AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

19 ಸಾವಿರ ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನ ಏಕಾಏಕಿ ಕೆಳಗೆ ಬಂದೇ ಬಿಡ್ತು, ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ಘರ್ಷಣೆ

ಏರ್​ ಇಂಡಿಯಾ ಹಾಗೂ ನೇಪಾಳ ಏರ್​ಲೈನ್ಸ್​ ವಿಮಾನ ಪರಸ್ಪರ ಡಿಕ್ಕಿಯಾಗುವುದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಬೆಳಗ್ಗೆ ಕಠ್ಮಂಡುವಿನಿಂದ ಮಲೇಷ್ಯಾದ ಕೌಲಾಲಂಪುರಕ್ಕೆ ತೆರಳುತ್ತಿದ್ದ ನೇಪಾಳ ಏರ್‌ಲೈನ್ಸ್ ವಿಮಾನ ಮತ್ತು ಕಠ್ಮಂಡುವಿನಿಂದ ನವದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಗಳು ಡಿಕ್ಕಿ ಹೊಡೆಯುವಷ್ಟು ಹತ್ತಿರ ತಲುಪಿದ್ದವು.

19 ಸಾವಿರ ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನ ಏಕಾಏಕಿ ಕೆಳಗೆ ಬಂದೇ ಬಿಡ್ತು, ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ಘರ್ಷಣೆ
ವಿಮಾನ
ನಯನಾ ರಾಜೀವ್
|

Updated on:Mar 27, 2023 | 9:17 AM

Share

ಏರ್​ ಇಂಡಿಯಾ ಹಾಗೂ ನೇಪಾಳ ಏರ್​ಲೈನ್ಸ್​ ವಿಮಾನ ಪರಸ್ಪರ ಡಿಕ್ಕಿಯಾಗುವುದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಬೆಳಗ್ಗೆ ಕಠ್ಮಂಡುವಿನಿಂದ ಮಲೇಷ್ಯಾದ ಕೌಲಾಲಂಪುರಕ್ಕೆ ತೆರಳುತ್ತಿದ್ದ ನೇಪಾಳ ಏರ್‌ಲೈನ್ಸ್ ವಿಮಾನ ಮತ್ತು ಕಠ್ಮಂಡುವಿನಿಂದ ನವದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಗಳು ಡಿಕ್ಕಿ ಹೊಡೆಯುವಷ್ಟು ಹತ್ತಿರ ತಲುಪಿದ್ದವು.

ನೇಪಾಳದ ನಾಗರಿಕ ವಿಮಾನಯಾನ ಪ್ರಾಧಿಕಾರ (ಸಿಎಎಎನ್) ಡಿಜಿಸಿಎಗೆ ಪತ್ರ ಬರೆದು ಈ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಿದೆ. ಸಿಎಎಎನ್ ವಕ್ತಾರ ಜಗನ್ನಾಥ್ ನಿರೋಲಾ ಮಾತನಾಡಿ, ನೇಪಾಳದ ವಾಯುಯಾನ ನಿಯಂತ್ರಕವು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಮತ್ತು ಅದರ ಮಾಹಿತಿಯನ್ನು ಹಂಚಿಕೊಳ್ಳಲು ಭಾರತೀಯ ನಿಯಂತ್ರಕರನ್ನು ಕೇಳಿದೆ.

ಏತನ್ಮಧ್ಯೆ, ಘಟನೆಯ ಸಂದರ್ಭದಲ್ಲಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ಆರೋಪದ ಮೇಲೆ ಸಿಎಎಎನ್ ಏರ್ ಟ್ರಾಫಿಕ್ ಕಂಟ್ರೋಲ್ ವಿಭಾಗದ ಮೂವರು ಉದ್ಯೋಗಿಗಳನ್ನು ಅಮಾನತುಗೊಳಿಸಿದೆ. ಅಧಿಕಾರಿಯ ಪ್ರಕಾರ, ಭಾರತೀಯ ಪೈಲಟ್‌ಗಳು ನೇಪಾಳಿ ಅಧಿಕಾರಿಗಳ ಅಧಿಕಾರ ವ್ಯಾಪ್ತಿಗೆ ಬರುವುದಿಲ್ಲ.

ಮತ್ತಷ್ಟು ಓದಿ: Nepal Aircraft Crash: ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ 72 ಪ್ರಯಾಣಿಕರಿದ್ದ ವಿಮಾನ ಪತನ

ನವದೆಹಲಿಯಿಂದ 19,000 ಅಡಿ ಎತ್ತರದಲ್ಲಿ ಹಾರುತ್ತಿದ್ದ ಏರ್ ಇಂಡಿಯಾ ವಿಮಾನವು ಶುಕ್ರವಾರ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ಮೊದಲು ಹಠಾತ್ 15,000 ಅಡಿ ಕೆಳಗೆ ಬಂದುಬಿಟ್ಟಿತ್ತು. ಇದು ಕೌಲಾಲಂಪುರ್‌ನಿಂದ ಕಠ್ಮಂಡುವಿಗೆ ಬರುತ್ತಿದ್ದ ನೇಪಾಳ ಏರ್‌ಲೈನ್ಸ್ ವಿಮಾನಕ್ಕೆ ಬಹಳ ಹತ್ತಿರ ಬಂದಂತಾಗಿತ್ತು ಮತ್ತು ನೇಪಾಳ ಏರ್‌ಲೈನ್ಸ್ ಪೈಲಟ್‌ಗಳು ತಮ್ಮ ವಿಮಾನವನ್ನು 7,000 ಅಡಿಗಳಿಗೆ ಇಳಿಸಿ ಅಪಘಾತ ತಪ್ಪಿಸಿದ್ದರು.

ನೇಪಾಳ ಏರ್‌ಲೈನ್ಸ್ ವಿಮಾನವು 15,000 ಅಡಿ ಎತ್ತರದಲ್ಲಿತ್ತು, ಏರ್ ಇಂಡಿಯಾ ವಿಮಾನವು ಅದೇ ಎತ್ತರಕ್ಕೆ ಇದ್ದಕ್ಕಿದ್ದಂತೆ ಬಂದಿತ್ತು.

ಕಾಕ್‌ಪಿಟ್‌ಗಳಲ್ಲಿ ಸ್ವಯಂಚಾಲಿತವಾಗಿ ಅಲರ್ಟ್ ಸದ್ದು ಮಾಡಿದ್ದು, ಸಂಭಾವ್ಯ ಮಾರಣಾಂತಿಕ ಅಪಘಾತವನ್ನು ತಪ್ಪಿಸಲಾಗಿದೆ ಎಂದು ನೇಪಾಳದ ನಾಗರಿಕ ವಿಮಾನಯಾನ ಪ್ರಾಧಿಕಾರದ (ಸಿಎಎಎನ್) ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:15 am, Mon, 27 March 23

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ