AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ; ವಜಾ ಆದೇಶ ಹಿಂಪಡೆದ ಕಂಪನಿ

ಅನುಮತಿ ಕೇಳದೆ ರಜೆ ಹಾಕಿದ್ದರಿಂದ ಬುಧವಾರ ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 30 ಉದ್ಯೋಗಿಗಳನ್ನು ಸಾಮೂಹಿಕವಾಗಿ ಕೆಲಸದಿಂದ ವಜಾಗೊಳಿಸಲಾಗಿತ್ತು. ಇದರಿಂದ ಆಕ್ರೋಶಗೊಂಡಿದ್ದ ಏರ್ ಇಂಡಿಯಾ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದರು. ಇದೀಗ ಅವರ ಪ್ರತಿಭಟನೆಗೆ ಏರ್ ಇಂಡಿಯಾ ಸಂಸ್ಥೆ ಮಣಿದಿದೆ.

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ; ವಜಾ ಆದೇಶ ಹಿಂಪಡೆದ ಕಂಪನಿ
ಏರ್ ಇಂಡಿಯಾ
ಸುಷ್ಮಾ ಚಕ್ರೆ
|

Updated on: May 09, 2024 | 8:53 PM

Share

ನವದೆಹಲಿ: ಏರ್ ಇಂಡಿಯಾ (Air India) ವಿಮಾನ ಸಂಸ್ಥೆ ತನ್ನ 30 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿತ್ತು. ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಸಂಸ್ಥೆ ತನ್ನ ಸಿಬ್ಬಂದಿಯ ವಿರುದ್ಧ ಶಿಸ್ತು ಕ್ರಮ ಕೈಗೊಂಡಿತ್ತು. ಬೇರೆಯವರಿಗೂ ಇದು ಪಾಠವಾಗಬೇಕೆಂಬ ಕಾರಣಕ್ಕೆ 30 ಸಿಬ್ಬಂದಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಸಿಬ್ಬಂದಿ 2 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ವಜಾಗೊಂಡಿರುವ ಎಲ್ಲಾ ಕ್ಯಾಬಿನ್ ಸಿಬ್ಬಂದಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಒಪ್ಪಿಕೊಂಡಿದೆ.

ಇಂದು ಮಧ್ಯಾಹ್ನ 2 ಗಂಟೆಗೆ ಮುಖ್ಯ ಕಾರ್ಮಿಕ ಆಯುಕ್ತರು ಕರೆದಿದ್ದ ಸಭೆಯಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಆಡಳಿತವು ಪ್ರತಿಭಟನಾ ನಿರತ ಸಿಬ್ಬಂದಿಯನ್ನು ಭೇಟಿ ಮಾಡಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಿಬ್ಬಂದಿಯನ್ನು ವಜಾಗೊಳಿಸಿದ್ದರಿಂದ ಮಂಗಳವಾರ ರಾತ್ರಿಯಿಂದ 100ಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದವು. ಮುಂಚಿತ ಸೂಚನೆಯಿಲ್ಲದೆ ಸಾಮೂಹಿಕವಾಗಿ ಅನಾರೋಗ್ಯ ರಜೆಗೆ ತೆರಳಿದ ಕ್ಯಾಬಿನ್ ಸಿಬ್ಬಂದಿಯ ಸೇವೆಗಳನ್ನು ಕೊನೆಗೊಳಿಸುವುದಾಗಿ ಟಾಟಾ ಗ್ರೂಪ್ ಒಡೆತನದ ಏರ್‌ಲೈನ್ ಘೋಷಿಸಿದ ಕೆಲವೇ ಗಂಟೆಗಳ ನಂತರ ಈ ಕ್ರಮವು ಬಂದಿದೆ.

ಇದನ್ನೂ ಓದಿ: ಹುಷಾರಿಲ್ಲವೆಂದು ಏರ್ ಇಂಡಿಯಾದ 300 ಉದ್ಯೋಗಿಗಳ ಮೊಬೈಲ್ ಸ್ವಿಚ್ ಆಫ್; ಗಗನಸಖಿಯರು ಸೇರಿ 30 ಮಂದಿ ಲೇ ಆಫ್

ಗುರುವಾರ ಸಂಜೆ 4 ಗಂಟೆಯೊಳಗೆ ಮತ್ತೆ ಕರ್ತವ್ಯಕ್ಕೆ ಸೇರಲು ಏರ್ ಇಂಡಿಯಾ ಸೂಚನೆ ನೀಡಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಹಿರಿಯ ಸಿಬ್ಬಂದಿ ಅದೇ ಸಮಯದಲ್ಲಿ ಯಾವುದೇ ಮುನ್ಸೂಚನೆಯಿಲ್ಲದೆ ಅನಾರೋಗ್ಯದ ರಜೆಗಳನ್ನು ತೆಗೆದುಕೊಂಡ ನಂತರ ಹಲವಾರು ವಿಮಾನಗಳು ವಿಳಂಬಗೊಂಡವು, ಇನ್ನು ಕೆಲವು ರದ್ದುಗೊಂಡವು. ಇದರಿಂದ ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಸಿಲುಕಿಕೊಂಡರು.

ಇದನ್ನೂ ಓದಿ: ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು; ನಿಮ್ಮ ಫ್ಲೈಟ್ ರದ್ದಾಗಿದ್ದರೆ ಸಿಗುತ್ತೆ ರೀಫಂಡ್

ಏರ್‌ಲೈನ್ ನಂತರ ಪರಿಷ್ಕೃತ ಹಾರಾಟದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತು. ವಿಮಾನ ನಿಲ್ದಾಣಕ್ಕೆ ಹೋಗುವ ಮೊದಲು ತಮ್ಮ ವಿಮಾನವು ಅಡಚಣೆಯಿಂದ ಪ್ರಭಾವಿತವಾಗಿದೆಯೇ ಎಂದು ಪರಿಶೀಲಿಸಲು ಜನರ ಬಳಿ ಮನವಿ ಮಾಡಿತು. ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿತು. ಕ್ಯಾಬಿನ್ ಸಿಬ್ಬಂದಿಯ ಕೊರತೆಯ ನಡುವೆ ಅದರ ದೈನಂದಿನ ನಿಗದಿತ ವಿಮಾನಗಳಲ್ಲಿ ಸುಮಾರು ಶೇ. 20ರಷ್ಟು ಪರಿಣಾಮ ಬೀರಿತು.

ಏರ್ ಇಂಡಿಯಾ ಎಕ್ಸ್‌ಪ್ರೆಸ್ ಯೂನಿಯನ್ ಮತ್ತು ಕಂಪನಿಯ ಆಡಳಿತ ಮಂಡಳಿ ನಡುವೆ ಗುರುವಾರ ಸಭೆ ಕರೆಯಲಾಗಿದ್ದು, ಎರಡೂ ಕಡೆಯವರು ಸಹಕರಿಸಲು ಒಪ್ಪಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ