AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India: ಕೇಂದ್ರ ಸಚಿವರಿದ್ದ ಏರ್ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಪಕ್ಷಿ; ತಪ್ಪಿದ ಭಾರೀ ದುರಂತ

ಕೇಂದ್ರ ಸಚಿವ ಸಂಪುಟದ ಸಭೆಗೆ ತೆರಳಲು ದೆಹಲಿಗೆ ಹೊರಟಿದ್ದ ಕೇಂದ್ರ ಸರ್ಕಾರದ ರಾಜ್ಯ ಸಚಿವರಾದ ರೇಣುಕ ಸಿಂಗ್ ಕೂಡ ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.

Air India: ಕೇಂದ್ರ ಸಚಿವರಿದ್ದ ಏರ್ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಪಕ್ಷಿ; ತಪ್ಪಿದ ಭಾರೀ ದುರಂತ
ಏರ್ ಇಂಡಿಯಾ ವಿಮಾನ
TV9 Web
| Updated By: ಸುಷ್ಮಾ ಚಕ್ರೆ|

Updated on: Sep 14, 2021 | 1:50 PM

Share

ನವದೆಹಲಿ: ಛತ್ತೀಸ್​ಗಢದಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆಗುವಾಗ ಪಕ್ಷಿಗೆ ಡಿಕ್ಕಿ ಹೊಡೆದ ಪರಿಣಾಮ ಮತ್ತೆ ಏರ್​ಪೋರ್ಟ್​ನಲ್ಲಿ ಲ್ಯಾಂಡ್ ಆಗಿದೆ. ಛತ್ತೀಸ್​ಗಢದ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ರಾಯ್ಪುರದಲ್ಲಿ ವಿಮಾನ ನಿಲ್ದಾಣಕ್ಕೆ ವಾಪಾಸ್ ಬಂದಿರುವ ಏರ್ ಇಂಡಿಯಾ ವಿಮಾನ ಕ್ಯಾನ್ಸಲ್ ಆಗಿದೆ. ಈ ವಿಮಾನದಲ್ಲಿ ಕೇಂದ್ರ ಸಚಿವರಾದ ರೇಣುಕ ಸಿಂಗ್ ಕೂಡ ಇದ್ದರು.

ಕೇಂದ್ರ ಸಚಿವ ಸಂಪುಟದ ಸಭೆಗೆ ತೆರಳಲು ದೆಹಲಿಗೆ ಹೊರಟಿದ್ದ ಕೇಂದ್ರ ಸರ್ಕಾರದ ರಾಜ್ಯ ಸಚಿವರಾದ ರೇಣುಕ ಸಿಂಗ್ ಕೂಡ ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಏರ್ ಇಂಡಿಯಾ ವಿಮಾನದ ರೆಕ್ಕೆಗೆ ಪಕ್ಷಿ ಡಿಕ್ಕಿ ಹೊಡೆದ ಪರಿಣಾಮ ಬೇರೆ ವಿಮಾನದಲ್ಲಿ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಟೇಕಾಫ್ ವೇಳೆಯಲ್ಲೇ ಪಕ್ಷಿ ಡಿಕ್ಕಿ ಹೊಡೆದಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ತಕ್ಷಣ ವಿಮಾನವನ್ನು ನಿಯಂತ್ರಣ ಮಾಡಿದ ಪೈಲಟ್ ರನ್​ವೇಯಲ್ಲೇ ವಿಮಾನವನ್ನು ಲ್ಯಾಂಡ್ ಮಾಡಿದ್ದಾರೆ.

ಈ ಏರ್ ಇಂಡಿಯಾ ವಿಮಾನದಲ್ಲಿ 179 ಪ್ರಯಾಣಿಕರಿದ್ದರು. ಇಂದು ಬೆಳಗ್ಗೆ 10.5ಕ್ಕೆ ಛತ್ತೀಸ್​ಗಢದ ರಾಯ್ಪುರ ಏರ್​ಪೋರ್ಟ್​ನಿಂದ ದೆಹಲಿಗೆ ಹೊರಟಿದ್ದ ವಿಮಾನಕ್ಕೆ ಪಕ್ಷಿ ಡಿಕ್ಕಿ ಹೊಡೆದಿದ್ದರಿಂದ ಟೇಕಾಫ್ ಆಗುತ್ತಿದ್ದ ವಿಮಾನವನ್ನು ಮತ್ತೆ ರನ್​ವೇಯಿಂದ ವಾಪಾಸ್ ಕರೆತರಲಾಗಿತ್ತು. ವಿಮಾನಕ್ಕೆ ಡಿಕ್ಕಿ ಹೊಡೆದ ಪಕ್ಷಿ ಸತ್ತು ಬಿದ್ದಿದೆ. ವಿಮಾನಕ್ಕೆ ಯಾವ ತೊಂದರೆಗಳಾಗಿವೆ, ಏನಾದರೂ ಡ್ಯಾಮೇಜ್ ಆಗಿದೆಯಾ? ಎಂದು ಏರ್ ಇಂಡಿಯಾ ಸಿಬ್ಬಂದಿ ಪರಿಶೀಲಿಸುತ್ತಿರುವುದರಿಂದ ವಿಮಾನ ಸಂಚಾರವನ್ನು ರದ್ದುಗೊಳಿಸಲಾಯಿತು.

ಇದನ್ನೂ ಓದಿ: Air India Flight: ವಿಮಾನದ ಕಿಟಕಿಯಲ್ಲಿ ಬಿರುಕು; ಸೌದಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್​ಪ್ರೆಸ್​ ತುರ್ತು ಭೂಸ್ಪರ್ಶ

Air India data breach: ಏರ್​ಇಂಡಿಯಾದ 45 ಲಕ್ಷ ಪ್ರಯಾಣಿಕರ ಮಾಹಿತಿ ಸೋರಿಕೆ ಆಗಿದ್ದು ಹೇಗೆ?

(Delhi-Bound Air India Flight Cancels after Bird-Hit before Takeoff from Raipur Airport)

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!