Air India Express: ಯುಎಇಯಿಂದ ಭಾರತಕ್ಕೆ ಪ್ರಯಾಣಿಸುವವರಿಗೆ ಕೊವಿಡ್ ಮಾರ್ಗಸೂಚಿ ಘೋಷಿಸಿದ ಏರ್ ಇಂಡಿಯಾ ಎಕ್ಸ್​ಪ್ರೆಸ್

ಯುಎಇಯಿಂದ ಭಾರತಕ್ಕೆ ವಿಮಾನದಲ್ಲಿ ಪ್ರಯಾಣ ಮಾಡುವಾಗ ಮಾಸ್ಕ್‌ಗಳ ಬಳಕೆ ಮಾಡಬೇಕು ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

Air India Express: ಯುಎಇಯಿಂದ ಭಾರತಕ್ಕೆ ಪ್ರಯಾಣಿಸುವವರಿಗೆ ಕೊವಿಡ್ ಮಾರ್ಗಸೂಚಿ ಘೋಷಿಸಿದ ಏರ್ ಇಂಡಿಯಾ ಎಕ್ಸ್​ಪ್ರೆಸ್
ಸಾಂದರ್ಭಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on: Dec 28, 2022 | 9:08 AM

ಕೊಚ್ಚಿ: ಯುನೈಟೆಡ್ ಅರಬ್ ಎಮಿರೇಟ್ಸ್ (UAE)ನಿಂದ ಭಾರತಕ್ಕೆ ಪ್ರಯಾಣಿಸುವ ಪ್ರಯಾಣಿಕರು ಯಾವ ರೀತಿಯ ಕೊವಿಡ್ ನಿಯಮಗಳನ್ನು ಅನುಸರಿಸಬೇಕು ಎಂಬುದರ ಬಗ್ಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ (Air India Express) ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಯುಎಇಯಿಂದ ಭಾರತಕ್ಕೆ ಬರುವ ಎಲ್ಲ ಪ್ರಯಾಣಿಕರು ತಮ್ಮ ದೇಶದಲ್ಲಿ ಕೋವಿಡ್ ಲಸಿಕೆ (Covid Vaccine) ಹಾಕಿಸಿಕೊಂಡಿರುವ ಪ್ರಮಾಣಪತ್ರವನ್ನು ಹೊಂದಿರಬೇಕು. ವಿಮಾನದಲ್ಲಿ ಪ್ರಯಾಣ ಮಾಡುವಾಗ ಮಾಸ್ಕ್‌ಗಳ ಬಳಕೆ ಮಾಡಬೇಕು ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

“ಎಲ್ಲಾ ಪ್ರಯಾಣಿಕರು ತಮ್ಮ ದೇಶದಲ್ಲಿ ಕೊವಿಡ್-19 ವಿರುದ್ಧ ವ್ಯಾಕ್ಸಿನೇಷನ್‌ನ ಅನುಮೋದಿತ ಪ್ರಾಥಮಿಕ ವೇಳಾಪಟ್ಟಿಯ ಪ್ರಕಾರ ಸಂಪೂರ್ಣವಾಗಿ ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಎಲ್ಲಾ ಅತಿಥಿಗಳು ಮೇಲಾಗಿ ಮಾಸ್ಕ್​ಗಳನ್ನು ಬಳಸಬೇಕು ಮತ್ತು ವಿಮಾನಗಳಲ್ಲಿ ಸಾಮಾಜಿಕ ಅಂತರವನ್ನು ಅನುಸರಿಸಬೇಕು” ಎಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: Omicron BF.7: ವಿದೇಶದಿಂದ ಬಂದಿದ್ದ ನಾಲ್ವರಿಗೆ ಕೊವಿಡ್ ದೃಢ, ಬೆಂಗಳೂರು ಆಸ್ಪತ್ರೆಗಳಲ್ಲಿ ಇಂದಿನಿಂದ ಮಾಕ್ ಡ್ರಿಲ್

ಕೇರಳದ ಕೊಚ್ಚಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಭಾರತದ ಮೊದಲ ಅಂತಾರಾಷ್ಟ್ರೀಯ ಬಜೆಟ್ ವಾಹಕವಾಗಿದೆ. ಇದು ಮಧ್ಯಪ್ರಾಚ್ಯ ಮತ್ತು ಆಗ್ನೇಯ ಏಷ್ಯಾಕ್ಕೆ ಸಂಪರ್ಕವನ್ನು ನೀಡುತ್ತದೆ. ಇದನ್ನು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಲಿಮಿಟೆಡ್ ನಡೆಸುತ್ತದೆ. ಆದರೂ 12 ವರ್ಷದೊಳಗಿನ ಮಕ್ಕಳಿಗೆ ರ್ಯಾಂಡಮ್ ಪರೀಕ್ಷೆಯ ಅಗತ್ಯವಿಲ್ಲ ಎಂದು ಮಾರ್ಗಸೂಚಿಗಳು ಹೇಳಿವೆ.

ಇದನ್ನೂ ಓದಿ: ಚೀನಾದಲ್ಲಿ ಕೊವಿಡ್ ನಾವ್ ಬಿಟ್ಟಿದೀವಾ ಎಂದು ಡಿಕೆ ಶಿವಕುಮಾರ್​ಗೆ ಟಾಂಗ್ ಕೊಟ್ಟ ಸಚಿವ ಅಶ್ವಥ್ ನಾರಾಯಣ್

“12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಆಗಮನದ ನಂತರದ ರ್ಯಾಂಡಮ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ. ಆದರೂ ವಿಮಾನ ನಿಲ್ದಾಣದಲ್ಲಿ ಆಗಮನದ ಸಮಯದಲ್ಲಿ ಆ ಮಕ್ಕಳಿಗೆ COVID-19 ರೋಗಲಕ್ಷಣ ಕಂಡುಬಂದರೆ ಅವರು ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಪ್ರೋಟೋಕಾಲ್ ಪ್ರಕಾರ ಅವರಿಗೆ ಚಿಕಿತ್ಸೆ ನೀಡಲಾಗುತ್ತದೆ” ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ