AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India Express ಏರ್​​ಇಂಡಿಯಾ ಎಕ್ಸ್​​​ಪ್ರೆಸ್​​ ವಿಮಾನದಲ್ಲಿ ಸುಟ್ಟ ವಾಸನೆ; ದುಬೈಗೆ ಹೊರಟಿದ್ದ ವಿಮಾನ ಮಸ್ಕತ್​​ನಲ್ಲಿ ಸುರಕ್ಷಿತ ಲ್ಯಾಂಡಿಂಗ್

ವಿಮಾನದ ಕಿಟಕಿ ಭಾಗದಿಂದ ಈ ಸುಟ್ಟ ವಾಸನೆ ಬಂದಿದ್ದು, ಪೈಲಟ್ ತಕ್ಷಣವೇ ವಿಮಾನವನ್ನು ಮಸ್ಕತ್​​ಗೆ ಡೈವರ್ಟ್ ಮಾಡಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ.

Air India Express ಏರ್​​ಇಂಡಿಯಾ ಎಕ್ಸ್​​​ಪ್ರೆಸ್​​ ವಿಮಾನದಲ್ಲಿ ಸುಟ್ಟ ವಾಸನೆ; ದುಬೈಗೆ ಹೊರಟಿದ್ದ ವಿಮಾನ ಮಸ್ಕತ್​​ನಲ್ಲಿ ಸುರಕ್ಷಿತ ಲ್ಯಾಂಡಿಂಗ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 17, 2022 | 3:20 PM

ಕ್ಯಾಲಿಕಟ್​​ನಿಂದ ದುಬೈಗೆ ಹೊರಟಿದ್ದ ಏರ್​​ಇಂಡಿಯಾ ಎಕ್ಸ್​​​ಪ್ರೆಸ್ ​​( Air India Express) ವಿಮಾನದಲ್ಲಿ ಸುಟ್ಟ ವಾಸನೆ ಬಂದಿದ್ದು ಆ ವಿಮಾನ ಮಾರ್ಗ ಬದಲಿಸಿ ಮಸ್ಕತ್​​ಗೆ ಪಯಣ ಬೆಳೆಸಿದೆ. ಶನಿವಾರ ರಾತ್ರಿ ಈ ಘಟನೆ ನಡೆದಿದೆ. ವಿಮಾನದ ಕಿಟಕಿ ಭಾಗದಿಂದ ಈ ಸುಟ್ಟ ವಾಸನೆ ಬಂದಿದ್ದು, ಪೈಲಟ್ ತಕ್ಷಣವೇ ವಿಮಾನವನ್ನು ಮಸ್ಕತ್​​ಗೆ ಡೈವರ್ಟ್ ಮಾಡಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ. ಪೈಲಟ್ ಕಡೆಗಿರುವ ಕಿಟಕಿಯೊಂದರಿಂದ ಸುಟ್ಟ ವಾಸನೆ ಬರುತ್ತಿತ್ತು. ತಕ್ಷಣವೇ ಪೈಲಟ್ ವಿಮಾನವನ್ನು ಮಸ್ಕತ್ ಗೆ ತಿರುಗಿಸಿ ಅಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ  ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA)  ಭಾನುವಾರ ಹೇಳಿದೆ. ಈ ಬಗ್ಗೆ ಡಿಜಿಸಿಎ ತನಿಖೆ ನಡೆಸುತ್ತಿದೆ.

ಇನ್ನೊಂದು ಘಟನೆಯಲ್ಲಿ ಇಂಡಿಗೊದ ಶಾರ್ಜಾ- ಹೈದರಾಬಾದ್ ವಿಮಾನದಲ್ಲಿನ ಎಂಜಿನ್​​ನಲ್ಲಿ ತಾಂತ್ರಿಕ ದೋಷವೊಂದು ಕಂಡುಬಂದ ಹಿನ್ನಲೆಯಲ್ಲಿ ಆ ವಿಮಾನವನ್ನು ಕರಾಚಿಗೆ ಡೈವರ್ಟ್ ಮಾಡಲಾಗಿದೆ. ಈ ಬಗ್ಗೆಯೂ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ತನಿಖೆ ನಡೆಸಲಿದೆ.  ಶಾರ್ಜಾದಿಂದ ಹೈದರಾಬಾದ್ ಗೆ ಬರುತ್ತಿದ್ದ ಇಂಡಿಗೊ ವಿಮಾನ 6E-1406ವನ್ನು ಕರಾಚಿಗೆ ಡೈವರ್ಟ್ ಮಾಡಲಾಗಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದದ್ದು ಪೈಲಟ್ ಗಮನಕ್ಕೆ ಬಂದಿತ್ತು ಎಂದು ಇಂಡಿಗೊ ಹೇಳಿಕೆ ತಿಳಿಸಿದೆ. ತಕ್ಷಣವೇ ಮುಂಜಾಗ್ರತಾ ಕ್ರಮವಾಗಿ ವಿಮಾನವನ್ನು ಕರಾಚಿಗೆ ತಿರುಗಿಸಲಾಯಿತು ಎಂದು ಅದು ಹೇಳಿದೆ.

Published On - 3:01 pm, Sun, 17 July 22

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ