Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ

ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ವ್ಯಕ್ತಿ ಶಂಕರ್ ಮಿಶ್ರಾ ಅವರನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಇಂದು ಬಂಧಿಸಿದ್ದಾರೆ.

Air India: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ
ಶಂಕರ್ ಮಿಶ್ರಾ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Jan 07, 2023 | 10:22 AM

ದೆಹಲಿ: ಏರ್ ಇಂಡಿಯಾ (Air India) ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ವ್ಯಕ್ತಿ ಶಂಕರ್ ಮಿಶ್ರಾ ಅವರನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಇಂದು ಬಂಧಿಸಿದ್ದಾರೆ. ಆತ ಪರಾರಿಯಾಗಿದ್ದು, ಆತನ ಪತ್ತೆಗೆ ಲುಕ್‌ಔಟ್ ನೋಟಿಸ್ ಅಥವಾ ಏರ್‌ಪೋರ್ಟ್ ಅಲರ್ಟ್ ಹಾಕಲಾಗಿತ್ತು. ನವೆಂಬರ್ 26ರಂದು ನ್ಯೂಯಾರ್ಕ್-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ, ಶಂಕರ್ ಮಿಶ್ರಾ ಅವರು ತಮ್ಮ ಪ್ಯಾಂಟ್ ಅನ್ನು ಬಿಚ್ಚಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ನಂತರ ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರ ನೀಡಿದ್ದಾಳೆ. ನನಗೆ ಕುಟುಂಬವಿದೆ ದಯವಿಟ್ಟು ಪೊಲೀಸರಿಗೆ ದೂರು ನೀಡದಂತೆ ಮಹಿಳೆಯನ್ನು ಬೇಡಿಕೊಂಡಿದ್ದಾನೆ.

ಶಂಕರ್ ಮಿಶ್ರಾ ಅವರ ವಕೀಲರು ಅವರು ದೂರು ದಾಖಲಿಸಿದ ಮಹಿಳೆಯೊಂದಿಗೆ ಮಾತನಾಡಿದ್ದಾರೆ ಮತ್ತು ಅವರಿಗೆ 15,000 ರೂ. ಪರಿಹಾರವನ್ನು ಪಾವತಿಸಿದ್ದಾರೆ ಮತ್ತು ತನ್ನಿಂದ ಆಗಿರುವ ತಪ್ಪಿಗೆ ಅವರ ವಸ್ತುಗಳನ್ನು ಸ್ವಚ್ಛಗೊಳಿಸಿದ್ದಾರೆ ಎಂದು ಹೇಳಿದರು. ಮಹಿಳೆಯ ಮಗಳು ಒಂದು ತಿಂಗಳ ನಂತರ ಹಣವನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು ಎಂದು ವರದಿಯಾಗಿದೆ.

ಇದನ್ನು ಓದಿ:Air India Flight: ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಗೆ ವಿಮಾನ ನಿರ್ಬಂಧ

ಈ ಮಧ್ಯೆ ಶಂಕರ್​ನನ್ನು ಕಂಪನಿಯು ಕೆಲಸದಿಂದ ವಜಾಗೊಳಿಸಿದೆ. ವೆಲ್ಸ್​ ಫಾರ್ಗೋ ಉದ್ಯೋಗಿಗಳು ವೃತ್ತಿಪರ ಹಾಗೂ ವೈಯಕ್ತಿಕವಾಗಿ ಉತ್ತಮ ನಡವಳಿಕೆಯನ್ನು ಹೊಂದಿದ್ದಾರೆ, ಇವರ ಮೇಲಿನ ಆರೋಪಗಳು ಕಂಪನಿಗೆ ಕೆಟ್ಟ ಹೆಸರನ್ನು ತಂದಿದೆ ಹೀಗಾಗಿ ಅವರನ್ನು ಕೆಲಸದಿಂದ ವಜಾ ಮಾಡುತ್ತಿರುವುದಾಗಿ ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:19 am, Sat, 7 January 23

ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ