AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಇಂಡಿಯಾ ಡ್ರೀಮ್‌ಲೈನರ್​ನಲ್ಲಿ ಮತ್ತೆ ಇಂಧನದ ಸ್ವಿಚ್ ಸಮಸ್ಯೆ; ಲಂಡನ್-ಬೆಂಗಳೂರು ವಿಮಾನ ಹಾರಾಟ ಸ್ಥಗಿತ

ಕಳೆದ ವರ್ಷ ಅಹಮದಾಬಾದ್​ನಲ್ಲಿ ನಡೆದ ಏರ್ ಇಂಡಿಯಾ ವಿಮಾನದ ಅಪಘಾತವನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಆ ವಿಮಾನ ದುರಂತ 260 ಜನರನ್ನು ಬಲಿತೆಗೆದುಕೊಂಡಿತ್ತು. ಇದೀಗ ಇಂದು ಸಂಜೆ ಏರ್ ಇಂಡಿಯಾ ಡ್ರೀಮ್​ಲೈನರ್ ವಿಮಾನದಲ್ಲಿ ಮತ್ತೆ ಇಂಧನದ ಸ್ವಿಚ್ ಸಮಸ್ಯೆಯಾಗಿದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಆ ವಿಮಾನದ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಈ ವಿಮಾನ ಲಂಡನ್​​ನಿಂದ ಬೆಂಗಳೂರಿಗೆ ಹೊರಟಿತ್ತು.

ಏರ್ ಇಂಡಿಯಾ ಡ್ರೀಮ್‌ಲೈನರ್​ನಲ್ಲಿ ಮತ್ತೆ ಇಂಧನದ ಸ್ವಿಚ್ ಸಮಸ್ಯೆ; ಲಂಡನ್-ಬೆಂಗಳೂರು ವಿಮಾನ ಹಾರಾಟ ಸ್ಥಗಿತ
Air India
ಸುಷ್ಮಾ ಚಕ್ರೆ
|

Updated on:Feb 02, 2026 | 9:41 PM

Share

ಬೆಂಗಳೂರು, ಫೆಬ್ರವರಿ 2: ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ಸಮಸ್ಯೆ ಪತ್ತೆಯಾದ ನಂತರ ಏರ್ ಇಂಡಿಯಾ (Air India) ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದ ಹಾರಾಟವನ್ನು ಇಂದು ಸ್ಥಗಿತಗೊಳಿಸಲಾಗಿದೆ. ಈ ವಿಮಾನ ಲಂಡನ್​​ನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟಿತ್ತು. AI 132 ವಿಮಾನವು ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹಾರುತ್ತಿತ್ತು. ಈ ವೇಳೆ ಪೈಲಟ್ ವಿಮಾನದ ಕಾರ್ಯವಿಧಾನವನ್ನು ಪರಿಶೀಲಿಸುವಾಗ ಫ್ಯೂಯೆಲ್ ಕಂಟ್ರೋಲ್ ಸ್ವಿಚ್​​ನಲ್ಲಿ ಸಮಸ್ಯೆ ಕಂಡುಬಂದಿತ್ತು. ತಕ್ಷಣ ಅವರು ಏರ್ ಇಂಡಿಯಾ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ತಕ್ಷಣ ಎಚ್ಚೆತ್ತುಕೊಂಡು ಅಧಿಕಾರಿಗಳು ಆ ವಿಮಾನದ ಹಾರಾಟವನ್ನು ರದ್ದುಗೊಳಿಸಿದ್ದಾರೆ.

2025ರಲ್ಲಿ ಅಹಮದಾಬಾದ್​​ನಲ್ಲಿ ನಡೆದ ಏರ್ ಇಂಡಿಯಾ ಡ್ರೀಮ್​ಲೈನರ್ ವಿಮಾನದ ಅಪಘಾತ ನಿಮಗೆ ನೆನಪಿರಬಹುದು. ಆ ದುರಂತದಲ್ಲಿ 260 ಜನರು ಮೃತಪಟ್ಟಿದ್ದರು. ಆ ವಿಮಾನದಲ್ಲಿ ಕೂಡ ಫ್ಯೂಯೆಲ್ ಸ್ವಿಚ್ ಸಮಸ್ಯೆಯಿಂದಲೇ ಅಪಘಾತ ಸಂಭವಿಸಿತ್ತು ಎಂಬುದು ವರದಿಯಲ್ಲಿ ಬಹಿರಂಗವಾಗಿತ್ತು. ಹೀಗಾಗಿ, ಇದೀಗ ಮತ್ತೆ ಅದೇ ಮಾದರಿಯ ಏರ್ ಇಂಡಿಯಾ ಡ್ರೀಮ್​​ಲೈನರ್ ಬೋಯಿಂಗ್ ವಿಮಾನದಲ್ಲಿ ಫ್ಯೂಯೆಲ್ ಸ್ವಿಚ್ ಸಮಸ್ಯೆ ಉಂಟಾಗಿದ್ದರಿಂದ ಇದನ್ನು ಗಂಭೀರವಾಗಿ ಪರಿಗಣಿಸಿದ ವಿಮಾನಯಾನ ಸಿಬ್ಬಂದಿ ಆ ವಿಮಾನದ ಹಾರಾಟವನ್ನು ಸ್ಥಗಿತಗೊಳಿಸಿದ್ದಾರೆ.

ಇದನ್ನೂ ಓದಿ: ಏರ್ ಇಂಡಿಯಾ, ಇಂಡಿಗೋ ವಿಮಾನಗಳಿಗೆ ಬಾಂಬ್ ಬೆದರಿಕೆ; 5 ಏರ್​ಪೋರ್ಟ್​ಗಳಲ್ಲಿ ಹೈ ಅಲರ್ಟ್

ಈ ಬಗ್ಗೆ ಏರ್ ಇಂಡಿಯಾ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ನಮ್ಮ ಪೈಲಟ್​ಗಳಲ್ಲಿ ಒಬ್ಬರು ಫ್ಯೂಯೆಲ್ ಕಂಟ್ರೋಲ್ ಸ್ವಿಚ್​​ನಲ್ಲಿ ಸಮಸ್ಯೆ ಇರುವ ಬಗ್ಗೆ ಮಾಹಿತಿ ನೀಡಿದ ಕೂಡಲೆ ಆ ವಿಮಾನದ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ. ಹೀಗಾಗಿ, ಈ ಬಗ್ಗೆ ಡಿಜಿಸಿಎಗೂ ಮಾಹಿತಿ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆದರೆ, ಸಂಪೂರ್ಣ ಪರಿಶೀಲನೆಯ ನಂತರ ಆ ವಿಮಾನದಲ್ಲಿ ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ ಎಂದು ಏರ್ ಇಂಡಿಯಾ ಅಧಿಕಾರಿ ತಿಳಿಸಿದ್ದಾರೆ. ಈ ಪರಿಸ್ಥಿತಿಯ ಬಗ್ಗೆ ನಾಗರಿಕ ವಿಮಾನಯಾನ ನಿಯಂತ್ರಕವಾದ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA)ಕ್ಕೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ; ಪ್ರಯಾಣಿಕರು ಸೇಫ್

“DGCA ನಿರ್ದೇಶನದ ನಂತರ ಏರ್ ಇಂಡಿಯಾ ತನ್ನ ಫ್ಲೀಟ್‌ನಲ್ಲಿರುವ ಎಲ್ಲಾ ಬೋಯಿಂಗ್ 787 ವಿಮಾನಗಳ ಇಂಧನ ನಿಯಂತ್ರಣ ಸ್ವಿಚ್‌ಗಳನ್ನು ಪರಿಶೀಲಿಸಿದೆ. ಅದರಲ್ಲಿ ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ. ಏರ್ ಇಂಡಿಯಾದಲ್ಲಿ ನಮ್ಮ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯು ಪ್ರಮುಖ ಆದ್ಯತೆಯಾಗಿದೆ” ಎಂದು ಏರ್ ಇಂಡಿಯಾ ಹೇಳಿದೆ.

ಈ ಘಟನೆಯು ಜುಲೈ 2025 ರಲ್ಲಿ ಗುಜರಾತ್‌ನ ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ 241 ಪ್ರಯಾಣಿಕರು ಸೇರಿದಂತೆ 260 ಜನರನ್ನು ಬಲಿತೆಗೆದುಕೊಂಡ ಏರ್ ಇಂಡಿಯಾ ಡ್ರೀಮ್‌ಲೈನರ್ ಅಪಘಾತದ ನೆನಪುಗಳನ್ನು ಮರಳಿ ತಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:23 pm, Mon, 2 February 26

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?