AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ: ನನಗೆ ಕುಟುಂಬ ಇದೆ ದೂರು ಕೊಡಬೇಡಿ ಎಂದು ಆರೋಪಿ ಬೇಡಿಕೊಂಡಿದ್ದ

ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ್ದ ಆರೋಪಿ ಕೊನೆಗೆ ತನಗೆ ಕುಟುಂಬವಿದೆ ದಯವಿಟ್ಟು ನನ್ನ ಮೇಲೆ ದೂರು ಕೊಡಬೇಡಿ ಎಂದು ಬೇಡಿಕೊಂಡಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ: ನನಗೆ ಕುಟುಂಬ ಇದೆ ದೂರು ಕೊಡಬೇಡಿ ಎಂದು ಆರೋಪಿ ಬೇಡಿಕೊಂಡಿದ್ದ
ಏರ್ ಇಂಡಿಯಾ ವಿಮಾನ
TV9 Web
| Edited By: |

Updated on: Jan 06, 2023 | 4:45 PM

Share

ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ್ದ ಆರೋಪಿ ಕೊನೆಗೆ ತನಗೆ ಕುಟುಂಬವಿದೆ ದಯವಿಟ್ಟು ನನ್ನ ಮೇಲೆ ದೂರು ಕೊಡಬೇಡಿ ಎಂದು ಬೇಡಿಕೊಂಡಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಒಂದೊಮ್ಮೆ ದೂರು ಕೊಟ್ಟರೆ ತನ್ನ ಹೆಂಡತಿ ಹಾಗೂ ಮಗುವಿಗೆ ತೊಂದರೆಯಾಗುತ್ತದೆ ಎಂದು ಕೇಳಿಕೊಂಡಿದ್ದ. ಮಹಿಳೆ ಏರ್ ಇಂಡಿಯಾಗೆ ನೀಡಿದ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಅದರಲ್ಲಿ ಆರೋಪಿ ತನ್ನ ವಿರುದ್ಧ ಕೇಸ್ ದಾಖಲಿಸಬೇಡಿ ಎಂದು ಕೇಳಿಕೊಂಡಿರುವ ವಿಷಯ ಉಲ್ಲೇಖಿಸಲಾಗಿದೆ.

ಮಹಿಳೆ, ತನ್ನ ಇಚ್ಛೆಯ ವಿರುದ್ಧವಾಗಿ ಆರೋಪಿಯೊಂದಿಗೆ ಮಾತುಕತೆ ನಡೆಸಿ, ರಾಜಿ ಮಾಡಿಕೊಳ್ಳುವಂತೆ ತನಗೆ ಒತ್ತಾಯಿಸಲಾಯಿತು ಎಂದು ಹೇಳಲಾಗಿದೆ. ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಆರೋಪಿ ಪತ್ತೆಗಾಗಿ ಲುಕ್‌ಔಟ್‌ ನೋಟಿಸ್‌ ಹೊರಡಿಸಲಾಗಿದೆ.

ಮತ್ತಷ್ಟು ಓದಿ: Air India ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಮತ್ತೊಂದು ಘಟನೆ ಬೆಳಕಿಗೆ

ಈ ವಿಚಾರದಲ್ಲಿ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಹೊರಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈವರೆಗೂ ವಿಮಾನದಲ್ಲಿದ್ದ ನಾಲ್ವರು ಸಿಬ್ಬಂದಿ ಮಾತ್ರ ವಿಚಾರಣೆಗೆ ಸಹಕರಿಸಿದ್ದಾರೆ. ಗುರುವಾರ ಲುಕ್‌ಔಟ್‌ ನೋಟಿಸ್‌ ಹೊರಡಿಸುವಂತೆ ಕೋರಿ ವಲಸೆ ಅಧಿಕಾರಿಗಳಿಗೆ ದೆಹಲಿ ಪೊಲೀಸರು ಪತ್ರ ಬರೆದಿದ್ದರು.

ಆರೋಪಿಯನ್ನು ಮುಂಬೈ ನಿವಾಸಿ ಎಸ್.ಮಿಶ್ರಾ ಎಂದು ಗುರುತಿಸಲಾಗಿದೆ. ಈತ ಕಳೆದ ವರ್ಷ ನವೆಂಬರ್ 26 ರಂದು ಅಮೆರಿಕದ ನ್ಯೂಯಾರ್ಕ್‌ನಿಂದ ದಿಲ್ಲಿಗೆ ಬರುತ್ತಿದ್ದ ವಿಮಾನದಲ್ಲಿ ಸುಮಾರು 70 ವರ್ಷದ ವೃದ್ಧೆ ಮೇಲೆ ಆತ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು