AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ವರ್ಷದ ಮಗಳೆದುರೇ ರಕ್ತ ಬರುವಂತೆ ಪ್ರಯಾಣಿಕನ ಮೇಲೆ ಏರ್ ಇಂಡಿಯಾ ಪೈಲಟ್ ಹಲ್ಲೆ

ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಪೈಲಟ್ ಕ್ಯಾಪ್ಟನ್ ವೀರೇಂದ್ರ ಪ್ರಯಾಣಿಕ ಅಂಕಿತ್ ದಿವಾನ್ ಮೇಲೆ ಹಲ್ಲೆ ನಡೆಸಿದ್ದಾರೆ. 7 ವರ್ಷದ ಮಗಳೆದುರೇ ನಡೆದ ಈ ಘಟನೆಯಲ್ಲಿ ಪ್ರಯಾಣಿಕನಿಗೆ ರಕ್ತಸ್ರಾವವಾಗಿದೆ. ಸಿಬ್ಬಂದಿ ಮಾರ್ಗ ಬಳಸುವ ವಿಚಾರವಾಗಿ ಮಾತಿನ ಚಕಮಕಿ ನಡೆದಿತ್ತು. ವೀಡಿಯೊಗಳು ವೈರಲ್ ಆದ ನಂತರ, ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್ ಅನ್ನು ಅಮಾನತುಗೊಳಿಸಿದೆ. ಕುಟುಂಬಕ್ಕೆ ಆಘಾತವಾಗಿದೆ.

7 ವರ್ಷದ ಮಗಳೆದುರೇ ರಕ್ತ ಬರುವಂತೆ ಪ್ರಯಾಣಿಕನ ಮೇಲೆ ಏರ್ ಇಂಡಿಯಾ ಪೈಲಟ್ ಹಲ್ಲೆ
ಪ್ರಯಾಣಿಕನ ಮೇಲೆ ಪೈಲಟ್ ಹಲ್ಲೆ
ನಯನಾ ರಾಜೀವ್
|

Updated on: Dec 20, 2025 | 1:16 PM

Share

ನವದೆಹಲಿ, ಡಿಸೆಂಬರ್ 20: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರಿಯ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಏರ್ ಇಂಡಿಯಾ ಪೈಲಟ್(Pilot) ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಪೈಲಟ್ ಕ್ಯಾಪ್ಟನ್ ವೀರೇಂದ್ರ ತನ್ನೊಂದಿಗೆ ಕೆಟ್ಟದಾಗಿ ವರ್ತಿಸಿದ್ದಲ್ಲದೆ, ದೈಹಿಕವಾಗಿ ಹಲ್ಲೆ ನಡೆಸಿದ್ದರಿಂದ ರಕ್ತಸ್ರಾವವಾಗಿದೆ ಎಂದು ಅಂಕಿತ್ ದಿವಾನ್ ಆರೋಪಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊಗಳು ಮತ್ತು ಫೋಟೋಗಳು ಕಾಣಿಸಿಕೊಂಡ ನಂತರ ಈ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಈ ಘಟನೆಯು ತನ್ನ ಇಡೀ ರಜೆಯನ್ನು ಹಾಳುಮಾಡಿದೆ ಮತ್ತು ತನ್ನ ಕುಟುಂಬ, ವಿಶೇಷವಾಗಿ ತನ್ನ 7 ವರ್ಷದ ಮಗಳು ಇನ್ನೂ ಆಘಾತದಲ್ಲಿದ್ದಾರೆ ಎಂದು ಅಂಕಿತ್ ಹೇಳಿದ್ದಾರೆ. ಘಟನೆಯ ನಂತರ, ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಷಾದ ವ್ಯಕ್ತಪಡಿಸಿ ಹೇಳಿಕೆ ನೀಡಿ, ಆರೋಪಿ ಪೈಲಟ್‌ನನ್ನು ತಕ್ಷಣವೇ ಕರ್ತವ್ಯದಿಂದ ತೆಗೆದುಹಾಕಿದೆ.

ನಮ್ಮೊಂದಿಗೆ 4 ತಿಂಗಳ ಮಗು ಇದ್ದ ಸಿಬ್ಬಂದಿ ಬಳಸುವ ಭದ್ರತಾ ತಪಾಸಣಾ ಮಾರ್ಗಕ್ಕೆ ಪ್ರವೇಶಿಸಲು ಕೇಳಿದ್ದೆವು. ಆಗ ನಾವು ಆ ಮಾರ್ಗದಲ್ಲಿ ಹೋಗುವ ವೇಳೆ ಕ್ಯಾಪ್ಟನ್ ವೀರೇಂದ್ರ ಕೋಪಗೊಂಡು, ನೀವು ಅನಕ್ಷರಸ್ಥರೇ ಈ ಮಾರ್ಗ ಸಿಬ್ಬಂದಿಗೆ ಮಾತ್ರ ಎಂದು ಹೇಳುವ ಫಲಕವನ್ನು ನೀವು ಓದಿಲ್ಲವೇ ಎಂದು ಕೇಳಿದ್ದರು, ನಂತರ ಮಾತಿನ ಚಕಮಕಿ ನಡೆಯಿತು ಎಂದು ಪ್ರಯಾಣಿಕ ಬರೆದಿದ್ದಾರೆ. ಆಗ ನನ್ನ 7 ವರ್ಷದ ಮಗಳ ಮುಂದೆಯೇ ನನಗೆ ರಕ್ತ ಬರುವ ಹಾಗೆ ಅವರು ಹಲ್ಲೆ ನಡೆಸಿದ್ದಾರೆ.ಪೈಲಟ್ ಶರ್ಟ್ ಮೇಲಿನ ರಕ್ತ ನನ್ನದೇ ಆಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!
ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!