AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air Pollution: ವಾಯು ಮಾಲಿನ್ಯದಿಂದ 5 ವರ್ಷ ಕಡಿಮೆಯಾಗುತ್ತಿದೆ ಭಾರತೀಯರ ಜೀವಿತಾವಧಿ

2013ರಿಂದ ಪ್ರಪಂಚದ ಮಾಲಿನ್ಯದಲ್ಲಿ ಸುಮಾರು ಶೇ. 44ರಷ್ಟು ಹೆಚ್ಚಳ ಉಂಟಾಗಿದೆ. 1998ರಿಂದ ಭಾರತದಲ್ಲಿ ಸರಾಸರಿ ವಾರ್ಷಿಕ ಮಾಲಿನ್ಯವು ಶೇ. 61.4ರಷ್ಟು ಹೆಚ್ಚಾಗಿದೆ.

Air Pollution: ವಾಯು ಮಾಲಿನ್ಯದಿಂದ 5 ವರ್ಷ ಕಡಿಮೆಯಾಗುತ್ತಿದೆ ಭಾರತೀಯರ ಜೀವಿತಾವಧಿ
ವಾಯು ಮಾಲಿನ್ಯImage Credit source: NDTV
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 14, 2022 | 5:16 PM

ನವದೆಹಲಿ: ಭಾರತದಲ್ಲಿ ವಾಯು ಮಾಲಿನ್ಯದಿಂದ ಮನುಷ್ಯರ ಆರೋಗ್ಯದ ಮೇಲೆ ಭಾರೀ ಪರಿಣಾಮಗಳು ಉಂಟಾಗುತ್ತಿವೆ. ವಿಶ್ವ ಆರೋಗ್ಯ ಸಂಸ್ಥೆ (WHO)ಯ ಮಾರ್ಗಸೂಚಿಗಳನ್ನು ಅನುಸರಿಸದಿದ್ದರೆ ಭಾರತೀಯರು ಸರಾಸರಿ 5 ವರ್ಷಗಳ ಜೀವಿತಾವಧಿಯನ್ನು ಕಳೆದುಕೊಳ್ಳಲಿದ್ದಾರೆ ಎಂದು ಚಿಕಾಗೋ ವಿಶ್ವವಿದ್ಯಾಲಯದ (EPIC) ಇಂಧನ ನೀತಿ ಸಂಸ್ಥೆ ತಿಳಿಸಿದೆ. ಏರ್ ಕ್ವಾಲಿಟಿ ಲೈಫ್ ಇಂಡೆಕ್ಸ್ (Air Quality Life Index) ಇಂದು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಈ ಮಾಹಿತಿ ನೀಡಲಾಗಿದೆ.

ಭಾರತದಲ್ಲಿ ಪ್ರತಿ ಘನ ಮೀಟರ್‌ಗೆ ಸರಾಸರಿ ವಾರ್ಷಿಕ PM2.5 ಮಟ್ಟವು 107 ಮೈಕ್ರೊಗ್ರಾಂ ಅಥವಾ WHO ಮಾರ್ಗಸೂಚಿಗಳಿಗಿಂತ 21 ಪಟ್ಟು ಹೆಚ್ಚಿರುತ್ತಿದೆ. ವಿಶ್ವದ ಅತ್ಯಂತ ಕಲುಷಿತ ಮೆಗಾ ನಗರವಾದ ದೆಹಲಿಯ ನಿವಾಸಿಗಳು ಪ್ರಸ್ತುತ ವಾಯುಮಾಲಿನ್ಯ ಮಟ್ಟದಿಂದ 10 ವರ್ಷಗಳ ಜೀವಿತಾವಧಿಯನ್ನು ಕಳೆದುಕೊಳ್ಳುತ್ತಾರೆ ಎಂದು ವರದಿ ಹೇಳಿದೆ.

ಕಳೆದ ವರ್ಷ ಹೊರಡಿಸಿದ ಹೊಸ ವಿಶ್ವ ಆರೋಗ್ಯ ಸಂಸ್ಥೆ (WHO) ಮಾರ್ಗಸೂಚಿಗಳ ಪ್ರಕಾರ, ಸರಾಸರಿ ವಾರ್ಷಿಕ PM2.5 ಸಾಂದ್ರತೆಯು ಪ್ರತಿ ಘನ ಮೀಟರ್‌ಗೆ ಐದು ಮೈಕ್ರೋಗ್ರಾಂಗಳಿಗಿಂತ ಹೆಚ್ಚಿರಬಾರದು. ಇದು ಹಿಂದೆ ಪ್ರತಿ ಘನ ಮೀಟರ್‌ಗೆ 10 ಮೈಕ್ರೋಗ್ರಾಂಗಳಷ್ಟಿತ್ತು. WHO ಮಾರ್ಗಸೂಚಿಗಳನ್ನು ಅನುಸರಿಸುವ ಪ್ರಪಂಚಕ್ಕೆ ಹೋಲಿಸಿದರೆ ವಾಯು ಮಾಲಿನ್ಯವು 2.2 ವರ್ಷಗಳ ಜೀವಿತಾವಧಿಯನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: Air Pollution: ಕಲುಷಿತವಾಗುತ್ತಿದೆ ಪ್ರಾಣವಾಯು; ಅತಿ ಹೆಚ್ಚು ವಾಯು ಮಾಲಿನ್ಯವಿರುವ ಭಾರತದ ಟಾಪ್ 10 ನಗರಗಳಿವು

“ವಿಶ್ವದ ಎಲ್ಲಾ ದೇಶಗಳ ಪೈಕಿ ಭಾರತವು ಹೆಚ್ಚಿನ ಕಣಗಳ ಮಾಲಿನ್ಯದ ಸಾಂದ್ರತೆ ಮತ್ತು ಹೆಚ್ಚಿನ ಜನಸಂಖ್ಯೆಯಿಂದಾಗಿ ವಾಯು ಮಾಲಿನ್ಯದ ಮೇಲಿನ ಆರೋಗ್ಯದ ಹೊರೆಯನ್ನು ಎದುರಿಸುತ್ತಿದೆ” ಎಂದು ವರದಿ ಹೇಳಿದೆ. 2013ರಿಂದ ಪ್ರಪಂಚದ ಮಾಲಿನ್ಯದಲ್ಲಿ ಸುಮಾರು ಶೇ. 44ರಷ್ಟು ಹೆಚ್ಚಳ ಉಂಟಾಗಿದೆ. 1998ರಿಂದ ಭಾರತದಲ್ಲಿ ಸರಾಸರಿ ವಾರ್ಷಿಕ ಮಾಲಿನ್ಯವು ಶೇ. 61.4ರಷ್ಟು ಹೆಚ್ಚಾಗಿದೆ. ಇದು ಸರಾಸರಿ ಜೀವಿತಾವಧಿಯಲ್ಲಿ 2.1 ವರ್ಷಗಳ ಇಳಿಕೆಗೆ ಕಾರಣವಾಗುತ್ತದೆ.

ಕಳೆದ ಎರಡು ದಶಕಗಳಲ್ಲಿ ಕೈಗಾರಿಕೀಕರಣ, ಆರ್ಥಿಕ ಅಭಿವೃದ್ಧಿ ಮತ್ತು ಜನಸಂಖ್ಯೆಯ ಬೆಳವಣಿಗೆಯಿಂದಾಗಿ ಭಾರತದಲ್ಲಿ ವಾಯು ಮಾಲಿನ್ಯದ ಹೆಚ್ಚಳವಾಗಿದೆ. 2019ರಲ್ಲಿ ಭಾರತ ಸರ್ಕಾರವು ಮಾಲಿನ್ಯದ ಮೇಲೆ ಯುದ್ಧವನ್ನು ಘೋಷಿಸಿತ್ತು. 2024ರ ವೇಳೆಗೆ 2017ರ ವಾಯುಮಾಲಿನ್ಯದ ಮಟ್ಟವನ್ನು ಶೇ. 20ರಿಂದ 30ರಷ್ಟು ಕಡಿಮೆ ಮಾಡುವ ಗುರಿಯೊಂದಿಗೆ ರಾಷ್ಟ್ರೀಯ ಶುದ್ಧ ಗಾಳಿ ಕಾರ್ಯಕ್ರಮವನ್ನು (NCAP) ಪ್ರಾರಂಭಿಸಿತ್ತು. ಅಂದಿನಿಂದ ಭಾರತವು ಯುರೋಪಿಯನ್ ಯೂನಿಯನ್ (EU) ಮಾನದಂಡಗಳಿಗೆ ಸಮನಾದ ಇಂಧನ ಹೊರಸೂಸುವಿಕೆಯ ಮಾನದಂಡಗಳನ್ನು ಅಳವಡಿಸಿಕೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:08 pm, Tue, 14 June 22

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ