AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India Express ಏರ್​​ಇಂಡಿಯಾ ಎಕ್ಸ್​​​ಪ್ರೆಸ್​​ ವಿಮಾನದಲ್ಲಿ ಸುಟ್ಟ ವಾಸನೆ; ದುಬೈಗೆ ಹೊರಟಿದ್ದ ವಿಮಾನ ಮಸ್ಕತ್​​ನಲ್ಲಿ ಸುರಕ್ಷಿತ ಲ್ಯಾಂಡಿಂಗ್

ವಿಮಾನದ ಕಿಟಕಿ ಭಾಗದಿಂದ ಈ ಸುಟ್ಟ ವಾಸನೆ ಬಂದಿದ್ದು, ಪೈಲಟ್ ತಕ್ಷಣವೇ ವಿಮಾನವನ್ನು ಮಸ್ಕತ್​​ಗೆ ಡೈವರ್ಟ್ ಮಾಡಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ.

Air India Express ಏರ್​​ಇಂಡಿಯಾ ಎಕ್ಸ್​​​ಪ್ರೆಸ್​​ ವಿಮಾನದಲ್ಲಿ ಸುಟ್ಟ ವಾಸನೆ; ದುಬೈಗೆ ಹೊರಟಿದ್ದ ವಿಮಾನ ಮಸ್ಕತ್​​ನಲ್ಲಿ ಸುರಕ್ಷಿತ ಲ್ಯಾಂಡಿಂಗ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 17, 2022 | 3:20 PM

Share

ಕ್ಯಾಲಿಕಟ್​​ನಿಂದ ದುಬೈಗೆ ಹೊರಟಿದ್ದ ಏರ್​​ಇಂಡಿಯಾ ಎಕ್ಸ್​​​ಪ್ರೆಸ್ ​​( Air India Express) ವಿಮಾನದಲ್ಲಿ ಸುಟ್ಟ ವಾಸನೆ ಬಂದಿದ್ದು ಆ ವಿಮಾನ ಮಾರ್ಗ ಬದಲಿಸಿ ಮಸ್ಕತ್​​ಗೆ ಪಯಣ ಬೆಳೆಸಿದೆ. ಶನಿವಾರ ರಾತ್ರಿ ಈ ಘಟನೆ ನಡೆದಿದೆ. ವಿಮಾನದ ಕಿಟಕಿ ಭಾಗದಿಂದ ಈ ಸುಟ್ಟ ವಾಸನೆ ಬಂದಿದ್ದು, ಪೈಲಟ್ ತಕ್ಷಣವೇ ವಿಮಾನವನ್ನು ಮಸ್ಕತ್​​ಗೆ ಡೈವರ್ಟ್ ಮಾಡಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ. ಪೈಲಟ್ ಕಡೆಗಿರುವ ಕಿಟಕಿಯೊಂದರಿಂದ ಸುಟ್ಟ ವಾಸನೆ ಬರುತ್ತಿತ್ತು. ತಕ್ಷಣವೇ ಪೈಲಟ್ ವಿಮಾನವನ್ನು ಮಸ್ಕತ್ ಗೆ ತಿರುಗಿಸಿ ಅಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ  ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA)  ಭಾನುವಾರ ಹೇಳಿದೆ. ಈ ಬಗ್ಗೆ ಡಿಜಿಸಿಎ ತನಿಖೆ ನಡೆಸುತ್ತಿದೆ.

ಇನ್ನೊಂದು ಘಟನೆಯಲ್ಲಿ ಇಂಡಿಗೊದ ಶಾರ್ಜಾ- ಹೈದರಾಬಾದ್ ವಿಮಾನದಲ್ಲಿನ ಎಂಜಿನ್​​ನಲ್ಲಿ ತಾಂತ್ರಿಕ ದೋಷವೊಂದು ಕಂಡುಬಂದ ಹಿನ್ನಲೆಯಲ್ಲಿ ಆ ವಿಮಾನವನ್ನು ಕರಾಚಿಗೆ ಡೈವರ್ಟ್ ಮಾಡಲಾಗಿದೆ. ಈ ಬಗ್ಗೆಯೂ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ತನಿಖೆ ನಡೆಸಲಿದೆ.  ಶಾರ್ಜಾದಿಂದ ಹೈದರಾಬಾದ್ ಗೆ ಬರುತ್ತಿದ್ದ ಇಂಡಿಗೊ ವಿಮಾನ 6E-1406ವನ್ನು ಕರಾಚಿಗೆ ಡೈವರ್ಟ್ ಮಾಡಲಾಗಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದದ್ದು ಪೈಲಟ್ ಗಮನಕ್ಕೆ ಬಂದಿತ್ತು ಎಂದು ಇಂಡಿಗೊ ಹೇಳಿಕೆ ತಿಳಿಸಿದೆ. ತಕ್ಷಣವೇ ಮುಂಜಾಗ್ರತಾ ಕ್ರಮವಾಗಿ ವಿಮಾನವನ್ನು ಕರಾಚಿಗೆ ತಿರುಗಿಸಲಾಯಿತು ಎಂದು ಅದು ಹೇಳಿದೆ.

Published On - 3:01 pm, Sun, 17 July 22

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ