AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India Alcohol Service Policy: ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ವಿಮಾನದಲ್ಲಿ ಮದ್ಯಪಾನ ಪೂರೈಕೆ ನಿಯಮ ಬದಲಿಸಿದ ಏರ್​ ಇಂಡಿಯಾ

ನೀವು ಕೂಡ ಆಗಾಗ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರೆ, ಈ ಸುದ್ದಿ ನಿಮಗೆ ಉಪಯುಕ್ತವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ನಂತರ ಏರ್ ಇಂಡಿಯಾ ತನ್ನ ವಿಮಾನದಲ್ಲಿ ಮದ್ಯ ಪೂರೈಕೆ ನಿಯಮದಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ.

Air India Alcohol Service Policy: ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ವಿಮಾನದಲ್ಲಿ ಮದ್ಯಪಾನ ಪೂರೈಕೆ ನಿಯಮ ಬದಲಿಸಿದ ಏರ್​ ಇಂಡಿಯಾ
ಏರ್ ಇಂಡಿಯಾ
Follow us
ನಯನಾ ರಾಜೀವ್
|

Updated on: Jan 25, 2023 | 9:50 AM

ನೀವು ಕೂಡ ಆಗಾಗ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರೆ, ಈ ಸುದ್ದಿ ನಿಮಗೆ ಉಪಯುಕ್ತವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ನಂತರ ಏರ್ ಇಂಡಿಯಾ ತನ್ನ ವಿಮಾನದಲ್ಲಿ ಮದ್ಯ ಪೂರೈಕೆ ನಿಯಮದಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ. ವಿಮಾನದಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಯ ಇತ್ತೀಚಿನ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು, ಏರ್ ಇಂಡಿಯಾ ತನ್ನ ಹಾರಾಟದ ಸಮಯದಲ್ಲಿ ಮದ್ಯವನ್ನು ಪೂರೈಸುವ ನೀತಿಯನ್ನು ಬದಲಾಯಿಸಿದೆ.

ಪರಿಷ್ಕೃತ ನೀತಿಯ ಪ್ರಕಾರ, ವಿಮಾನದ ಕ್ಯಾಬಿನ್ ಸಿಬ್ಬಂದಿಗೆ ಅಗತ್ಯವಿರುವಾಗ ವಿವೇಚನೆಯಿಂದ ಮದ್ಯವನ್ನು ಪೂರೈಸಲು ಕೇಳಲಾಗಿದೆ. ಮಂಗಳವಾರ (ಜನವರಿ 24) ಪರಿಷ್ಕೃತ ನೀತಿಗೆ ಸಂಬಂಧಿಸಿದ ಇಂತಹ ಹಲವು ವಿಷಯಗಳು ಮುನ್ನೆಲೆಗೆ ಬಂದಿವೆ. ಗಮನಾರ್ಹವಾಗಿ, ಕಳೆದ ಕೆಲವು ದಿನಗಳಲ್ಲಿ 2 ಅಂತಾರಾಷ್ಟ್ರೀಯ ವಿಮಾನಗಳಲ್ಲಿ ಪ್ರಯಾಣಿಕರ ಅನುಚಿತ ವರ್ತನೆಗಾಗಿ ಟಾಟಾ ಗ್ರೂಪ್ ಒಡೆತನದ ಏರ್‌ಲೈನ್ಸ್ (ಏರ್ ಇಂಡಿಯಾ) ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ದಂಡ ವಿಧಿಸಿದೆ.

ಮತ್ತಷ್ಟು ಓದಿ: Air India: ತಾಂತ್ರಿಕ ದೋಷ: ಮಸ್ಕತ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ತಿರುವನಂತಪುರಂಗೆ ವಾಪಸ್

ಪ್ರಸ್ತುತ, ಪರಿಷ್ಕೃತ ನೀತಿಯಲ್ಲಿ ನಿಖರವಾದ ಬದಲಾವಣೆಯನ್ನು ಖಚಿತಪಡಿಸಲು ಸಾಧ್ಯವಿಲ್ಲ. ಪರಿಷ್ಕೃತ ನೀತಿಯ ಪ್ರಕಾರ, ಸಿಬ್ಬಂದಿ ಸದಸ್ಯರು ತಾವೇ ಖುದ್ದಾಗಿ ತಂದು ಕುಡಿಯುವಂತಿಲ್ಲ, ನೀತಿಯ ಪ್ರಕಾರ, ಆಲ್ಕೋಹಾಲ್​ಯುಕ್ತ ಪಾನೀಯಗಳನ್ನು ಸೂಕ್ತ ಮತ್ತು ಸುರಕ್ಷಿತ ರೀತಿಯಲ್ಲಿ ನೀಡಬೇಕು. ಅತಿಥಿಗಳಿಗೆ ಆಲ್ಕೋಹಾಲ್ (ಮತ್ತಷ್ಟು) ನೀಡಲು ನಿರಾಕರಿಸುವುದು ಕೂಡ ಇದರಲ್ಲಿ ಸೇರಿದೆ.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ 

ಅಮೆರಿಕನ್ ನ್ಯಾಷನಲ್ ರೆಸ್ಟೊರೆಂಟ್ ಅಸೋಸಿಯೇಷನ್ ​​(ಎನ್‌ಆರ್‌ಎ) ಮಾರ್ಗಸೂಚಿಗಳ ಆಧಾರದ ಮೇಲೆ ವಿಮಾನದಲ್ಲಿ ಆಲ್ಕೋಹಾಲ್ ನೀಡುವ ಅಸ್ತಿತ್ವದಲ್ಲಿರುವ ನೀತಿಯನ್ನು ವಿಮಾನಯಾನವು ಪರಿಶೀಲಿಸಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ. ಏರ್ ಇಂಡಿಯಾ ಮೂತ್ರ ಹಗರಣದಲ್ಲಿ ವಿಮಾನದ ಮುಖ್ಯ ಪೈಲಟ್‌ನ ಪರವಾನಗಿಯನ್ನು ಅಮಾನತುಗೊಳಿಸಿದ ಆದೇಶವನ್ನು ರದ್ದುಗೊಳಿಸುವಂತೆ ವಾಯುಯಾನ ವಲಯದ ಆರು ಉದ್ಯೋಗಿಗಳ ಸಂಘಟನೆಗಳ ಜಂಟಿ ವೇದಿಕೆಯು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯಕ್ಕೆ (ಡಿಜಿಸಿಎ) ಮನವಿ ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು