AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯವಾಡದಲ್ಲಿ ಲ್ಯಾಂಡಿಂಗ್​ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಏರ್​​ ಇಂಡಿಯಾ ಎಕ್ಸ್​ಪ್ರೆಸ್​ ವಿಮಾನ

ಏರ್​ ಇಂಡಿಯಾ ಎಕ್ಸ್​ಪ್ರೆಸ್​ ವಿಮಾನ ಖತಾರ್​ನ ದೋಹಾದಿಂದ ಗನ್ನಾವರಂನಲ್ಲಿರುವ ವಿಜಯವಾಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಲ್ಯಾಂಡ್​ ಆಗಿ ವಿಮಾನ ಇನ್ನೇನು ನಿಲ್ಲಬೇಕು ಎನ್ನುವಾಗ ನಿಲ್ದಾಣದಲ್ಲಿರುವ ವಿದ್ಯುತ್​ ಕಂಬಕ್ಕೆ ವಿಮಾನದ ರೆಕ್ಕೆಗೆ ತಾಗಿದೆ.

ವಿಜಯವಾಡದಲ್ಲಿ ಲ್ಯಾಂಡಿಂಗ್​ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಏರ್​​ ಇಂಡಿಯಾ ಎಕ್ಸ್​ಪ್ರೆಸ್​ ವಿಮಾನ
ಡಿಕ್ಕಿಯಾದ ವಿಮಾನ
ರಾಜೇಶ್ ದುಗ್ಗುಮನೆ
|

Updated on:Feb 20, 2021 | 9:34 PM

Share

ವಿಜಯವಾಡ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್​ ವೇಳೆ ವಿಮಾನದ ರೆಕ್ಕೆ ವಿದ್ಯುತ್​ ಕಂಬಕ್ಕೆ ತಾಗಿದೆ. ಇದರಿಂದ ಒಂದು ಕ್ಷಣ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಅದೃಷ್ಟವಶಾತ್​ ಯಾವುದೇ ಪ್ರಯಾಣಿಕರಿಗೆ ತೊಂದರೆ ಉಂಟಾಗಿಲ್ಲ. ಏರ್​ ಇಂಡಿಯಾ ಎಕ್ಸ್​ಪ್ರೆಸ್​ ವಿಮಾನ ಖತಾರ್​ನ ದೋಹಾದಿಂದ ಗನ್ನಾವರಂನಲ್ಲಿರುವ ವಿಜಯವಾಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಲ್ಯಾಂಡ್​ ಆಗಿ ವಿಮಾನ ಇನ್ನೇನು ನಿಲ್ಲಬೇಕು ಎನ್ನುವಾಗ ನಿಲ್ದಾಣದಲ್ಲಿರುವ ವಿದ್ಯುತ್​ ಕಂಬಕ್ಕೆ ವಿಮಾನದ ರೆಕ್ಕೆಗೆ ತಾಗಿದೆ. ತಕ್ಷಣಕ್ಕೆ ನಿಲ್ದಾಣದ ಸಿಬ್ಬಂದಿ ಬಂದು ಪ್ರಯಾಣಿಕರನ್ನು ಇಳಿಸಿದ್ದಾರೆ. ವಿಮಾನದಲ್ಲಿ ಸಿಬ್ಬಂದಿ ಸೇರಿ 64 ಜನರು ಇದ್ದರು. ಎಲ್ಲರೂ ಸುರಕ್ಷಿತವಾಗಿದ್ದಾರೆ.

ಇದೇ ಮಾದರಿಯ ಘಟನೆ ಕೇರಳದ ಕೋಳಿಕ್ಕೋಡ್​ನಲ್ಲಿ ಶುಕ್ರವಾರ ಸಂಭವಿಸಿತ್ತು. ಶಾರ್ಜಾದಿಂದ ಕೋಳಿಕ್ಕೋಡ್​ಗೆ ಬರುತ್ತಿದ್ದ ಏರ್​ ಇಂಡಿಯಾ ಎಕ್ಸ್​ಪ್ರೆಸ್​ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ, ತಿರುವನಂತಪುರದಲ್ಲಿ ವಿಮಾನವನ್ನು ಲ್ಯಾಂಡ್​ ಮಾಡಲಾಗಿತ್ತು.

ಕೋಳಿಕ್ಕೋಡ್​ ನಿಲ್ದಾಣದಲ್ಲಿ 12.40ಕ್ಕೆ ವಿಮಾನ ಲ್ಯಾಂಡ್​ ಆಗಬೇಕಿತ್ತು. ಆದರೆ, ತಾಂತ್ರಿಕ ಸಮಸ್ಯೆ ಎದುರಾದರ ನಂತರವೂ ಈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್​ ಮಾಡುವುದು ಪೈಲಟ್​ಗಳಿಗೆ ದೊಡ್ಡ ಸವಾಲಿನ ಸಂಗತಿ. ಇದೇ ಕಾರಣಕ್ಕೆ ಇಲ್ಲಿ ಸಾಕಷ್ಟು ದುರಂತಗಳು ಸಂಭವಿಸಿವೆ. ಹೀಗಾಗಿ, ತಿರುವನಂತಪುರದಲ್ಲೇ ವಿಮಾನವನ್ನು ಲ್ಯಾಂಡ್​ ಮಾಡುವಂತೆ ಸೂಚಿಸಲಾಗಿತ್ತು.

ಇದನ್ನೂ ಓದಿ: Olympian Harassed: ದೆಹಲಿಯಲ್ಲಿ ಖ್ಯಾತ ಶೂಟರ್ ಮನು ಭಾಕರ್ ವಿಮಾನ ಹತ್ತದಂತೆ ತಡೆದು ಉದ್ಧಟತನ ಮೆರೆದ ಏರ್ ಇಂಡಿಯಾ ಅಧಿಕಾರಿಗಳು

Published On - 9:19 pm, Sat, 20 February 21

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್