AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India: ಏರ್​ ಇಂಡಿಯಾ ಪೈಲಟ್ ಕಾಕ್​ಪಿಟ್​ ಒಳಗೆ ಗೆಳತಿಯ ಕರೆದೊಯ್ದ ಪ್ರಕರಣ: ಸಿಇಒ ವಿಲ್ಸನ್​ಗೆ ಶೋಕಾಸ್ ನೋಟಿಸ್

ವಿಮಾನದ ಕಾಕ್​ಪಿಟ್​ನಲ್ಲಿ ಪೈಲಟ್​ ಒಬ್ಬರು ತನ್ನ ಸ್ನೇಹಿತೆಯನ್ನು ಕೂರಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್​ ಇಂಡಿಯಾ ಸಿಇಒ ವಿಲ್ಸನ್​ ಕ್ಯಾಂಪ್​ಬೆಲ್​ಗೆ ಡಿಜಿಸಿಎ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

Air India: ಏರ್​ ಇಂಡಿಯಾ ಪೈಲಟ್ ಕಾಕ್​ಪಿಟ್​ ಒಳಗೆ ಗೆಳತಿಯ ಕರೆದೊಯ್ದ ಪ್ರಕರಣ: ಸಿಇಒ ವಿಲ್ಸನ್​ಗೆ ಶೋಕಾಸ್ ನೋಟಿಸ್
ಏರ್ ಇಂಡಿಯಾ ವಿಮಾನ
ನಯನಾ ರಾಜೀವ್
|

Updated on: Apr 30, 2023 | 2:42 PM

Share

ವಿಮಾನದ ಕಾಕ್​ಪಿಟ್​ನಲ್ಲಿ ಪೈಲಟ್​ ಒಬ್ಬರು ತನ್ನ ಗೆಳತಿಯನ್ನು ಕೂರಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್​ ಇಂಡಿಯಾ ಸಿಇಒ ವಿಲ್ಸನ್​ ಕ್ಯಾಂಪ್​ಬೆಲ್​ಗೆ ಡಿಜಿಸಿಎ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಏರ್‌ಲೈನ್‌ನ ಸುರಕ್ಷತೆ, ಭದ್ರತೆ ಮತ್ತು ಗುಣಮಟ್ಟ ಕಾರ್ಯಗಳ ಮುಖ್ಯಸ್ಥ ಹೆನ್ರಿ ಡೊನೊಹೋ ಅವರಿಗೂ ಕೂಡ ಶೋಕಾಸ್ ನೋಟಿಸ್ ನೀಡಲಾಗಿದೆ. ಮಹಿಳಾ ಸ್ನೇಹಿತೆಯನ್ನು ಕಾಕ್‌ಪಿಟ್‌ಗೆ ಪೈಲಟ್ ಅನುಮತಿಸಿದ ಬಗ್ಗೆ ವಿಮಾನದ ಕ್ಯಾಬಿನ್ ಸಿಬ್ಬಂದಿಯೊಬ್ಬರು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯಕ್ಕೆ (ಡಿಜಿಸಿಎ) ದೂರು ಸಲ್ಲಿಸಿದ್ದರು. ಫೆಬ್ರವರಿ 27 ರಂದು ಈ ಘಟನೆ ನಡೆದಿದ್ದು, ಈ ಕುರಿತು ವರದಿ ಮಾಡದ ಕಾರಣ ಏರ್​ ಇಂಡಿಯಾ ಸಿಇಒಗೆ ಶೋಖಾಸ್ ನೋಟಿಸ್ ಜಾರಿ ಮಾಡಲಾಗಿದೆ.

ಅಲ್ಲದೆ, ಘಟನೆಯ ತನಿಖೆಯಲ್ಲಿ ವಿಳಂಬವಾಗಿದೆ. ಶೋಕಾಸ್ ನೋಟಿಸ್‌ಗೆ ಉತ್ತರಿಸಲು ಇಬ್ಬರೂ ಕಾರ್ಯನಿರ್ವಾಹಕರಿಗೆ 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಏರ್ ಇಂಡಿಯಾದಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಈ ತಿಂಗಳ ಆರಂಭದಲ್ಲಿ, ತನಿಖೆ ಪೂರ್ಣಗೊಳ್ಳುವವರೆಗೆ ದುಬೈ-ದೆಹಲಿ ವಿಮಾನದ ಸಂಪೂರ್ಣ ಸಿಬ್ಬಂದಿಯನ್ನು ಕೆಲಸದಿಂದ ತೆಗೆದುಹಾಕುವಂತೆ ಡಿಜಿಸಿಎ ಏರ್ ಇಂಡಿಯಾಗೆ ನಿರ್ದೇಶನ ನೀಡಿದೆ.

ಮತ್ತಷ್ಟು ಓದಿ: Australia: ವಿಮಾನದಲ್ಲಿ ಪ್ರಯಾಣಿಕರ ಹೊಡೆದಾಟ ಬೇರೆ ದಾರಿ ತೋಚದೆ ತುರ್ತು ಭೂಸ್ಪರ್ಶ

ಏಪ್ರಿಲ್ 21 ರಂದು, ವರದಿಯಾದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಮತ್ತು ತನಿಖೆಗಳು ನಡೆಯುತ್ತಿವೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ. ಅನಧಿಕೃತ ಜನರನ್ನು ಕಾಕ್‌ಪಿಟ್‌ಗೆ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ ಮತ್ತು ಅಂತಹ ಯಾವುದೇ ಪ್ರವೇಶವು ನಿಯಮಗಳ ಉಲ್ಲಂಘನೆಯಾಗಬಹುದು ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ