AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India: ಕೇಂದ್ರ ಸಚಿವರಿದ್ದ ಏರ್ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಪಕ್ಷಿ; ತಪ್ಪಿದ ಭಾರೀ ದುರಂತ

ಕೇಂದ್ರ ಸಚಿವ ಸಂಪುಟದ ಸಭೆಗೆ ತೆರಳಲು ದೆಹಲಿಗೆ ಹೊರಟಿದ್ದ ಕೇಂದ್ರ ಸರ್ಕಾರದ ರಾಜ್ಯ ಸಚಿವರಾದ ರೇಣುಕ ಸಿಂಗ್ ಕೂಡ ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.

Air India: ಕೇಂದ್ರ ಸಚಿವರಿದ್ದ ಏರ್ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಪಕ್ಷಿ; ತಪ್ಪಿದ ಭಾರೀ ದುರಂತ
ಏರ್ ಇಂಡಿಯಾ ವಿಮಾನ
TV9 Web
| Edited By: |

Updated on: Sep 14, 2021 | 1:50 PM

Share

ನವದೆಹಲಿ: ಛತ್ತೀಸ್​ಗಢದಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆಗುವಾಗ ಪಕ್ಷಿಗೆ ಡಿಕ್ಕಿ ಹೊಡೆದ ಪರಿಣಾಮ ಮತ್ತೆ ಏರ್​ಪೋರ್ಟ್​ನಲ್ಲಿ ಲ್ಯಾಂಡ್ ಆಗಿದೆ. ಛತ್ತೀಸ್​ಗಢದ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ರಾಯ್ಪುರದಲ್ಲಿ ವಿಮಾನ ನಿಲ್ದಾಣಕ್ಕೆ ವಾಪಾಸ್ ಬಂದಿರುವ ಏರ್ ಇಂಡಿಯಾ ವಿಮಾನ ಕ್ಯಾನ್ಸಲ್ ಆಗಿದೆ. ಈ ವಿಮಾನದಲ್ಲಿ ಕೇಂದ್ರ ಸಚಿವರಾದ ರೇಣುಕ ಸಿಂಗ್ ಕೂಡ ಇದ್ದರು.

ಕೇಂದ್ರ ಸಚಿವ ಸಂಪುಟದ ಸಭೆಗೆ ತೆರಳಲು ದೆಹಲಿಗೆ ಹೊರಟಿದ್ದ ಕೇಂದ್ರ ಸರ್ಕಾರದ ರಾಜ್ಯ ಸಚಿವರಾದ ರೇಣುಕ ಸಿಂಗ್ ಕೂಡ ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಏರ್ ಇಂಡಿಯಾ ವಿಮಾನದ ರೆಕ್ಕೆಗೆ ಪಕ್ಷಿ ಡಿಕ್ಕಿ ಹೊಡೆದ ಪರಿಣಾಮ ಬೇರೆ ವಿಮಾನದಲ್ಲಿ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಟೇಕಾಫ್ ವೇಳೆಯಲ್ಲೇ ಪಕ್ಷಿ ಡಿಕ್ಕಿ ಹೊಡೆದಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ತಕ್ಷಣ ವಿಮಾನವನ್ನು ನಿಯಂತ್ರಣ ಮಾಡಿದ ಪೈಲಟ್ ರನ್​ವೇಯಲ್ಲೇ ವಿಮಾನವನ್ನು ಲ್ಯಾಂಡ್ ಮಾಡಿದ್ದಾರೆ.

ಈ ಏರ್ ಇಂಡಿಯಾ ವಿಮಾನದಲ್ಲಿ 179 ಪ್ರಯಾಣಿಕರಿದ್ದರು. ಇಂದು ಬೆಳಗ್ಗೆ 10.5ಕ್ಕೆ ಛತ್ತೀಸ್​ಗಢದ ರಾಯ್ಪುರ ಏರ್​ಪೋರ್ಟ್​ನಿಂದ ದೆಹಲಿಗೆ ಹೊರಟಿದ್ದ ವಿಮಾನಕ್ಕೆ ಪಕ್ಷಿ ಡಿಕ್ಕಿ ಹೊಡೆದಿದ್ದರಿಂದ ಟೇಕಾಫ್ ಆಗುತ್ತಿದ್ದ ವಿಮಾನವನ್ನು ಮತ್ತೆ ರನ್​ವೇಯಿಂದ ವಾಪಾಸ್ ಕರೆತರಲಾಗಿತ್ತು. ವಿಮಾನಕ್ಕೆ ಡಿಕ್ಕಿ ಹೊಡೆದ ಪಕ್ಷಿ ಸತ್ತು ಬಿದ್ದಿದೆ. ವಿಮಾನಕ್ಕೆ ಯಾವ ತೊಂದರೆಗಳಾಗಿವೆ, ಏನಾದರೂ ಡ್ಯಾಮೇಜ್ ಆಗಿದೆಯಾ? ಎಂದು ಏರ್ ಇಂಡಿಯಾ ಸಿಬ್ಬಂದಿ ಪರಿಶೀಲಿಸುತ್ತಿರುವುದರಿಂದ ವಿಮಾನ ಸಂಚಾರವನ್ನು ರದ್ದುಗೊಳಿಸಲಾಯಿತು.

ಇದನ್ನೂ ಓದಿ: Air India Flight: ವಿಮಾನದ ಕಿಟಕಿಯಲ್ಲಿ ಬಿರುಕು; ಸೌದಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್​ಪ್ರೆಸ್​ ತುರ್ತು ಭೂಸ್ಪರ್ಶ

Air India data breach: ಏರ್​ಇಂಡಿಯಾದ 45 ಲಕ್ಷ ಪ್ರಯಾಣಿಕರ ಮಾಹಿತಿ ಸೋರಿಕೆ ಆಗಿದ್ದು ಹೇಗೆ?

(Delhi-Bound Air India Flight Cancels after Bird-Hit before Takeoff from Raipur Airport)

ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ