AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India Express ಏರ್​​ಇಂಡಿಯಾ ಎಕ್ಸ್​​​ಪ್ರೆಸ್​​ ವಿಮಾನದಲ್ಲಿ ಸುಟ್ಟ ವಾಸನೆ; ದುಬೈಗೆ ಹೊರಟಿದ್ದ ವಿಮಾನ ಮಸ್ಕತ್​​ನಲ್ಲಿ ಸುರಕ್ಷಿತ ಲ್ಯಾಂಡಿಂಗ್

ವಿಮಾನದ ಕಿಟಕಿ ಭಾಗದಿಂದ ಈ ಸುಟ್ಟ ವಾಸನೆ ಬಂದಿದ್ದು, ಪೈಲಟ್ ತಕ್ಷಣವೇ ವಿಮಾನವನ್ನು ಮಸ್ಕತ್​​ಗೆ ಡೈವರ್ಟ್ ಮಾಡಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ.

Air India Express ಏರ್​​ಇಂಡಿಯಾ ಎಕ್ಸ್​​​ಪ್ರೆಸ್​​ ವಿಮಾನದಲ್ಲಿ ಸುಟ್ಟ ವಾಸನೆ; ದುಬೈಗೆ ಹೊರಟಿದ್ದ ವಿಮಾನ ಮಸ್ಕತ್​​ನಲ್ಲಿ ಸುರಕ್ಷಿತ ಲ್ಯಾಂಡಿಂಗ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 17, 2022 | 3:20 PM

Share

ಕ್ಯಾಲಿಕಟ್​​ನಿಂದ ದುಬೈಗೆ ಹೊರಟಿದ್ದ ಏರ್​​ಇಂಡಿಯಾ ಎಕ್ಸ್​​​ಪ್ರೆಸ್ ​​( Air India Express) ವಿಮಾನದಲ್ಲಿ ಸುಟ್ಟ ವಾಸನೆ ಬಂದಿದ್ದು ಆ ವಿಮಾನ ಮಾರ್ಗ ಬದಲಿಸಿ ಮಸ್ಕತ್​​ಗೆ ಪಯಣ ಬೆಳೆಸಿದೆ. ಶನಿವಾರ ರಾತ್ರಿ ಈ ಘಟನೆ ನಡೆದಿದೆ. ವಿಮಾನದ ಕಿಟಕಿ ಭಾಗದಿಂದ ಈ ಸುಟ್ಟ ವಾಸನೆ ಬಂದಿದ್ದು, ಪೈಲಟ್ ತಕ್ಷಣವೇ ವಿಮಾನವನ್ನು ಮಸ್ಕತ್​​ಗೆ ಡೈವರ್ಟ್ ಮಾಡಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ. ಪೈಲಟ್ ಕಡೆಗಿರುವ ಕಿಟಕಿಯೊಂದರಿಂದ ಸುಟ್ಟ ವಾಸನೆ ಬರುತ್ತಿತ್ತು. ತಕ್ಷಣವೇ ಪೈಲಟ್ ವಿಮಾನವನ್ನು ಮಸ್ಕತ್ ಗೆ ತಿರುಗಿಸಿ ಅಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ  ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA)  ಭಾನುವಾರ ಹೇಳಿದೆ. ಈ ಬಗ್ಗೆ ಡಿಜಿಸಿಎ ತನಿಖೆ ನಡೆಸುತ್ತಿದೆ.

ಇನ್ನೊಂದು ಘಟನೆಯಲ್ಲಿ ಇಂಡಿಗೊದ ಶಾರ್ಜಾ- ಹೈದರಾಬಾದ್ ವಿಮಾನದಲ್ಲಿನ ಎಂಜಿನ್​​ನಲ್ಲಿ ತಾಂತ್ರಿಕ ದೋಷವೊಂದು ಕಂಡುಬಂದ ಹಿನ್ನಲೆಯಲ್ಲಿ ಆ ವಿಮಾನವನ್ನು ಕರಾಚಿಗೆ ಡೈವರ್ಟ್ ಮಾಡಲಾಗಿದೆ. ಈ ಬಗ್ಗೆಯೂ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ತನಿಖೆ ನಡೆಸಲಿದೆ.  ಶಾರ್ಜಾದಿಂದ ಹೈದರಾಬಾದ್ ಗೆ ಬರುತ್ತಿದ್ದ ಇಂಡಿಗೊ ವಿಮಾನ 6E-1406ವನ್ನು ಕರಾಚಿಗೆ ಡೈವರ್ಟ್ ಮಾಡಲಾಗಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದದ್ದು ಪೈಲಟ್ ಗಮನಕ್ಕೆ ಬಂದಿತ್ತು ಎಂದು ಇಂಡಿಗೊ ಹೇಳಿಕೆ ತಿಳಿಸಿದೆ. ತಕ್ಷಣವೇ ಮುಂಜಾಗ್ರತಾ ಕ್ರಮವಾಗಿ ವಿಮಾನವನ್ನು ಕರಾಚಿಗೆ ತಿರುಗಿಸಲಾಯಿತು ಎಂದು ಅದು ಹೇಳಿದೆ.

Published On - 3:01 pm, Sun, 17 July 22

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್