AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India: ಮೇ 3ರಿಂದ ಈ ಮಾರ್ಗದಲ್ಲಿ ಏರ್​ ಇಂಡಿಯಾ ವಿಮಾನ ಸೇವೆ ಆರಂಭ

ಏರ್​ ಇಂಡಿಯಾ(Air India) ವಿಮಾನವು ಮೇ 3 ರಿಂದ ಈ ಮಾರ್ಗದಲ್ಲಿ ಸೇವೆಯನ್ನು ಆರಂಭಿಸಲಿದೆ. ಮುಂಬೈ-ಕೊಯಮತ್ತೂರು ನಡುವೆ ಹಾರಾಟ ಶುರುವಾಗಲಿದೆ.

Air India: ಮೇ 3ರಿಂದ ಈ ಮಾರ್ಗದಲ್ಲಿ ಏರ್​ ಇಂಡಿಯಾ ವಿಮಾನ ಸೇವೆ ಆರಂಭ
ಏರ್ ಇಂಡಿಯಾ
ನಯನಾ ರಾಜೀವ್
|

Updated on: May 02, 2023 | 11:18 AM

Share

ಏರ್​ ಇಂಡಿಯಾ(Air India) ವಿಮಾನವು ಮೇ 3 ರಿಂದ ಈ ಮಾರ್ಗದಲ್ಲಿ ಸೇವೆಯನ್ನು ಆರಂಭಿಸಲಿದೆ. ಮುಂಬೈ-ಕೊಯಮತ್ತೂರು ನಡುವೆ ಹಾರಾಟ ಶುರುವಾಗಲಿದೆ. A320-Neo ಫ್ಲೀಟ್ ವಿಮಾನವು ಎಲ್ಲಾ ಏಳು ದಿನಗಳಲ್ಲಿ ಪ್ರತಿದಿನ ಕಾರ್ಯನಿರ್ವಹಿಸುತ್ತದೆ. ವಿಮಾನವು AI 609 ಮುಂಬೈನಿಂದ ಬೆಳಿಗ್ಗೆ 6:30 ಕ್ಕೆ ಹೊರಟು 8:20 ಕ್ಕೆ ಕೊಯಮತ್ತೂರು ತಲುಪುತ್ತದೆ. ಹಿಂದಿರುಗುವ AI 608 ವಿಮಾನವು ಕೊಯಮತ್ತೂರಿನಿಂದ 9 ಗಂಟೆಗೆ ಹೊರಟು 11 ಗಂಟೆಗೆ ಮುಂಬೈ ತಲುಪಲಿದೆ.

ಅದೇ ವಿಮಾನವು ಪ್ರಯಾಣಿಕರಿಗೆ ಮುಂಬೈನಿಂದ ಲಂಡನ್ ಮತ್ತು ಸ್ಯಾನ್ ಫ್ರಾನ್ಸಿಸ್ಕೋಗೆ ಹಾರಲು ಅನುವು ಮಾಡಿಕೊಡುತ್ತದೆ ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: Air India: ಏರ್​ ಇಂಡಿಯಾ ಪೈಲಟ್ ಕಾಕ್​ಪಿಟ್​ ಒಳಗೆ ಗೆಳತಿಯ ಕರೆದೊಯ್ದ ಪ್ರಕರಣ: ಸಿಇಒ ವಿಲ್ಸನ್​ಗೆ ಶೋಕಾಸ್ ನೋಟಿಸ್

ಮುಂಬೈನಿಂದ ಕೊಯಮತ್ತೂರಿಗೆ ಈಗಾಗಲೇ ಇಂಡಿಗೋದಿಂದ ಎರಡು ವಿಮಾನ, ವಿಸ್ತಾರದಿಂದ ಒಂದು ವಿಮಾನ ಹಾರಾಟ ನಡೆಸುತ್ತಿದೆ.

ಪ್ರಸ್ತುತ, ಕೊಯಮತ್ತೂರು ವಿಮಾನ ನಿಲ್ದಾಣಕ್ಕೆ ಪ್ರತಿದಿನ 23 ದೇಶೀಯ ವಿಮಾನಗಳು ಮತ್ತು ಸಿಂಗಾಪುರ ಮತ್ತು ಶಾರ್ಜಾದಿಂದ ಎರಡು ಅಂತಾರಾರಾಷ್ಟ್ರೀಯ ವಿಮಾನಗಳು ಹಾರಾಟ ನಡೆಸುತ್ತದೆ. ದಿನಕ್ಕೆ ಸರಾಸರಿ 8,750 ಪ್ರಯಾಣಿಕರು ವಿಮಾನ ನಿಲ್ದಾಣವನ್ನು ಬಳಸುತ್ತಾರೆ.

ಏರ್ ಇಂಡಿಯಾ (AI/AIC) ಭಾರತದ ರಾಷ್ಟ್ರೀಯ ವಿಮಾನಯಾನ ಸಂಸ್ಥೆಯಾಗಿದೆ. ಸರ್ಕಾರಿ ಸ್ವಾಮ್ಯದ ಉದ್ಯಮವಾದ ಏರ್ ಇಂಡಿಯಾ ಲಿಮಿಟೆಡ್ ಒಡೆತನದಲ್ಲಿದೆ. ಏರ್ ಇಂಡಿಯಾ ನ್ಯಾಷನಲ್ ಏವಿಯೇಷನ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ ನ ಭಾಗವಾಗಿದೆ . ನಾಲ್ಕು ಖಂಡಗಳಾದ್ಯಂತ ಏರ್ ಇಂಡಿಯಾವು ಸುಮಾರು 60 ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಸ್ಥಳಗಳಿಗೆ ಸೇವೆ ಸಲ್ಲಿಸುತ್ತದೆ.

ಈ ವಿಮಾನಯಾನ ಸಂಸ್ಥೆಯನ್ನು 1932ರಲ್ಲಿ ಜೆ.ಆರ್.ಡಿ. ಟಾಟಾ ರವರು ಟಾಟಾ ಏರ್ಲೈನ್ಸ್ ಎ೦ದು ಸ್ಥಾಪಿಸಿದರು. 1946 ರಲ್ಲಿ ಕಂಪೆನಿಯ ಹೆಸರು ಏರ್ ಇಂಡಿಯಾ ಇಂಟರ್ನ್ಯಾಷನಲ್ ಆಗಿ ಬದಲಾಯಿತು. ಇದರ ಹೆಸರು 1953 ರಲ್ಲಿ ಪ್ರಸಕ್ತ ಹೆಸರು ಏರ್ ಇಂಡಿಯಾ ಎ೦ದು ಬದಲಾಯಿತು .

ಆ ಹೊತ್ತಿಗೆ ಏರ್ ಇಂಡಿಯಾವು ಭಾರತ ಸರಕಾರದ ಒಡೆತನದಲ್ಲಿತ್ತು. 1999 ರಿಂದ ಏರ್ ಇಂಡಿಯಾ ಮತ್ತು ಇಂಡಿಯನ್ ಏರ್ಲೈನ್ಸ್ಗಳನ್ನು ವಿಲೀನಗೊಳಿಸಲು ಬಹಳಷ್ಟು ಪ್ರಯತ್ನಗಳು ನಡೆಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ