ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ, ಥೈಲ್ಯಾಂಡ್‌ನಲ್ಲಿ ತುರ್ತು ಭೂಸ್ಪರ್ಶ

ಥಾಯ್ಲೆಂಡ್‌ನ ಫುಕೆಟ್ ದ್ವೀಪದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಥೈಲ್ಯಾಂಡ್‌ನಲ್ಲಿ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಲಾಗಿತ್ತು ಎಂದು ಫುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಹೇಳಿದ್ದಾರೆ. ಗುಜರಾತಿನಲ್ಲಿ ನಡೆದ ವಿಮಾನ ಪತನದ ನಂತರ ಈ ಬೆದರಿಕೆ ಬಂದಿದೆ. ಈ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ.

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ, ಥೈಲ್ಯಾಂಡ್‌ನಲ್ಲಿ ತುರ್ತು ಭೂಸ್ಪರ್ಶ
ಏರ್​​​ ಇಂಡಿಯಾ ವಿಮಾನ
Image Credit source: pinterest

Updated on: Jun 13, 2025 | 12:04 PM

ದೆಹಲಿ, ಜೂ.13: ಥಾಯ್ಲೆಂಡ್‌ನ ಫುಕೆಟ್ (Thailand) ದ್ವೀಪದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ (Air India flight ) ಬಾಂಬ್ ಬೆದರಿಕೆ ಹಾಕಲಾಗಿದೆ. ಥೈಲ್ಯಾಂಡ್‌ನಲ್ಲಿ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಲಾಗಿತ್ತು ಎಂದು ಫುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಹೇಳಿದ್ದಾರೆ. ಇದೀಗ ವಿಮಾನ AI 379 ಲ್ಯಾಂಡ್ ಆಗಿದ್ದು, ಹಾರಾಟ ಮಾಡುತ್ತಿದ್ದ ವೇಳೆ ಈ ಬೆದರಿಕೆ ಬಂದಿದೆ. ಈ ಕಾರಣದಿಂದ ತಕ್ಷಣ ಭೂಸ್ಪರ್ಶಕ್ಕೆ ಮನವಿ ಮಾಡಲಾಗಿದೆ. ಅಹಮದಾಬಾದ್‌ ವಿಮಾನ ದುರಂತ ಇನ್ನು ಮಾಸಿಲ್ಲ, ಈ ಹೊತ್ತಿನಲ್ಲೇ ಮತ್ತೊಂದು ಬೆದರಿಕೆ ಕಾರಣವಾಗಿದೆ. ಗುಜರಾತಿನ ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತದ ಬೆನ್ನಲ್ಲೇ ಏರ್​​ ಇಂಡಿಯಾ ವಿಮಾನಕ್ಕೆ ಬಾಂಬ್​​​ ಬೆದರಿಕೆ ಬಂದಿದೆ. ಇದೀಗ ಈ ವಿಚಾರ ಸಾರ್ವಜನಿಕರಲ್ಲಿ ಹಾಗೂ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದೆ.

ಇದೀಗ ಬಾಂಬ್​​ ಬೆದರಿಕೆಯ ನಂತರ ಏರ್​​ ಇಂಡಿಯಾ ವಿಮಾನ ಸಿಬ್ಬಂದಿಗಳು ವಿಮಾನ AI 379ನಿಂದ ಪ್ರಯಾಣಿಕರನ್ನು ಹೊರಕ್ಕೆ ಕರದುಕೊಂಡು ಬಂದಿದ್ದಾರೆ ಎಂದು ಥೈಲ್ಯಾಂಡ್ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಪ್ರಾಥಮಿಕ ಶೋಧದ ನಂತರ ಸಂಬಂಧಪಟ್ಟ ಏರ್ ಇಂಡಿಯಾ ವಿಮಾನದೊಳಗೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ವಿಮಾನದಲ್ಲಿ 156 ಪ್ರಯಾಣಿಕರಿದ್ದರು. ಈ ವೇಳೆ ಯಾರು ಭಯಪಡಬೇಡಿ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂದು ಪ್ರಯಾಣಿಕರಿಗೂ ಹೇಳಿದ್ದಾರೆ.

ಇದನ್ನೂ ಓದಿ:  ಅಹಮದಾಬಾದ್​ ವಿಮಾನ ಪತನ: ಕೊನೆಯ ಕ್ಷಣದಲ್ಲಿ ಕೈಕೊಟ್ಟ ನೊಗ ಪಂಪರ್, ಲಿಫ್ಟ್ ಗೇರ್

ANI  ಪೋಸ್ಟ್​​ ಇಲ್ಲಿದೆ ನೋಡಿ:

ಶುಕ್ರವಾರ ಬೆಳಿಗ್ಗೆ 9:30 ಕ್ಕೆ (0230) ಫುಕೆಟ್ ವಿಮಾನ ನಿಲ್ದಾಣದಿಂದ ಭಾರತದ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟ್ಟಿತ್ತು. ಅಂಡಮಾನ್ ಸಮುದ್ರದ ಸುತ್ತಲೂ ವಿಶಾಲವಾದ ಲೂಪ್ ಮಾಡಿ ಥಾಯ್ ದ್ವೀಪದಲ್ಲಿ ಮತ್ತೆ ಇಳಿಯಿತು ಎಂದು ಫ್ಲೈಟ್ ಟ್ರ್ಯಾಕರ್ ಫ್ಲೈಟ್‌ರಾಡರ್ 24 ತಿಳಿಸಿದೆ. ಬಾಂಬ್ ಬೆದರಿಕೆಯ ಕುರಿತು AOT ಯಾವುದೇ ವಿವರಗಳನ್ನು ನೀಡಿಲ್ಲ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published On - 11:49 am, Fri, 13 June 25

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us