AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India Alcohol Service Policy: ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ವಿಮಾನದಲ್ಲಿ ಮದ್ಯಪಾನ ಪೂರೈಕೆ ನಿಯಮ ಬದಲಿಸಿದ ಏರ್​ ಇಂಡಿಯಾ

ನೀವು ಕೂಡ ಆಗಾಗ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರೆ, ಈ ಸುದ್ದಿ ನಿಮಗೆ ಉಪಯುಕ್ತವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ನಂತರ ಏರ್ ಇಂಡಿಯಾ ತನ್ನ ವಿಮಾನದಲ್ಲಿ ಮದ್ಯ ಪೂರೈಕೆ ನಿಯಮದಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ.

Air India Alcohol Service Policy: ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ವಿಮಾನದಲ್ಲಿ ಮದ್ಯಪಾನ ಪೂರೈಕೆ ನಿಯಮ ಬದಲಿಸಿದ ಏರ್​ ಇಂಡಿಯಾ
ಏರ್ ಇಂಡಿಯಾ
ನಯನಾ ರಾಜೀವ್
|

Updated on: Jan 25, 2023 | 9:50 AM

Share

ನೀವು ಕೂಡ ಆಗಾಗ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರೆ, ಈ ಸುದ್ದಿ ನಿಮಗೆ ಉಪಯುಕ್ತವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ನಂತರ ಏರ್ ಇಂಡಿಯಾ ತನ್ನ ವಿಮಾನದಲ್ಲಿ ಮದ್ಯ ಪೂರೈಕೆ ನಿಯಮದಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ. ವಿಮಾನದಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಯ ಇತ್ತೀಚಿನ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು, ಏರ್ ಇಂಡಿಯಾ ತನ್ನ ಹಾರಾಟದ ಸಮಯದಲ್ಲಿ ಮದ್ಯವನ್ನು ಪೂರೈಸುವ ನೀತಿಯನ್ನು ಬದಲಾಯಿಸಿದೆ.

ಪರಿಷ್ಕೃತ ನೀತಿಯ ಪ್ರಕಾರ, ವಿಮಾನದ ಕ್ಯಾಬಿನ್ ಸಿಬ್ಬಂದಿಗೆ ಅಗತ್ಯವಿರುವಾಗ ವಿವೇಚನೆಯಿಂದ ಮದ್ಯವನ್ನು ಪೂರೈಸಲು ಕೇಳಲಾಗಿದೆ. ಮಂಗಳವಾರ (ಜನವರಿ 24) ಪರಿಷ್ಕೃತ ನೀತಿಗೆ ಸಂಬಂಧಿಸಿದ ಇಂತಹ ಹಲವು ವಿಷಯಗಳು ಮುನ್ನೆಲೆಗೆ ಬಂದಿವೆ. ಗಮನಾರ್ಹವಾಗಿ, ಕಳೆದ ಕೆಲವು ದಿನಗಳಲ್ಲಿ 2 ಅಂತಾರಾಷ್ಟ್ರೀಯ ವಿಮಾನಗಳಲ್ಲಿ ಪ್ರಯಾಣಿಕರ ಅನುಚಿತ ವರ್ತನೆಗಾಗಿ ಟಾಟಾ ಗ್ರೂಪ್ ಒಡೆತನದ ಏರ್‌ಲೈನ್ಸ್ (ಏರ್ ಇಂಡಿಯಾ) ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ದಂಡ ವಿಧಿಸಿದೆ.

ಮತ್ತಷ್ಟು ಓದಿ: Air India: ತಾಂತ್ರಿಕ ದೋಷ: ಮಸ್ಕತ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ತಿರುವನಂತಪುರಂಗೆ ವಾಪಸ್

ಪ್ರಸ್ತುತ, ಪರಿಷ್ಕೃತ ನೀತಿಯಲ್ಲಿ ನಿಖರವಾದ ಬದಲಾವಣೆಯನ್ನು ಖಚಿತಪಡಿಸಲು ಸಾಧ್ಯವಿಲ್ಲ. ಪರಿಷ್ಕೃತ ನೀತಿಯ ಪ್ರಕಾರ, ಸಿಬ್ಬಂದಿ ಸದಸ್ಯರು ತಾವೇ ಖುದ್ದಾಗಿ ತಂದು ಕುಡಿಯುವಂತಿಲ್ಲ, ನೀತಿಯ ಪ್ರಕಾರ, ಆಲ್ಕೋಹಾಲ್​ಯುಕ್ತ ಪಾನೀಯಗಳನ್ನು ಸೂಕ್ತ ಮತ್ತು ಸುರಕ್ಷಿತ ರೀತಿಯಲ್ಲಿ ನೀಡಬೇಕು. ಅತಿಥಿಗಳಿಗೆ ಆಲ್ಕೋಹಾಲ್ (ಮತ್ತಷ್ಟು) ನೀಡಲು ನಿರಾಕರಿಸುವುದು ಕೂಡ ಇದರಲ್ಲಿ ಸೇರಿದೆ.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ 

ಅಮೆರಿಕನ್ ನ್ಯಾಷನಲ್ ರೆಸ್ಟೊರೆಂಟ್ ಅಸೋಸಿಯೇಷನ್ ​​(ಎನ್‌ಆರ್‌ಎ) ಮಾರ್ಗಸೂಚಿಗಳ ಆಧಾರದ ಮೇಲೆ ವಿಮಾನದಲ್ಲಿ ಆಲ್ಕೋಹಾಲ್ ನೀಡುವ ಅಸ್ತಿತ್ವದಲ್ಲಿರುವ ನೀತಿಯನ್ನು ವಿಮಾನಯಾನವು ಪರಿಶೀಲಿಸಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ. ಏರ್ ಇಂಡಿಯಾ ಮೂತ್ರ ಹಗರಣದಲ್ಲಿ ವಿಮಾನದ ಮುಖ್ಯ ಪೈಲಟ್‌ನ ಪರವಾನಗಿಯನ್ನು ಅಮಾನತುಗೊಳಿಸಿದ ಆದೇಶವನ್ನು ರದ್ದುಗೊಳಿಸುವಂತೆ ವಾಯುಯಾನ ವಲಯದ ಆರು ಉದ್ಯೋಗಿಗಳ ಸಂಘಟನೆಗಳ ಜಂಟಿ ವೇದಿಕೆಯು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯಕ್ಕೆ (ಡಿಜಿಸಿಎ) ಮನವಿ ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ