AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India Express ಏರ್​​ಇಂಡಿಯಾ ಎಕ್ಸ್​​​ಪ್ರೆಸ್​​ ವಿಮಾನದಲ್ಲಿ ಸುಟ್ಟ ವಾಸನೆ; ದುಬೈಗೆ ಹೊರಟಿದ್ದ ವಿಮಾನ ಮಸ್ಕತ್​​ನಲ್ಲಿ ಸುರಕ್ಷಿತ ಲ್ಯಾಂಡಿಂಗ್

ವಿಮಾನದ ಕಿಟಕಿ ಭಾಗದಿಂದ ಈ ಸುಟ್ಟ ವಾಸನೆ ಬಂದಿದ್ದು, ಪೈಲಟ್ ತಕ್ಷಣವೇ ವಿಮಾನವನ್ನು ಮಸ್ಕತ್​​ಗೆ ಡೈವರ್ಟ್ ಮಾಡಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ.

Air India Express ಏರ್​​ಇಂಡಿಯಾ ಎಕ್ಸ್​​​ಪ್ರೆಸ್​​ ವಿಮಾನದಲ್ಲಿ ಸುಟ್ಟ ವಾಸನೆ; ದುಬೈಗೆ ಹೊರಟಿದ್ದ ವಿಮಾನ ಮಸ್ಕತ್​​ನಲ್ಲಿ ಸುರಕ್ಷಿತ ಲ್ಯಾಂಡಿಂಗ್
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 17, 2022 | 3:20 PM

Share

ಕ್ಯಾಲಿಕಟ್​​ನಿಂದ ದುಬೈಗೆ ಹೊರಟಿದ್ದ ಏರ್​​ಇಂಡಿಯಾ ಎಕ್ಸ್​​​ಪ್ರೆಸ್ ​​( Air India Express) ವಿಮಾನದಲ್ಲಿ ಸುಟ್ಟ ವಾಸನೆ ಬಂದಿದ್ದು ಆ ವಿಮಾನ ಮಾರ್ಗ ಬದಲಿಸಿ ಮಸ್ಕತ್​​ಗೆ ಪಯಣ ಬೆಳೆಸಿದೆ. ಶನಿವಾರ ರಾತ್ರಿ ಈ ಘಟನೆ ನಡೆದಿದೆ. ವಿಮಾನದ ಕಿಟಕಿ ಭಾಗದಿಂದ ಈ ಸುಟ್ಟ ವಾಸನೆ ಬಂದಿದ್ದು, ಪೈಲಟ್ ತಕ್ಷಣವೇ ವಿಮಾನವನ್ನು ಮಸ್ಕತ್​​ಗೆ ಡೈವರ್ಟ್ ಮಾಡಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ. ಪೈಲಟ್ ಕಡೆಗಿರುವ ಕಿಟಕಿಯೊಂದರಿಂದ ಸುಟ್ಟ ವಾಸನೆ ಬರುತ್ತಿತ್ತು. ತಕ್ಷಣವೇ ಪೈಲಟ್ ವಿಮಾನವನ್ನು ಮಸ್ಕತ್ ಗೆ ತಿರುಗಿಸಿ ಅಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ  ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA)  ಭಾನುವಾರ ಹೇಳಿದೆ. ಈ ಬಗ್ಗೆ ಡಿಜಿಸಿಎ ತನಿಖೆ ನಡೆಸುತ್ತಿದೆ.

ಇನ್ನೊಂದು ಘಟನೆಯಲ್ಲಿ ಇಂಡಿಗೊದ ಶಾರ್ಜಾ- ಹೈದರಾಬಾದ್ ವಿಮಾನದಲ್ಲಿನ ಎಂಜಿನ್​​ನಲ್ಲಿ ತಾಂತ್ರಿಕ ದೋಷವೊಂದು ಕಂಡುಬಂದ ಹಿನ್ನಲೆಯಲ್ಲಿ ಆ ವಿಮಾನವನ್ನು ಕರಾಚಿಗೆ ಡೈವರ್ಟ್ ಮಾಡಲಾಗಿದೆ. ಈ ಬಗ್ಗೆಯೂ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ತನಿಖೆ ನಡೆಸಲಿದೆ.  ಶಾರ್ಜಾದಿಂದ ಹೈದರಾಬಾದ್ ಗೆ ಬರುತ್ತಿದ್ದ ಇಂಡಿಗೊ ವಿಮಾನ 6E-1406ವನ್ನು ಕರಾಚಿಗೆ ಡೈವರ್ಟ್ ಮಾಡಲಾಗಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದದ್ದು ಪೈಲಟ್ ಗಮನಕ್ಕೆ ಬಂದಿತ್ತು ಎಂದು ಇಂಡಿಗೊ ಹೇಳಿಕೆ ತಿಳಿಸಿದೆ. ತಕ್ಷಣವೇ ಮುಂಜಾಗ್ರತಾ ಕ್ರಮವಾಗಿ ವಿಮಾನವನ್ನು ಕರಾಚಿಗೆ ತಿರುಗಿಸಲಾಯಿತು ಎಂದು ಅದು ಹೇಳಿದೆ.

Published On - 3:01 pm, Sun, 17 July 22

Follow Us
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ
ಕೊಲಂಬಿಯಾ ಭೂಕಂಪದ ಮೃತರ ಸಂಖ್ಯೆ 224ಕ್ಕೆ ಏರಿಕೆ
ಕೊಲಂಬಿಯಾ ಭೂಕಂಪದ ಮೃತರ ಸಂಖ್ಯೆ 224ಕ್ಕೆ ಏರಿಕೆ
ಪಾಕಿಸ್ತಾನ ಸೇನೆಯ ಪ್ರಧಾನ ಕಚೇರಿ ಮೇಲೆ ಗುಂಡಿನ ದಾಳಿ; ಓರ್ವ ಸೈನಿಕ ಸಾವು
ಪಾಕಿಸ್ತಾನ ಸೇನೆಯ ಪ್ರಧಾನ ಕಚೇರಿ ಮೇಲೆ ಗುಂಡಿನ ದಾಳಿ; ಓರ್ವ ಸೈನಿಕ ಸಾವು