AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿ ಹಾಗೂ ಮಹಿಳೆಯ ನಡುವೆ ನಡೆದ ವಾಟ್ಸ್​ಆ್ಯಪ್ ಸಂಭಾಷಣೆಯಲ್ಲಿ ಏನಿದೆ?

ಏರ್​ಇಂಡಿಯಾ ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಕ್ಕಾಗಿ ಆರೋಪಿ ಉದ್ಯಮಿ ಶಂಕರ್ ಮಿಶ್ರಾ ಎಂಬುವವರನ್ನು ಪೊಲೀಸರು ಹುಡುಕುತ್ತಿದ್ದಾರೆ.

ವಿಮಾನದಲ್ಲಿ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿ ಹಾಗೂ ಮಹಿಳೆಯ ನಡುವೆ ನಡೆದ ವಾಟ್ಸ್​ಆ್ಯಪ್ ಸಂಭಾಷಣೆಯಲ್ಲಿ ಏನಿದೆ?
ಏರ್ ಇಂಡಿಯಾ
TV9 Web
| Edited By: |

Updated on: Jan 06, 2023 | 6:30 PM

Share

ಏರ್​ಇಂಡಿಯಾ ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಕ್ಕಾಗಿ ಆರೋಪಿ ಉದ್ಯಮಿ ಶಂಕರ್ ಮಿಶ್ರಾ ಎಂಬುವವರನ್ನು ಪೊಲೀಸರು ಹುಡುಕುತ್ತಿದ್ದಾರೆ.ಇದೀಗ ಮಹಿಳೆ ಹಾಗೂ ಆರೋಪಿಯ ನಡುವೆ ನಡೆದ ವಾಟ್ಸ್​ಆ್ಯಪ್  ಸಂಭಾಷಣೆ ಇದೀಗ ಬಹಿರಂಗಗೊಂಡಿದೆ. ಶಂಕರ್​ನನ್ನು ಕ್ಷಮಿಸಿದ್ದೇನೆ, ದೂರು ದಾಖಲಿಸುವ ಉದ್ದೇಶ ನನಗಿಲ್ಲ ಎನ್ನುವ ರೀತಿಯಲ್ಲಿ ಸಂಭಾಷಣೆ ನಡೆದಿದೆ. ಆರೋಪಿ ಮತ್ತು ಮಹಿಳೆಯ ನಡುವಿನ ವಾಟ್ಸಾಪ್ ಸಂದೇಶಗಳನ್ನು ಪರಿಶೀಲಿಸಿದಾಗ, ಆರೋಪಿ ನವೆಂಬರ್ 28 ರಂದು ಬಟ್ಟೆ ಮತ್ತು ಬ್ಯಾಗ್‌ಗಳನ್ನು ಸ್ವಚ್ಛಗೊಳಿಸಿದ್ದಾರೆ ಮತ್ತು ನವೆಂಬರ್ 30 ರಂದು ಅದನ್ನು ತಲುಪಿಸಿದ್ದಾರೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಮಹಿಳೆ ಆಪಾದಿತನ ಕೃತ್ಯವನ್ನು ಸ್ಪಷ್ಟವಾಗಿ ಕ್ಷಮಿಸಿದ್ದಾರೆ ಮತ್ತು ದೂರು ದಾಖಲಿಸುವ ಉದ್ದೇಶವನ್ನು ಹೊಂದಿಲ್ಲ. ಮಹಿಳೆ ಏರ್ ಇಂಡಿಯಾಕ್ಕೆ ಪರಿಹಾರಕ್ಕಾಗಿ ಡಿಸೆಂಬರ್ 20 ರಂದು ದೂರು ನೀಡಿದ್ದರು ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಮಿಶ್ರಾ ಅವರು ನವೆಂಬರ್ 28 ರಂದು ಇಬ್ಬರ ನಡುವೆ ಒಪ್ಪಂದ ಮಾಡಿಕೊಂಡು PayTM ನಲ್ಲಿ ಒಪ್ಪಂದದಂತೆ ಪರಿಹಾರವನ್ನು ಪಾವತಿಸಿದ್ದಾರೆ. ಘಟನೆಗೆ ಯಾವುದೇ ಪ್ರತ್ಯಕ್ಷದರ್ಶಿಗಳಿಲ್ಲ ಮತ್ತು ಕಕ್ಷಿದಾರರ ನಡುವಿನ ಒಪ್ಪಂದವು ಕ್ಯಾಬಿನ್ ಸಿಬ್ಬಂದಿಯ ಹೇಳಿಕೆಗಳಿಂದ ದೃಢೀಕರಿಸಲ್ಪಟ್ಟಿದೆ. ಶಂಕರ್ ಮಿಶ್ರಾ ಅವರು ತಮ್ಮ ವಕೀಲರಾದ ಇಶಾನಿ ಶರ್ಮಾ ಮತ್ತು ಅಕ್ಷತ್ ಬಾಜ್‌ಪೇಯ್ ಮೂಲಕ ಹೇಳಿಕೆಯೊಂದರಲ್ಲಿ ಈ ಹೇಳಿಕೆಯನ್ನು ನೀಡಿದ್ದಾರೆ.

ಮತ್ತಷ್ಟು ಓದಿ: Air India ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಮತ್ತೊಂದು ಘಟನೆ ಬೆಳಕಿಗೆ

ಆರೋಪಿಯು ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಂಪೂರ್ಣ ನಂಬಿಕೆ ಹೊಂದಿದ್ದು, ತನಿಖಾ ಪ್ರಕ್ರಿಯೆಗೆ ಸಹಕರಿಸಲಿದ್ದಾರೆ ಹೇಳಿಕೆಯಲ್ಲಿ ತಿಳಿಸಲಾಗಿದೆ. ನವೆಂಬರ್ 26 ರಂದು AI 102 ಬೋರ್ಡ್‌ನಲ್ಲಿ ಮಧ್ಯಾಹ್ನದ ಊಟದ ಬಳಿಕ ದೀಪಗಳನ್ನು ಆಫ್ ಮಾಡಿದ ಸ್ವಲ್ಪ ಸಮಯದ ನಂತರ, ಬಿಸಿನೆಸ್ ಕ್ಲಾಸ್ ಸೀಟ್ 8A ನಲ್ಲಿ ಕುಳಿತಿದ್ದ ಶಂಕರ್ ಮಿಶ್ರಾ ಮಹಿಳೆಯೊಬ್ಬಳ ಸೀಟ್ ಬಳಿ ಹೋಗಿ ಆಕೆಯ ಮೇಲೆ ಮೂತ್ರ ವಿಸರ್ಜಿಸಿದ್ದ.  ಇದೀಗ ಆತ ತಲೆಮರೆಸಿಕೊಂಡಿದ್ದು, ಈ ವಿಚಾರವಾಗಿ ಪೊಲೀಸರು ಎರಡು ತಂಡಗಳನ್ನು ರಚನೆ ಮಾಡಿದ್ದು ಒಂದು ತಂಡ ಬೆಂಗಳೂರಿನಲ್ಲಿದ್ದರೆ ಮತ್ತೊಂದು ತಂಡ ಮುಂಬೈನಲ್ಲಿ ಬೀಡುಬಿಟ್ಟಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೂರು ಹಸುಗಳ ಕಳ್ಳತನ, ಸಿಸಿಟಿವಿ ವಿಡಿಯೋ ವೈರಲ್
ಮೂರು ಹಸುಗಳ ಕಳ್ಳತನ, ಸಿಸಿಟಿವಿ ವಿಡಿಯೋ ವೈರಲ್
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’