AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India Express: ಯುಎಇಯಿಂದ ಭಾರತಕ್ಕೆ ಪ್ರಯಾಣಿಸುವವರಿಗೆ ಕೊವಿಡ್ ಮಾರ್ಗಸೂಚಿ ಘೋಷಿಸಿದ ಏರ್ ಇಂಡಿಯಾ ಎಕ್ಸ್​ಪ್ರೆಸ್

ಯುಎಇಯಿಂದ ಭಾರತಕ್ಕೆ ವಿಮಾನದಲ್ಲಿ ಪ್ರಯಾಣ ಮಾಡುವಾಗ ಮಾಸ್ಕ್‌ಗಳ ಬಳಕೆ ಮಾಡಬೇಕು ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

Air India Express: ಯುಎಇಯಿಂದ ಭಾರತಕ್ಕೆ ಪ್ರಯಾಣಿಸುವವರಿಗೆ ಕೊವಿಡ್ ಮಾರ್ಗಸೂಚಿ ಘೋಷಿಸಿದ ಏರ್ ಇಂಡಿಯಾ ಎಕ್ಸ್​ಪ್ರೆಸ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 28, 2022 | 9:08 AM

Share

ಕೊಚ್ಚಿ: ಯುನೈಟೆಡ್ ಅರಬ್ ಎಮಿರೇಟ್ಸ್ (UAE)ನಿಂದ ಭಾರತಕ್ಕೆ ಪ್ರಯಾಣಿಸುವ ಪ್ರಯಾಣಿಕರು ಯಾವ ರೀತಿಯ ಕೊವಿಡ್ ನಿಯಮಗಳನ್ನು ಅನುಸರಿಸಬೇಕು ಎಂಬುದರ ಬಗ್ಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ (Air India Express) ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಯುಎಇಯಿಂದ ಭಾರತಕ್ಕೆ ಬರುವ ಎಲ್ಲ ಪ್ರಯಾಣಿಕರು ತಮ್ಮ ದೇಶದಲ್ಲಿ ಕೋವಿಡ್ ಲಸಿಕೆ (Covid Vaccine) ಹಾಕಿಸಿಕೊಂಡಿರುವ ಪ್ರಮಾಣಪತ್ರವನ್ನು ಹೊಂದಿರಬೇಕು. ವಿಮಾನದಲ್ಲಿ ಪ್ರಯಾಣ ಮಾಡುವಾಗ ಮಾಸ್ಕ್‌ಗಳ ಬಳಕೆ ಮಾಡಬೇಕು ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

“ಎಲ್ಲಾ ಪ್ರಯಾಣಿಕರು ತಮ್ಮ ದೇಶದಲ್ಲಿ ಕೊವಿಡ್-19 ವಿರುದ್ಧ ವ್ಯಾಕ್ಸಿನೇಷನ್‌ನ ಅನುಮೋದಿತ ಪ್ರಾಥಮಿಕ ವೇಳಾಪಟ್ಟಿಯ ಪ್ರಕಾರ ಸಂಪೂರ್ಣವಾಗಿ ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಎಲ್ಲಾ ಅತಿಥಿಗಳು ಮೇಲಾಗಿ ಮಾಸ್ಕ್​ಗಳನ್ನು ಬಳಸಬೇಕು ಮತ್ತು ವಿಮಾನಗಳಲ್ಲಿ ಸಾಮಾಜಿಕ ಅಂತರವನ್ನು ಅನುಸರಿಸಬೇಕು” ಎಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: Omicron BF.7: ವಿದೇಶದಿಂದ ಬಂದಿದ್ದ ನಾಲ್ವರಿಗೆ ಕೊವಿಡ್ ದೃಢ, ಬೆಂಗಳೂರು ಆಸ್ಪತ್ರೆಗಳಲ್ಲಿ ಇಂದಿನಿಂದ ಮಾಕ್ ಡ್ರಿಲ್

ಕೇರಳದ ಕೊಚ್ಚಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಭಾರತದ ಮೊದಲ ಅಂತಾರಾಷ್ಟ್ರೀಯ ಬಜೆಟ್ ವಾಹಕವಾಗಿದೆ. ಇದು ಮಧ್ಯಪ್ರಾಚ್ಯ ಮತ್ತು ಆಗ್ನೇಯ ಏಷ್ಯಾಕ್ಕೆ ಸಂಪರ್ಕವನ್ನು ನೀಡುತ್ತದೆ. ಇದನ್ನು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಲಿಮಿಟೆಡ್ ನಡೆಸುತ್ತದೆ. ಆದರೂ 12 ವರ್ಷದೊಳಗಿನ ಮಕ್ಕಳಿಗೆ ರ್ಯಾಂಡಮ್ ಪರೀಕ್ಷೆಯ ಅಗತ್ಯವಿಲ್ಲ ಎಂದು ಮಾರ್ಗಸೂಚಿಗಳು ಹೇಳಿವೆ.

ಇದನ್ನೂ ಓದಿ: ಚೀನಾದಲ್ಲಿ ಕೊವಿಡ್ ನಾವ್ ಬಿಟ್ಟಿದೀವಾ ಎಂದು ಡಿಕೆ ಶಿವಕುಮಾರ್​ಗೆ ಟಾಂಗ್ ಕೊಟ್ಟ ಸಚಿವ ಅಶ್ವಥ್ ನಾರಾಯಣ್

“12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಆಗಮನದ ನಂತರದ ರ್ಯಾಂಡಮ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ. ಆದರೂ ವಿಮಾನ ನಿಲ್ದಾಣದಲ್ಲಿ ಆಗಮನದ ಸಮಯದಲ್ಲಿ ಆ ಮಕ್ಕಳಿಗೆ COVID-19 ರೋಗಲಕ್ಷಣ ಕಂಡುಬಂದರೆ ಅವರು ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಪ್ರೋಟೋಕಾಲ್ ಪ್ರಕಾರ ಅವರಿಗೆ ಚಿಕಿತ್ಸೆ ನೀಡಲಾಗುತ್ತದೆ” ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ