AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪಿದ ಭಾರೀ ಅನಾಹುತ; ಮುಂಬೈ ವಿಮಾನ ನಿಲ್ದಾಣದಲ್ಲಿ ಹೊತ್ತಿ ಉರಿದ ಪುಶ್​ಬ್ಯಾಕ್ ವಾಹನ

ಮುಂಬೈ ವಿಮಾನ ನಿಲ್ದಾಣದಲ್ಲಿ ಪುಷ್‌ಬ್ಯಾಕ್ ಟ್ರ್ಯಾಕ್ಟರ್‌ಗೆ ಇಂದು ಬೆಂಕಿ ಹೊತ್ತಿಕೊಂಡಿದೆ. ಯಾರಿಗೂ ಯಾವುದೇ ರೀತಿಯ ಗಾಯ ಅಥವಾ ಪ್ರಾಣಹಾನಿ ಆಗಿಲ್ಲ

ತಪ್ಪಿದ ಭಾರೀ ಅನಾಹುತ; ಮುಂಬೈ ವಿಮಾನ ನಿಲ್ದಾಣದಲ್ಲಿ ಹೊತ್ತಿ ಉರಿದ ಪುಶ್​ಬ್ಯಾಕ್ ವಾಹನ
ಮುಂಬೈ ವಿಮಾನ ನಿಲ್ದಾಣದಲ್ಲಿ ಪುಶ್​ಬ್ಯಾಕ್ ವಾಹನಕ್ಕೆ ಬೆಂಕಿ
TV9 Web
| Edited By: |

Updated on: Jan 10, 2022 | 6:36 PM

Share

ಮುಂಬೈ: ಮಹಾರಾಷ್ಟ್ರದ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೊಡ್ಡ ದುರಂತವೊಂದು ಕೊಂಚದರಲ್ಲೇ ತಪ್ಪಿದೆ. ಏರ್​ ಇಂಡಿಯಾ ವಿಮಾನಕ್ಕೆ ಪುಶ್​​ಬ್ಯಾಕ್​ ನೀಡುತ್ತಿದ್ದ ವಾಹನ ವಿಮಾನದ ಬಳಿಯೇ ಹೊತ್ತಿ ಉರಿದಿದೆ. ಇಂದು ಬೆಳಗ್ಗೆ 11 ಗಂಟೆಗೆ ಈ ಘಟನೆ ನಡೆದಿದೆ. ಅದೃಷ್ಟವಶಾತ್ ವಿಮಾನದಲ್ಲಿರುವವರಿಗೆ ಮತ್ತು ಹೊರಭಾಗದಲ್ಲಿದ್ದ ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ.

ಮುಂಬೈ ವಿಮಾನ ನಿಲ್ದಾಣದ ಅಧಿಕಾರಿಗಳು 10 ನಿಮಿಷದಲ್ಲಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ, ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಯಾರಿಗೂ ಯಾವುದೇ ರೀತಿಯ ಗಾಯ ಅಥವಾ ಪ್ರಾಣಹಾನಿ ಆಗಿಲ್ಲ. ಏರ್​ ಇಂಡಿಯಾ ವಿಮಾನ ಮುಂಬೈನಿಂದ ಗುಜರಾತ್‌ನ ಜಾಮ್​ನಗರಕ್ಕೆ ತೆರಳುತ್ತಿತ್ತು. ಇದರಲ್ಲಿ 85 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ಪುಷ್‌ಬ್ಯಾಕ್ ಟ್ರ್ಯಾಕ್ಟರ್‌ಗೆ ಇಂದು ಬೆಂಕಿ ಹೊತ್ತಿಕೊಂಡಿದೆ. ಏರ್ ಇಂಡಿಯಾ ವಾಹನವು V26R ಸ್ಟ್ಯಾಂಡ್‌ನಲ್ಲಿತ್ತು. ವಿಮಾನಕ್ಕೆ ಯಾವುದೇ ಹಾನಿಯಾಗಿಲ್ಲ.

ಇದನ್ನೂ ಓದಿ: Bengaluru: ಸಿಲಿಂಡರ್ ಸ್ಫೋಟವಾಗಿ 7 ಜನರಿಗೆ ಗಾಯ; ಬೆಂಕಿ ನಂದಿಸುತ್ತಿರುವ 9ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ

ಟೇಕ್​ ಆಫ್​ ಆಗುವ ಮೊದಲೇ ರೈಲ್ವೆ ಹಳಿಯ ಮೇಲೆ ಬಿದ್ದ ವಿಮಾನ: ಪೊಲೀಸರ ಸಮಯ ಪ್ರಜ್ಞೆಯಿಂದ ಬದುಕುಳಿದ ಪೈಲೆಟ್​

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ