AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೊಬ್ಬ ಮಹಿಳೆ ಜೊತೆ ಪ್ಲಾನ್ ಮಾಡಿ ಕೊಲೆ; ಏರ್ ಇಂಡಿಯಾ ಪೈಲಟ್ ಸಾವಿನ ಬಗ್ಗೆ ಕುಟುಂಬಸ್ಥರ ಆರೋಪ

ಏರ್ ಇಂಡಿಯಾ ಪೈಲಟ್​ ಆಗಿದ್ದ ಯುವತಿಯ ಸಾವು ಇದೀಗ ಭಾರೀ ಅನುಮಾನಗಳನ್ನು ಹುಟ್ಟುಹಾಕಿದೆ. ಇದು ಆತ್ಮಹತ್ಯೆಯಲ್ಲ, ಪ್ಲಾನ್ ಮಾಡಿ ಮಾಡಲಾದ ಕೊಲೆ. ಈ ಕೊಲೆಯಲ್ಲಿ ಮೃತ ಯುವತಿಯ ಪ್ರಿಯಕರನ ಜೊತೆ ಇನ್ನೋರ್ವ ಮಹಿಳೆಯೂ ಭಾಗಿಯಾಗಿದ್ದಾಳೆ ಎಂದು ಮೃತ ಪೈಲಟ್ ಕುಟುಂಬಸ್ಥರು ಆರೋಪಿಸಿದ್ದಾರೆ.

ಇನ್ನೊಬ್ಬ ಮಹಿಳೆ ಜೊತೆ ಪ್ಲಾನ್ ಮಾಡಿ ಕೊಲೆ; ಏರ್ ಇಂಡಿಯಾ ಪೈಲಟ್ ಸಾವಿನ ಬಗ್ಗೆ ಕುಟುಂಬಸ್ಥರ ಆರೋಪ
ಸೃಷ್ಟಿ
ಸುಷ್ಮಾ ಚಕ್ರೆ
|

Updated on: Nov 28, 2024 | 8:04 PM

Share

ನವದೆಹಲಿ: ಮುಂಬೈನ ಅಂಧೇರಿಯ ಫ್ಲಾಟ್‌ನಲ್ಲಿ ಶವವಾಗಿ ಪತ್ತೆಯಾದ 25 ವರ್ಷದ ಏರ್ ಇಂಡಿಯಾ ಪೈಲಟ್ ಸೃಷ್ಟಿ ತುಲಿ ಸಾವು ಭಾರೀ ಚರ್ಚೆಗೆ ಕಾರಣವಾಗಿದೆ. ಆತ್ಮಹತ್ಯೆ ಮಾಡಿಕೊಂಡು ಆಕೆ ಸಾವನ್ನಪ್ಪಿದ್ದಾಳೆ ಎನ್ನಲಾಗಿತ್ತು. ಆದರೆ, ಇದೊಂದು ಕೊಲೆ ಎಂದು ಆಕೆಯ ಮನೆಯವರು ಆರೋಪಿಸಿದ್ದಾರೆ. ಆಕೆ ಸಾವನ್ನಪ್ಪಿದ್ದಾಳೆ ಎಂದು ಸುದ್ದಿ ತಿಳಿಯುವ 15 ನಿಮಿಷ ಮೊದಲು ಆಕೆ ತನ್ನ ತಾಯಿ ಮತ್ತು ಚಿಕ್ಕಮ್ಮನೊಂದಿಗೆ ಖುಷಿಯಾಗಿ ಮಾತನಾಡಿದ್ದಳು. ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲ. ಸೃಷ್ಟಿಯನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಸೃಷ್ಟಿಯ 27 ವರ್ಷದ ಪ್ರೇಮಿ ಆದಿತ್ಯ ಪಂಡಿತ್ ಆಕೆಗೆ ಸಾರ್ವಜನಿಕವಾಗಿ ಬೈದು, ಮಾನಸಿಕ ಹಿಂಸೆ ನೀಡಿದ್ದ ಎಂದು ಅವರು ಆರೋಪಿಸಿದ್ದಾರೆ. ಸೃಷ್ಟಿಯ ಚಿಕ್ಕಪ್ಪ ವಿವೇಕ್ ತುಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಪೊಲೀಸರು ಸೃಷ್ಟಿ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾಳೆ ಎಂದು ಹೇಳುತ್ತಿದ್ದಾರೆ. ಆದರೆ ಆಕೆ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು? ಆಕೆಯ ಪ್ರೇಮಿಯೇ ಏನೋ ಮಾಡಿರುತ್ತಾನೆ. 15 ನಿಮಿಷ ಮೊದಲು ಸೃಷ್ಟಿ ತನ್ನ ತಾಯಿ ಮತ್ತು ಚಿಕ್ಕಮ್ಮನೊಂದಿಗೆ ಮಾತನಾಡುವಾಗ ತುಂಬಾ ಖುಷಿಯಾಗಿ ಮಾತನಾಡಿದ್ದಳು. ಅವಳ ಧ್ವನಿಯಲ್ಲಿ ಯಾವುದೇ ನೋವಾಗಲಿ ಬೇಸರವಾಗಲಿ ಇರಲಿಲ್ಲ. ಅದಾದ 15 ನಿಮಿಷದಲ್ಲಿ ಆಕೆ ಸಾವನ್ನಪ್ಪಿರುವ ವಿಷಯ ನಮಗೆ ತಿಳಿಯಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Viral: ಪ್ರಾಣ ಪಣಕ್ಕಿಟ್ಟು ರೈಲ್ವೆ ಸೇತುವೆಯಲ್ಲಿ ನಿಂತಿದ್ದ ರೈಲಿನಡಿ ಹೋಗಿ ದುರಸ್ತಿ ಕಾರ್ಯ ಮಾಡಿದ ಲೋಕೋ ಪೈಲಟ್

ಈ ಬಗ್ಗೆ ವಿವೇಕ್ ಮುಂಬೈ ಪೊಲೀಸರಿಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಆದಿತ್ಯನನ್ನು ಬಂಧಿಸಿ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಸೃಷ್ಟಿ ಮೃತದೇಹ ಪತ್ತೆಯಾದ ಫ್ಲಾಟ್​ನಲ್ಲಿ ಸೂಸೈಡ್ ನೋಟ್ ಪತ್ತೆಯಾಗಿಲ್ಲ. ಆದಿತ್ಯ ಸೋಮವಾರ ತನ್ನ ಕಾರಿನಲ್ಲಿ ಫರಿದಾಬಾದ್‌ಗೆ ತೆರಳಿದಾಗ ಸೃಷ್ಟಿ ಅವರಿಗೆ ಫೋನ್ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿರುವುದಾಗಿ ವಿಚಾರಣೆ ವೇಳೆ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆದಿತ್ಯ ಹೆದರಿ ಫ್ಲಾಟ್‌ಗೆ ವಾಪಾಸ್ ಬಂದಾಗ ಅದರ ಬಾಗಿಲು ಲಾಕ್ ಆಗಿತ್ತು. ಆದಿತ್ಯ ಮತ್ತು ಇನ್ನೊಬ್ಬ ಮಹಿಳಾ ಪೈಲಟ್ ಆ ಫ್ಲಾಟ್​ನ ಬೀಗ ಇರುವ ಇನ್ನೊಬ್ಬರನ್ನು ಕರೆತಂದರು. ಅವರು ಬಾಗಿಲು ತೆರೆದರು. ಆಗ ಕುತ್ತಿಗೆಗೆ ಡೇಟಾ ಕೇಬಲ್‌ ಸುತ್ತಿಕೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸೃಷ್ಟಿಯನ್ನು ನೋಡಿದ ಅವರು ತಕ್ಷಣ ಸೃಷ್ಟಿಯನ್ನು ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಅವಳು ಸಾವನ್ನಪ್ಪಿದ್ದಾಳೆ ಎಂದು ಘೋಷಿಸಲಾಯಿತು ಎಂದು ಆದಿತ್ಯ ವಿವರಿಸಿದ್ದಾನೆ.

ಇದನ್ನೂ ಓದಿ: ಆಗ್ರಾ ಬಳಿ ಮಿಗ್-29 ಯುದ್ಧ ವಿಮಾನ ಪತನ; ಪೈಲಟ್‌ಗಳು ಪಾರು

ಇನ್ನೋರ್ವ ಮಹಿಳಾ ಪೈಲಟ್ ಜೊತೆ ಸಂಬಂಧ ಹೊಂದಿದ್ದ ಆದಿತ್ಯ ಆಕೆಯ ಕಾರಣದಿಂದ ಸೃಷ್ಟಿಗೆ ಸಾರ್ವಜನಿಕವಾಗಿ ಅವಮಾನ ಮಾಡಿದ್ದ. ಅವಳನ್ನು ನಡುರಸ್ತೆಯಲ್ಲಿ ಕಾರಿನಿಂದ ಇಳಿಸಿ ನಿಂದಿಸಿದ್ದ. ಅದೇ ಮಹಿಳೆಯ ಜೊತೆ ಸೇರಿ ಸೃಷ್ಟಿಯನ್ನು ಕೊಂದು ಅವರಿಬ್ಬರೂ ಇದೊಂದು ಆತ್ಮಹತ್ಯೆ ಎಂದು ನಾಟಕವಾಡುತ್ತಿದ್ದಾರೆ ಎಂದು ಸೃಷ್ಟಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ