AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India Express: ಯುಎಇಯಿಂದ ಭಾರತಕ್ಕೆ ಪ್ರಯಾಣಿಸುವವರಿಗೆ ಕೊವಿಡ್ ಮಾರ್ಗಸೂಚಿ ಘೋಷಿಸಿದ ಏರ್ ಇಂಡಿಯಾ ಎಕ್ಸ್​ಪ್ರೆಸ್

ಯುಎಇಯಿಂದ ಭಾರತಕ್ಕೆ ವಿಮಾನದಲ್ಲಿ ಪ್ರಯಾಣ ಮಾಡುವಾಗ ಮಾಸ್ಕ್‌ಗಳ ಬಳಕೆ ಮಾಡಬೇಕು ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

Air India Express: ಯುಎಇಯಿಂದ ಭಾರತಕ್ಕೆ ಪ್ರಯಾಣಿಸುವವರಿಗೆ ಕೊವಿಡ್ ಮಾರ್ಗಸೂಚಿ ಘೋಷಿಸಿದ ಏರ್ ಇಂಡಿಯಾ ಎಕ್ಸ್​ಪ್ರೆಸ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 28, 2022 | 9:08 AM

Share

ಕೊಚ್ಚಿ: ಯುನೈಟೆಡ್ ಅರಬ್ ಎಮಿರೇಟ್ಸ್ (UAE)ನಿಂದ ಭಾರತಕ್ಕೆ ಪ್ರಯಾಣಿಸುವ ಪ್ರಯಾಣಿಕರು ಯಾವ ರೀತಿಯ ಕೊವಿಡ್ ನಿಯಮಗಳನ್ನು ಅನುಸರಿಸಬೇಕು ಎಂಬುದರ ಬಗ್ಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ (Air India Express) ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಯುಎಇಯಿಂದ ಭಾರತಕ್ಕೆ ಬರುವ ಎಲ್ಲ ಪ್ರಯಾಣಿಕರು ತಮ್ಮ ದೇಶದಲ್ಲಿ ಕೋವಿಡ್ ಲಸಿಕೆ (Covid Vaccine) ಹಾಕಿಸಿಕೊಂಡಿರುವ ಪ್ರಮಾಣಪತ್ರವನ್ನು ಹೊಂದಿರಬೇಕು. ವಿಮಾನದಲ್ಲಿ ಪ್ರಯಾಣ ಮಾಡುವಾಗ ಮಾಸ್ಕ್‌ಗಳ ಬಳಕೆ ಮಾಡಬೇಕು ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

“ಎಲ್ಲಾ ಪ್ರಯಾಣಿಕರು ತಮ್ಮ ದೇಶದಲ್ಲಿ ಕೊವಿಡ್-19 ವಿರುದ್ಧ ವ್ಯಾಕ್ಸಿನೇಷನ್‌ನ ಅನುಮೋದಿತ ಪ್ರಾಥಮಿಕ ವೇಳಾಪಟ್ಟಿಯ ಪ್ರಕಾರ ಸಂಪೂರ್ಣವಾಗಿ ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಎಲ್ಲಾ ಅತಿಥಿಗಳು ಮೇಲಾಗಿ ಮಾಸ್ಕ್​ಗಳನ್ನು ಬಳಸಬೇಕು ಮತ್ತು ವಿಮಾನಗಳಲ್ಲಿ ಸಾಮಾಜಿಕ ಅಂತರವನ್ನು ಅನುಸರಿಸಬೇಕು” ಎಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: Omicron BF.7: ವಿದೇಶದಿಂದ ಬಂದಿದ್ದ ನಾಲ್ವರಿಗೆ ಕೊವಿಡ್ ದೃಢ, ಬೆಂಗಳೂರು ಆಸ್ಪತ್ರೆಗಳಲ್ಲಿ ಇಂದಿನಿಂದ ಮಾಕ್ ಡ್ರಿಲ್

ಕೇರಳದ ಕೊಚ್ಚಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಭಾರತದ ಮೊದಲ ಅಂತಾರಾಷ್ಟ್ರೀಯ ಬಜೆಟ್ ವಾಹಕವಾಗಿದೆ. ಇದು ಮಧ್ಯಪ್ರಾಚ್ಯ ಮತ್ತು ಆಗ್ನೇಯ ಏಷ್ಯಾಕ್ಕೆ ಸಂಪರ್ಕವನ್ನು ನೀಡುತ್ತದೆ. ಇದನ್ನು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಲಿಮಿಟೆಡ್ ನಡೆಸುತ್ತದೆ. ಆದರೂ 12 ವರ್ಷದೊಳಗಿನ ಮಕ್ಕಳಿಗೆ ರ್ಯಾಂಡಮ್ ಪರೀಕ್ಷೆಯ ಅಗತ್ಯವಿಲ್ಲ ಎಂದು ಮಾರ್ಗಸೂಚಿಗಳು ಹೇಳಿವೆ.

ಇದನ್ನೂ ಓದಿ: ಚೀನಾದಲ್ಲಿ ಕೊವಿಡ್ ನಾವ್ ಬಿಟ್ಟಿದೀವಾ ಎಂದು ಡಿಕೆ ಶಿವಕುಮಾರ್​ಗೆ ಟಾಂಗ್ ಕೊಟ್ಟ ಸಚಿವ ಅಶ್ವಥ್ ನಾರಾಯಣ್

“12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಆಗಮನದ ನಂತರದ ರ್ಯಾಂಡಮ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ. ಆದರೂ ವಿಮಾನ ನಿಲ್ದಾಣದಲ್ಲಿ ಆಗಮನದ ಸಮಯದಲ್ಲಿ ಆ ಮಕ್ಕಳಿಗೆ COVID-19 ರೋಗಲಕ್ಷಣ ಕಂಡುಬಂದರೆ ಅವರು ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಪ್ರೋಟೋಕಾಲ್ ಪ್ರಕಾರ ಅವರಿಗೆ ಚಿಕಿತ್ಸೆ ನೀಡಲಾಗುತ್ತದೆ” ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು