AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯವಾಡದಲ್ಲಿ ಲ್ಯಾಂಡಿಂಗ್​ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಏರ್​​ ಇಂಡಿಯಾ ಎಕ್ಸ್​ಪ್ರೆಸ್​ ವಿಮಾನ

ಏರ್​ ಇಂಡಿಯಾ ಎಕ್ಸ್​ಪ್ರೆಸ್​ ವಿಮಾನ ಖತಾರ್​ನ ದೋಹಾದಿಂದ ಗನ್ನಾವರಂನಲ್ಲಿರುವ ವಿಜಯವಾಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಲ್ಯಾಂಡ್​ ಆಗಿ ವಿಮಾನ ಇನ್ನೇನು ನಿಲ್ಲಬೇಕು ಎನ್ನುವಾಗ ನಿಲ್ದಾಣದಲ್ಲಿರುವ ವಿದ್ಯುತ್​ ಕಂಬಕ್ಕೆ ವಿಮಾನದ ರೆಕ್ಕೆಗೆ ತಾಗಿದೆ.

ವಿಜಯವಾಡದಲ್ಲಿ ಲ್ಯಾಂಡಿಂಗ್​ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಏರ್​​ ಇಂಡಿಯಾ ಎಕ್ಸ್​ಪ್ರೆಸ್​ ವಿಮಾನ
ಡಿಕ್ಕಿಯಾದ ವಿಮಾನ
Follow us
ರಾಜೇಶ್ ದುಗ್ಗುಮನೆ
|

Updated on:Feb 20, 2021 | 9:34 PM

ವಿಜಯವಾಡ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್​ ವೇಳೆ ವಿಮಾನದ ರೆಕ್ಕೆ ವಿದ್ಯುತ್​ ಕಂಬಕ್ಕೆ ತಾಗಿದೆ. ಇದರಿಂದ ಒಂದು ಕ್ಷಣ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಅದೃಷ್ಟವಶಾತ್​ ಯಾವುದೇ ಪ್ರಯಾಣಿಕರಿಗೆ ತೊಂದರೆ ಉಂಟಾಗಿಲ್ಲ. ಏರ್​ ಇಂಡಿಯಾ ಎಕ್ಸ್​ಪ್ರೆಸ್​ ವಿಮಾನ ಖತಾರ್​ನ ದೋಹಾದಿಂದ ಗನ್ನಾವರಂನಲ್ಲಿರುವ ವಿಜಯವಾಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಲ್ಯಾಂಡ್​ ಆಗಿ ವಿಮಾನ ಇನ್ನೇನು ನಿಲ್ಲಬೇಕು ಎನ್ನುವಾಗ ನಿಲ್ದಾಣದಲ್ಲಿರುವ ವಿದ್ಯುತ್​ ಕಂಬಕ್ಕೆ ವಿಮಾನದ ರೆಕ್ಕೆಗೆ ತಾಗಿದೆ. ತಕ್ಷಣಕ್ಕೆ ನಿಲ್ದಾಣದ ಸಿಬ್ಬಂದಿ ಬಂದು ಪ್ರಯಾಣಿಕರನ್ನು ಇಳಿಸಿದ್ದಾರೆ. ವಿಮಾನದಲ್ಲಿ ಸಿಬ್ಬಂದಿ ಸೇರಿ 64 ಜನರು ಇದ್ದರು. ಎಲ್ಲರೂ ಸುರಕ್ಷಿತವಾಗಿದ್ದಾರೆ.

ಇದೇ ಮಾದರಿಯ ಘಟನೆ ಕೇರಳದ ಕೋಳಿಕ್ಕೋಡ್​ನಲ್ಲಿ ಶುಕ್ರವಾರ ಸಂಭವಿಸಿತ್ತು. ಶಾರ್ಜಾದಿಂದ ಕೋಳಿಕ್ಕೋಡ್​ಗೆ ಬರುತ್ತಿದ್ದ ಏರ್​ ಇಂಡಿಯಾ ಎಕ್ಸ್​ಪ್ರೆಸ್​ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ, ತಿರುವನಂತಪುರದಲ್ಲಿ ವಿಮಾನವನ್ನು ಲ್ಯಾಂಡ್​ ಮಾಡಲಾಗಿತ್ತು.

ಕೋಳಿಕ್ಕೋಡ್​ ನಿಲ್ದಾಣದಲ್ಲಿ 12.40ಕ್ಕೆ ವಿಮಾನ ಲ್ಯಾಂಡ್​ ಆಗಬೇಕಿತ್ತು. ಆದರೆ, ತಾಂತ್ರಿಕ ಸಮಸ್ಯೆ ಎದುರಾದರ ನಂತರವೂ ಈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್​ ಮಾಡುವುದು ಪೈಲಟ್​ಗಳಿಗೆ ದೊಡ್ಡ ಸವಾಲಿನ ಸಂಗತಿ. ಇದೇ ಕಾರಣಕ್ಕೆ ಇಲ್ಲಿ ಸಾಕಷ್ಟು ದುರಂತಗಳು ಸಂಭವಿಸಿವೆ. ಹೀಗಾಗಿ, ತಿರುವನಂತಪುರದಲ್ಲೇ ವಿಮಾನವನ್ನು ಲ್ಯಾಂಡ್​ ಮಾಡುವಂತೆ ಸೂಚಿಸಲಾಗಿತ್ತು.

ಇದನ್ನೂ ಓದಿ: Olympian Harassed: ದೆಹಲಿಯಲ್ಲಿ ಖ್ಯಾತ ಶೂಟರ್ ಮನು ಭಾಕರ್ ವಿಮಾನ ಹತ್ತದಂತೆ ತಡೆದು ಉದ್ಧಟತನ ಮೆರೆದ ಏರ್ ಇಂಡಿಯಾ ಅಧಿಕಾರಿಗಳು

Published On - 9:19 pm, Sat, 20 February 21

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ