡಿರುವ ಏರ್​ ಇಂಡಿಯಾ, ಹಾಂಗ್​ಕಾಂಗ್​ನಲ್ಲಿ ಕೊವಿಡ್​ 19 ಪ್ರಕರಣಗಳು ಹೆಚ್ಚಾಗಿರುವ ಕಾರಣ ಅಲ್ಲಿನ ಆಡಳಿತ ಕಠಿಣ ನಿರ್ಬಂಧಗಳನ್ನು ಹೇರಿದೆ.  ಹೀಗಾಗಿ ನಮ್ಮ ವಿಮಾನವೂ ಅಲ್ಲಿಗೆ ಸಂಚಾರ ಮಾಡುವುದಿಲ್ಲ ಎಂದು ಹೇಳಿದೆ.

ಹಾಂಗ್​ಕಾಂಗ್​​ನಲ್ಲಿ ಕೊರೊನಾ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಅದು ಅಂತಾರಾಷ್ಟ್ರೀಯ ಪ್ರಯಾಣದ ಮೇಲೆ ನಿರ್ಬಂಧ ವಿಧಿಸಿದೆ. ಏರ್​ ಇಂಡಿಯಾ ವಿಮಾನಗಳ ಹಾರಾಟವನ್ನು ಏಪ್ರಿಲ್​ 24ರವರೆಗೆ ನಿರ್ಬಂಧಿಸಿದ್ದಾಗಿ ಅಲ್ಲಿನ ಸರ್ಕಾರ ಹೇಳಿತ್ತು. ಅಷ್ಟೇ ಅಲ್ಲ, ಭಾರತದಿಂದ ಹಾಂಗ್​ಕಾಂಗ್​ಗೆ ಪ್ರವೇಶ ಮಾಡಬೇಕು ಎಂದರೆ 48 ಗಂಟೆಯ ಮೊದಲು ಕೊವಿಡ್​ 19  ತಪಾಸಣೆ ಮಾಡಿಸಬೇಕು. ಅದರ ವರದಿ ನೆಗೆಟಿವ್​ ಬಂದಿರಬೇಕು ಎಂದೂ ಹಾಂಗ್​ಕಾಂಗ್​ ಸರ್ಕಾರ ಹೇಳಿದೆ.

ಏಪ್ರಿಲ್​ 16ರಂದು ದೆಹಲಿಯಿಂದ ಕೋಲ್ಕತ್ತ ಮಾರ್ಗವಾಗಿ ಹಾಂಗ್​ ಕಾಂಗ್​ ತಲುಪಿದ್ದ ಏರ್​ ಇಂಡಿಯಾದ AI316 ವಿಮಾನದಲ್ಲಿ ಪ್ರಯಾಣಿಸಿದ್ದ ಮೂವರಲ್ಲಿ ಕೊರೊನಾ ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಹಾಂಗ್​ಕಾಂಗ್ ಏರ್​ ಇಂಡಿಯಾ ಫ್ಲೈಟ್​ಗಳಿಗೆ ನಿರ್ಬಂಧ ವಿಧಿಸಿದೆ. ಜನವರಿಯಲ್ಲೂ ಕೂಡ ಭಾರತ ಸೇರಿ ಒಟ್ಟು 8 ದೇಶಗಳ ವಿಮಾನಗಳು ಹಾಂಗ್​ ಕಾಂಗ್​ ಪ್ರವೇಶ ಮಾಡುವುದನ್ನು ನಿರ್ಬಂಧಿಸಲಾಗಿತ್ತು.

ಇದನ್ನೂ ಓದಿ: ಜನ ತಿರಸ್ಕರಿಸಿದ ಪಕ್ಷಗಳಿಂದ ಇನ್ನೇನು ಮಾಡಲು ಸಾಧ್ಯ: ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಜೆಪಿ ನಡ್ಡಾ

Published On - 9:50 am, Mon, 18 April 22

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ