AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿತಿಮೀರಿದ ಕೊವಿಡ್ 19; ಹಾಂಗ್​ಕಾಂಗ್​​ಗೆ ವಿಮಾನ ಸಂಚಾರ ರದ್ದುಗೊಳಿಸಿದ ಏರ್​ಇಂಡಿಯಾ ವಿಮಾನಯಾನ ಸಂಸ್ಥೆ

ಹಾಂಗ್​ಕಾಂಗ್​​ನಲ್ಲಿ ಕೊರೊನಾ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಅದು ಅಂತಾರಾಷ್ಟ್ರೀಯ ಪ್ರಯಾಣದ ಮೇಲೆ ನಿರ್ಬಂಧ ವಿಧಿಸಿದೆ. ಏರ್​ ಇಂಡಿಯಾ ವಿಮಾನಗಳ ಹಾರಾಟವನ್ನು ಏಪ್ರಿಲ್​ 24ರವರೆಗೆ ನಿರ್ಬಂಧಿಸಿದ್ದಾಗಿ ಅಲ್ಲಿನ ಸರ್ಕಾರ ಹೇಳಿತ್ತು

ಮಿತಿಮೀರಿದ ಕೊವಿಡ್ 19; ಹಾಂಗ್​ಕಾಂಗ್​​ಗೆ ವಿಮಾನ ಸಂಚಾರ ರದ್ದುಗೊಳಿಸಿದ ಏರ್​ಇಂಡಿಯಾ ವಿಮಾನಯಾನ ಸಂಸ್ಥೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Apr 18, 2022 | 10:57 AM

Share

ಚೀನಾದ ಶಾಂಘೈ, ಹಾಂಗ್​ಕಾಂಗ್​​ಗಳಲ್ಲೆಲ್ಲ ಕೊವಿಡ್​ 19 ಸಿಕ್ಕಾಪಟೆ ಹೆಚ್ಚಿದೆ. ಸ್ಥಳೀಯವಾಗಿ ಕಠಿಣ ನಿರ್ಬಂಧ ಹೇರಲಾಗಿದೆ. ಈ ಮಧ್ಯೆ ಏರ್​ ಇಂಡಿಯಾ ವಿಮಾನ ಯಾನ ಸಂಸ್ಥೆ, ಹಾಂಗ್​​ಕಾಂಗ್​ಗೆ ಸಂಚಾರ ಮಾಡುತ್ತಿದ್ದ ವಿಮಾನಗಳನ್ನು ರದ್ದುಗೊಳಿಸಿದೆ. ಅಂದರೆ ಮುಂದಿನ ನಿರ್ಣಯದವರೆಗೆ ಹಾಂಗ್​​ಕಾಂಗ್​​ಗೆ ಏರ್​ ಇಂಡಿಯಾದ ಯಾವುದೇ ವಿಮಾನಗಳೂ ಸಂಚಾರ ಮಾಡುವುದಿಲ್ಲ. ಈ ಬಗ್ಗೆ ಟ್ವೀಟ್ ಮಾಡಿರುವ ಏರ್​ ಇಂಡಿಯಾ, ಹಾಂಗ್​ಕಾಂಗ್​ನಲ್ಲಿ ಕೊವಿಡ್​ 19 ಪ್ರಕರಣಗಳು ಹೆಚ್ಚಾಗಿರುವ ಕಾರಣ ಅಲ್ಲಿನ ಆಡಳಿತ ಕಠಿಣ ನಿರ್ಬಂಧಗಳನ್ನು ಹೇರಿದೆ.  ಹೀಗಾಗಿ ನಮ್ಮ ವಿಮಾನವೂ ಅಲ್ಲಿಗೆ ಸಂಚಾರ ಮಾಡುವುದಿಲ್ಲ ಎಂದು ಹೇಳಿದೆ.

ಹಾಂಗ್​ಕಾಂಗ್​​ನಲ್ಲಿ ಕೊರೊನಾ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಅದು ಅಂತಾರಾಷ್ಟ್ರೀಯ ಪ್ರಯಾಣದ ಮೇಲೆ ನಿರ್ಬಂಧ ವಿಧಿಸಿದೆ. ಏರ್​ ಇಂಡಿಯಾ ವಿಮಾನಗಳ ಹಾರಾಟವನ್ನು ಏಪ್ರಿಲ್​ 24ರವರೆಗೆ ನಿರ್ಬಂಧಿಸಿದ್ದಾಗಿ ಅಲ್ಲಿನ ಸರ್ಕಾರ ಹೇಳಿತ್ತು. ಅಷ್ಟೇ ಅಲ್ಲ, ಭಾರತದಿಂದ ಹಾಂಗ್​ಕಾಂಗ್​ಗೆ ಪ್ರವೇಶ ಮಾಡಬೇಕು ಎಂದರೆ 48 ಗಂಟೆಯ ಮೊದಲು ಕೊವಿಡ್​ 19  ತಪಾಸಣೆ ಮಾಡಿಸಬೇಕು. ಅದರ ವರದಿ ನೆಗೆಟಿವ್​ ಬಂದಿರಬೇಕು ಎಂದೂ ಹಾಂಗ್​ಕಾಂಗ್​ ಸರ್ಕಾರ ಹೇಳಿದೆ.

ಏಪ್ರಿಲ್​ 16ರಂದು ದೆಹಲಿಯಿಂದ ಕೋಲ್ಕತ್ತ ಮಾರ್ಗವಾಗಿ ಹಾಂಗ್​ ಕಾಂಗ್​ ತಲುಪಿದ್ದ ಏರ್​ ಇಂಡಿಯಾದ AI316 ವಿಮಾನದಲ್ಲಿ ಪ್ರಯಾಣಿಸಿದ್ದ ಮೂವರಲ್ಲಿ ಕೊರೊನಾ ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಹಾಂಗ್​ಕಾಂಗ್ ಏರ್​ ಇಂಡಿಯಾ ಫ್ಲೈಟ್​ಗಳಿಗೆ ನಿರ್ಬಂಧ ವಿಧಿಸಿದೆ. ಜನವರಿಯಲ್ಲೂ ಕೂಡ ಭಾರತ ಸೇರಿ ಒಟ್ಟು 8 ದೇಶಗಳ ವಿಮಾನಗಳು ಹಾಂಗ್​ ಕಾಂಗ್​ ಪ್ರವೇಶ ಮಾಡುವುದನ್ನು ನಿರ್ಬಂಧಿಸಲಾಗಿತ್ತು.

ಇದನ್ನೂ ಓದಿ: ಜನ ತಿರಸ್ಕರಿಸಿದ ಪಕ್ಷಗಳಿಂದ ಇನ್ನೇನು ಮಾಡಲು ಸಾಧ್ಯ: ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಜೆಪಿ ನಡ್ಡಾ

Published On - 9:50 am, Mon, 18 April 22

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ