AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ದೆಹಲಿಯಿಂದ ಚಿಕಾಗೋಗೆ ಹೊರಟಿದ್ದ ಏರ್​ ಇಂಡಿಯಾಗೆ ಬಾಂಬ್ ಬೆದರಿಕೆ, ಕೆನಡಾದಲ್ಲಿ ತುರ್ತು ಭೂಸ್ಪರ್ಶ

ನವದೆಹಲಿಯಿಂದ ಚಿಕಾಗೋಗೆ ಹೊರಟಿದ್ದ ಏರ್​ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಕೆನಡಾದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. ವಿಮಾನವನ್ನು ಕೆನಡಾದ ಇಕಾಲುಯಿಟ್ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಗಿದೆ.

Bomb Threat: ದೆಹಲಿಯಿಂದ ಚಿಕಾಗೋಗೆ ಹೊರಟಿದ್ದ ಏರ್​ ಇಂಡಿಯಾಗೆ ಬಾಂಬ್ ಬೆದರಿಕೆ, ಕೆನಡಾದಲ್ಲಿ ತುರ್ತು ಭೂಸ್ಪರ್ಶ
ಏರ್​ ಇಂಡಿಯಾ
ನಯನಾ ರಾಜೀವ್
|

Updated on:Oct 15, 2024 | 7:01 PM

Share

ನವದೆಹಲಿಯಿಂದ ಚಿಕಾಗೋಗೆ ಹೊರಟಿದ್ದ ಏರ್​ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಕೆನಡಾದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. ವಿಮಾನವನ್ನು ಕೆನಡಾದ ಇಕಾಲುಯಿಟ್ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಗಿದೆ.

ಈ ಕುರಿತು ಏರ್ ಇಂಡಿಯಾ ಪ್ರಕಟಣೆ ಹೊರಡಿಸಿದೆ. ಮಂಗಳವಾರ ದೆಹಲಿಯಿಂದ ಚಿಕಾಗೋಗೆ ತೆರಳುತ್ತಿದ್ದ ಅಲ್ 127 ವಿಮಾನಕ್ಕೆ ಬಾಂಬ್ ಬೆದರಿಕೆ ಇತ್ತು ಎಂದು ಹೇಳಲಾಗಿದೆ. ಇದಾದ ಬಳಿಕ ಮುನ್ನೆಚ್ಚರಿಕೆಯಾಗಿ ವಿಮಾನವನ್ನು ಕೆನಡಾದ ಇಕಾಲುಯಿಟ್ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು.

ಭದ್ರತಾ ಪ್ರೋಟೋಕಾಲ್ ಪ್ರಕಾರ ವಿಮಾನ ಮತ್ತು ಪ್ರಯಾಣಿಕರನ್ನು ಪರಿಶೀಲಿಸಲಾಗುತ್ತಿದೆ ಎಂದು ಏರ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ. ಪ್ರಯಾಣಿಕರಿಗೆ ಸಹಾಯ ಮಾಡಲು ವಿಮಾನ ನಿಲ್ದಾಣದಲ್ಲಿ ಏಜೆನ್ಸಿಗಳನ್ನು ಸಕ್ರಿಯಗೊಳಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಏರ್ ಇಂಡಿಯಾ ಮತ್ತು ಇತರ ವಿಮಾನಯಾನ ಸಂಸ್ಥೆಗಳಿಗೆ ಹಲವು ಬೆದರಿಕೆಗಳು ಬಂದಿವೆ.

ಮತ್ತಷ್ಟು ಓದಿ: ಅಯೋಧ್ಯೆಯಿಂದ ಬೆಂಗಳೂರಿಗೆ ಬರಬೇಕಾದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ

ಜವಾಬ್ದಾರಿಯುತ ವಿಮಾನಯಾನ ನಿರ್ವಾಹಕರಾಗಿ ಬೆದರಿಕೆಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಏರ್ ಇಂಡಿಯಾ ಹೇಳಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ಕ್ಷಮೆ ಇರಲಿ. ವಿಮಾನಯಾನ ಸಂಸ್ಥೆಗೆ ಉಂಟಾದ ನಷ್ಟವನ್ನು ಸರಿದೂಗಿಸಲು ಕಾನೂನು ಕ್ರಮವನ್ನು ಪರಿಗಣಿಸಲಾಗುವುದು.

ಮಂಗಳವಾರ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಈ ವಿಮಾನದಲ್ಲಿ 132 ಪ್ರಯಾಣಿಕರಿದ್ದರು (ಬೋಯಿಂಗ್ 737-ಮ್ಯಾಕ್ಸ್ 8). ಈ ವಿಮಾನ ಜೈಪುರದಿಂದ ಬರುತ್ತಿತ್ತು. ಅಯೋಧ್ಯೆಯಲ್ಲಿಳಿದು ಕೆಲ ಸಮಯದ ಬಳಿಕ ಬೆಂಗಳೂರಿಗೆ ಹೋಗಬೇಕಿತ್ತು.

ಸಾಮಾಜಿಕ ಮಾಧ್ಯಮ ಖಾತೆಯಿಂದ ನಮಗೆ ಬೆದರಿಕೆ ಬಂದಿದೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮಾಹಿತಿ ನೀಡಿದೆ. ಈ ಬಗ್ಗೆ ತಕ್ಷಣವೇ ಭದ್ರತಾ ಪ್ರೋಟೋಕಾಲ್ ಅನ್ನು ಸಕ್ರಿಯಗೊಳಿಸಲಾಗಿದೆ. ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. ತನಿಖೆಯ ನಂತರ ವಿಮಾನ ಹಾರಾಟಕ್ಕೆ ಅನುಮತಿ ನೀಡಲಾಗುವುದು ಎಂದು ಹೇಳಿದ್ದಾರೆ.

ಸೋಮವಾರ ಮುಂಬೈನಿಂದ ನ್ಯೂಯಾರ್ಕ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಇತ್ತು ಎನ್ನಲಾಗಿದೆ. ಅದನ್ನು ದೆಹಲಿಗೆ ತಿರುಗಿಸಲಾಯಿತು. ಇಲ್ಲಿ ಭದ್ರತಾ ತಪಾಸಣೆ ನಡೆಸಿದಾಗ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ. ಅಧಿಕಾರಿಗಳ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಏರ್ ಇಂಡಿಯಾ ಸೇರಿದಂತೆ ಹಲವು ಸ್ಥಳೀಯ ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ. ಆದರೆ, ಎಲ್ಲ ಬೆದರಿಕೆಗಳೂ ಹುಸಿ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:48 pm, Tue, 15 October 24

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್