AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರೊಬ್ಬರ ಕಾಲ ಮೇಲೆ ಬಿಸಿ ನೀರು ಚೆಲ್ಲಿ ಚರ್ಮ ಕಿತ್ತು ಬಂದರೂ ಹಿಂದಿರುಗಿ ನೋಡದ ಏರ್​ ಇಂಡಿಯಾ ಸಿಬ್ಬಂದಿ

ಪ್ರಯಾಣಿಕರೊಬ್ಬರ ಕಾಲಿನ ಮೇಲೆ ಬಿಸಿ ನೀರು ಚೆಲ್ಲಿ, ಚರ್ಮ ಕಿತ್ತು ಬಂದರೂ ಏರ್​ ಇಂಡಿಯಾ(Air India) ಸಿಬ್ಬಂದಿ ಹಿಂದಿರುಗಿ ನೋಡಲಿಲ್ಲ. ದೆಹಲಿಯಿಂದ ಸ್ಯಾನ್​ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್​ ಇಂಡಿಯಾ ವಿಮಾನದಲ್ಲಿ ಈ ಘಟನೆ ನಡೆದಿದೆ. ವಿಮಾನದಲ್ಲಿ ಪ್ರಯಾಣಿಕರೊಬ್ಬರ ಕಾಲ ಮೇಲೆ ಸಿಬ್ಬಂದಿ ಬಿಸಿ ನೀರು ಚೆಲ್ಲಿದ್ದಾರೆ, ಉರಿ ಉರಿ ಎಂದು ಕೂಗುತ್ತಿದ್ದರೂ ಮಹಿಳಾ ಪ್ರಯಾಣಿಕರನ್ನು ಸರಿಯಾಗಿ ಉಪಚರಿಸದೇ ಇದ್ದಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರಯಾಣಿಕರೊಬ್ಬರ ಕಾಲ ಮೇಲೆ ಬಿಸಿ ನೀರು ಚೆಲ್ಲಿ ಚರ್ಮ ಕಿತ್ತು ಬಂದರೂ ಹಿಂದಿರುಗಿ ನೋಡದ ಏರ್​ ಇಂಡಿಯಾ ಸಿಬ್ಬಂದಿ
ಏರ್ ಇಂಡಿಯಾ
ನಯನಾ ರಾಜೀವ್
|

Updated on:Sep 29, 2023 | 10:15 AM

Share

ಪ್ರಯಾಣಿಕರೊಬ್ಬರ ಕಾಲಿನ ಮೇಲೆ ಬಿಸಿ ನೀರು ಚೆಲ್ಲಿ, ಚರ್ಮ ಕಿತ್ತು ಬಂದರೂ ಏರ್​ ಇಂಡಿಯಾ(Air India) ಸಿಬ್ಬಂದಿ ಹಿಂದಿರುಗಿ ನೋಡಲಿಲ್ಲ. ದೆಹಲಿಯಿಂದ ಸ್ಯಾನ್​ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್​ ಇಂಡಿಯಾ ವಿಮಾನದಲ್ಲಿ ಈ ಘಟನೆ ನಡೆದಿದೆ. ವಿಮಾನದಲ್ಲಿ ಪ್ರಯಾಣಿಕರೊಬ್ಬರ ಕಾಲ ಮೇಲೆ ಸಿಬ್ಬಂದಿ ಬಿಸಿ ನೀರು ಚೆಲ್ಲಿದ್ದಾರೆ, ಉರಿ ಉರಿ ಎಂದು ಕೂಗುತ್ತಿದ್ದರೂ ಮಹಿಳಾ ಪ್ರಯಾಣಿಕರನ್ನು ಸರಿಯಾಗಿ ಉಪಚರಿಸದೇ ಇದ್ದಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಬಿಸಿ ನೀರು ಚೆಲ್ಲಿದ್ದ ಕಾರಣ ಚರ್ಮ ಕಿತ್ತು ಬಂದಿತ್ತು, ಎಕ್ಸ್​ನಲ್ಲಿ ಈ ಕುರಿತು ಚಾರು ತೋಮರ್ ಎಂಬುವವರು ಮಾಹಿತಿ ಹಂಚಿಕೊಂಡಿದ್ದಾರೆ, ಸಿಬ್ಬಂದಿಗೆ ತರಬೇತಿ ಕೊರತೆ ಇರಬಹುದು ಎಂದು ಹೇಳಿದ್ದಾರೆ. ಮಹಿಳೆಯು 4 ವರ್ಷದ ಮಗ ಹಾಗೂ 83 ವರ್ಷದ ಅತ್ತೆ ಜತೆ ಪ್ರಯಾಣಿಸುತ್ತಿದ್ದರು, ಅಟೆಂಡೆಂಟ್ ಕಾಳಿನ ಮೇಲೆ ಬಿಸಿ ನೀರು ಚೆಲ್ಲಿದ ಕಾರಣ ಸುಟ್ಟ ಗಾಯಗಳಾಗಿತ್ತು. ಏರ್ ಈ ಕುರಿತು ಪ್ರಯಾಣಿಕರ ಬಳಿ ಕ್ಷಮೆಯಾಚಿಸಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದೆ.

ನೋವು ಕಡಿಮೆ ಮಾಡಲು ಏನಾದರೂ ನೀಡಿ ಎಂದು ಎಷ್ಟೇ ಮನವಿ ಮಾಡಿಕೊಂಡರೂ ಸಿಬ್ಬಂದಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ವಿಮಾನದಲ್ಲಿದ್ದ ವೈದ್ಯರು ಆಕೆಗೆ ಸಹಾಯ ಮಾಡಿದರು, ವಿಮಾನದಲ್ಲಿ ಅಗತ್ಯ ವೈದ್ಯಕೀಯ ಸಾಮಗ್ರಿಗಳ ಕೊರತೆಯನ್ನು ಹೊಂದಿತ್ತು. ಪ್ರಥಮ ಚಿಕಿತ್ಸಾ ಕಿಟ್​ ಕೂಡ ಲಭ್ಯವಿರಲಿಲ್ಲ. ಎರಡು ಗಂಟೆಗಳ ಕಾಲ ತೀವ್ರ ನೋವು ಅನುಭವಿಸಿದೆ ಎಂದು ಹೇಳಿಕೊಂಡಿದ್ದಾರೆ.

ಮತ್ತಷ್ಟು ಓದಿ: Air India: ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೆಲವೇ ಗಂಟೆಗಳಲ್ಲಿ ಕೇರಳಕ್ಕೆ ವಾಪಸ್

ಸ್ಯಾನ್​ಫ್ರಾನ್ಸಿಸ್ಕೋದಲ್ಲಿ ಲ್ಯಾಂಡ್ ಆದ ನಂತರವೂ ಎರ್ ಇಂಡಿಯಾ ವಿಮಾನ ಸಿಬ್ಬಂದಿ ಯಾವುದೇ ಸಹಾಯ ಮಾಡಲಿಲ್ಲ, ಅವರಿಗೆ ನನ್ನನ್ನು ಉಪಚರಿಸುವುದಕ್ಕಿಂತ ಲ್ಯಾಂಡಿಂಗ್​ಗೆ ಸಿದ್ಧತೆ ಮಾಡಿಕೊಳ್ಳುವುದೇ ಹೆಚ್ಚಾಗಿತ್ತು ಎಂದಿದ್ದಾರೆ. ಇಷ್ಟೆಲ್ಲಾ ನಡೆದರೂ ಸಿಬ್ಬಂದಿ ಆರೈಕೆ ಮಾಡುವ ಬದಲು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದರು ಎಂದು ಮಹಿಳೆ ದೂರಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:48 am, Fri, 29 September 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ