AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ವರ್ಷದ ಮಗಳೆದುರೇ ರಕ್ತ ಬರುವಂತೆ ಪ್ರಯಾಣಿಕನ ಮೇಲೆ ಏರ್ ಇಂಡಿಯಾ ಪೈಲಟ್ ಹಲ್ಲೆ

ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಪೈಲಟ್ ಕ್ಯಾಪ್ಟನ್ ವೀರೇಂದ್ರ ಪ್ರಯಾಣಿಕ ಅಂಕಿತ್ ದಿವಾನ್ ಮೇಲೆ ಹಲ್ಲೆ ನಡೆಸಿದ್ದಾರೆ. 7 ವರ್ಷದ ಮಗಳೆದುರೇ ನಡೆದ ಈ ಘಟನೆಯಲ್ಲಿ ಪ್ರಯಾಣಿಕನಿಗೆ ರಕ್ತಸ್ರಾವವಾಗಿದೆ. ಸಿಬ್ಬಂದಿ ಮಾರ್ಗ ಬಳಸುವ ವಿಚಾರವಾಗಿ ಮಾತಿನ ಚಕಮಕಿ ನಡೆದಿತ್ತು. ವೀಡಿಯೊಗಳು ವೈರಲ್ ಆದ ನಂತರ, ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್ ಅನ್ನು ಅಮಾನತುಗೊಳಿಸಿದೆ. ಕುಟುಂಬಕ್ಕೆ ಆಘಾತವಾಗಿದೆ.

7 ವರ್ಷದ ಮಗಳೆದುರೇ ರಕ್ತ ಬರುವಂತೆ ಪ್ರಯಾಣಿಕನ ಮೇಲೆ ಏರ್ ಇಂಡಿಯಾ ಪೈಲಟ್ ಹಲ್ಲೆ
ಪ್ರಯಾಣಿಕನ ಮೇಲೆ ಪೈಲಟ್ ಹಲ್ಲೆ
ನಯನಾ ರಾಜೀವ್
|

Updated on: Dec 20, 2025 | 1:16 PM

Share

ನವದೆಹಲಿ, ಡಿಸೆಂಬರ್ 20: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರಿಯ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಏರ್ ಇಂಡಿಯಾ ಪೈಲಟ್(Pilot) ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಪೈಲಟ್ ಕ್ಯಾಪ್ಟನ್ ವೀರೇಂದ್ರ ತನ್ನೊಂದಿಗೆ ಕೆಟ್ಟದಾಗಿ ವರ್ತಿಸಿದ್ದಲ್ಲದೆ, ದೈಹಿಕವಾಗಿ ಹಲ್ಲೆ ನಡೆಸಿದ್ದರಿಂದ ರಕ್ತಸ್ರಾವವಾಗಿದೆ ಎಂದು ಅಂಕಿತ್ ದಿವಾನ್ ಆರೋಪಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊಗಳು ಮತ್ತು ಫೋಟೋಗಳು ಕಾಣಿಸಿಕೊಂಡ ನಂತರ ಈ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಈ ಘಟನೆಯು ತನ್ನ ಇಡೀ ರಜೆಯನ್ನು ಹಾಳುಮಾಡಿದೆ ಮತ್ತು ತನ್ನ ಕುಟುಂಬ, ವಿಶೇಷವಾಗಿ ತನ್ನ 7 ವರ್ಷದ ಮಗಳು ಇನ್ನೂ ಆಘಾತದಲ್ಲಿದ್ದಾರೆ ಎಂದು ಅಂಕಿತ್ ಹೇಳಿದ್ದಾರೆ. ಘಟನೆಯ ನಂತರ, ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಷಾದ ವ್ಯಕ್ತಪಡಿಸಿ ಹೇಳಿಕೆ ನೀಡಿ, ಆರೋಪಿ ಪೈಲಟ್‌ನನ್ನು ತಕ್ಷಣವೇ ಕರ್ತವ್ಯದಿಂದ ತೆಗೆದುಹಾಕಿದೆ.

ನಮ್ಮೊಂದಿಗೆ 4 ತಿಂಗಳ ಮಗು ಇದ್ದ ಸಿಬ್ಬಂದಿ ಬಳಸುವ ಭದ್ರತಾ ತಪಾಸಣಾ ಮಾರ್ಗಕ್ಕೆ ಪ್ರವೇಶಿಸಲು ಕೇಳಿದ್ದೆವು. ಆಗ ನಾವು ಆ ಮಾರ್ಗದಲ್ಲಿ ಹೋಗುವ ವೇಳೆ ಕ್ಯಾಪ್ಟನ್ ವೀರೇಂದ್ರ ಕೋಪಗೊಂಡು, ನೀವು ಅನಕ್ಷರಸ್ಥರೇ ಈ ಮಾರ್ಗ ಸಿಬ್ಬಂದಿಗೆ ಮಾತ್ರ ಎಂದು ಹೇಳುವ ಫಲಕವನ್ನು ನೀವು ಓದಿಲ್ಲವೇ ಎಂದು ಕೇಳಿದ್ದರು, ನಂತರ ಮಾತಿನ ಚಕಮಕಿ ನಡೆಯಿತು ಎಂದು ಪ್ರಯಾಣಿಕ ಬರೆದಿದ್ದಾರೆ. ಆಗ ನನ್ನ 7 ವರ್ಷದ ಮಗಳ ಮುಂದೆಯೇ ನನಗೆ ರಕ್ತ ಬರುವ ಹಾಗೆ ಅವರು ಹಲ್ಲೆ ನಡೆಸಿದ್ದಾರೆ.ಪೈಲಟ್ ಶರ್ಟ್ ಮೇಲಿನ ರಕ್ತ ನನ್ನದೇ ಆಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?