Air Pollution: ವಾಯು ಮಾಲಿನ್ಯದಿಂದ 5 ವರ್ಷ ಕಡಿಮೆಯಾಗುತ್ತಿದೆ ಭಾರತೀಯರ ಜೀವಿತಾವಧಿ

2013ರಿಂದ ಪ್ರಪಂಚದ ಮಾಲಿನ್ಯದಲ್ಲಿ ಸುಮಾರು ಶೇ. 44ರಷ್ಟು ಹೆಚ್ಚಳ ಉಂಟಾಗಿದೆ. 1998ರಿಂದ ಭಾರತದಲ್ಲಿ ಸರಾಸರಿ ವಾರ್ಷಿಕ ಮಾಲಿನ್ಯವು ಶೇ. 61.4ರಷ್ಟು ಹೆಚ್ಚಾಗಿದೆ.

Air Pollution: ವಾಯು ಮಾಲಿನ್ಯದಿಂದ 5 ವರ್ಷ ಕಡಿಮೆಯಾಗುತ್ತಿದೆ ಭಾರತೀಯರ ಜೀವಿತಾವಧಿ
ವಾಯು ಮಾಲಿನ್ಯImage Credit source: NDTV
Follow us
| Updated By: ಸುಷ್ಮಾ ಚಕ್ರೆ

Updated on:Jun 14, 2022 | 5:16 PM

ನವದೆಹಲಿ: ಭಾರತದಲ್ಲಿ ವಾಯು ಮಾಲಿನ್ಯದಿಂದ ಮನುಷ್ಯರ ಆರೋಗ್ಯದ ಮೇಲೆ ಭಾರೀ ಪರಿಣಾಮಗಳು ಉಂಟಾಗುತ್ತಿವೆ. ವಿಶ್ವ ಆರೋಗ್ಯ ಸಂಸ್ಥೆ (WHO)ಯ ಮಾರ್ಗಸೂಚಿಗಳನ್ನು ಅನುಸರಿಸದಿದ್ದರೆ ಭಾರತೀಯರು ಸರಾಸರಿ 5 ವರ್ಷಗಳ ಜೀವಿತಾವಧಿಯನ್ನು ಕಳೆದುಕೊಳ್ಳಲಿದ್ದಾರೆ ಎಂದು ಚಿಕಾಗೋ ವಿಶ್ವವಿದ್ಯಾಲಯದ (EPIC) ಇಂಧನ ನೀತಿ ಸಂಸ್ಥೆ ತಿಳಿಸಿದೆ. ಏರ್ ಕ್ವಾಲಿಟಿ ಲೈಫ್ ಇಂಡೆಕ್ಸ್ (Air Quality Life Index) ಇಂದು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಈ ಮಾಹಿತಿ ನೀಡಲಾಗಿದೆ.

ಭಾರತದಲ್ಲಿ ಪ್ರತಿ ಘನ ಮೀಟರ್‌ಗೆ ಸರಾಸರಿ ವಾರ್ಷಿಕ PM2.5 ಮಟ್ಟವು 107 ಮೈಕ್ರೊಗ್ರಾಂ ಅಥವಾ WHO ಮಾರ್ಗಸೂಚಿಗಳಿಗಿಂತ 21 ಪಟ್ಟು ಹೆಚ್ಚಿರುತ್ತಿದೆ. ವಿಶ್ವದ ಅತ್ಯಂತ ಕಲುಷಿತ ಮೆಗಾ ನಗರವಾದ ದೆಹಲಿಯ ನಿವಾಸಿಗಳು ಪ್ರಸ್ತುತ ವಾಯುಮಾಲಿನ್ಯ ಮಟ್ಟದಿಂದ 10 ವರ್ಷಗಳ ಜೀವಿತಾವಧಿಯನ್ನು ಕಳೆದುಕೊಳ್ಳುತ್ತಾರೆ ಎಂದು ವರದಿ ಹೇಳಿದೆ.

ಕಳೆದ ವರ್ಷ ಹೊರಡಿಸಿದ ಹೊಸ ವಿಶ್ವ ಆರೋಗ್ಯ ಸಂಸ್ಥೆ (WHO) ಮಾರ್ಗಸೂಚಿಗಳ ಪ್ರಕಾರ, ಸರಾಸರಿ ವಾರ್ಷಿಕ PM2.5 ಸಾಂದ್ರತೆಯು ಪ್ರತಿ ಘನ ಮೀಟರ್‌ಗೆ ಐದು ಮೈಕ್ರೋಗ್ರಾಂಗಳಿಗಿಂತ ಹೆಚ್ಚಿರಬಾರದು. ಇದು ಹಿಂದೆ ಪ್ರತಿ ಘನ ಮೀಟರ್‌ಗೆ 10 ಮೈಕ್ರೋಗ್ರಾಂಗಳಷ್ಟಿತ್ತು. WHO ಮಾರ್ಗಸೂಚಿಗಳನ್ನು ಅನುಸರಿಸುವ ಪ್ರಪಂಚಕ್ಕೆ ಹೋಲಿಸಿದರೆ ವಾಯು ಮಾಲಿನ್ಯವು 2.2 ವರ್ಷಗಳ ಜೀವಿತಾವಧಿಯನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: Air Pollution: ಕಲುಷಿತವಾಗುತ್ತಿದೆ ಪ್ರಾಣವಾಯು; ಅತಿ ಹೆಚ್ಚು ವಾಯು ಮಾಲಿನ್ಯವಿರುವ ಭಾರತದ ಟಾಪ್ 10 ನಗರಗಳಿವು

“ವಿಶ್ವದ ಎಲ್ಲಾ ದೇಶಗಳ ಪೈಕಿ ಭಾರತವು ಹೆಚ್ಚಿನ ಕಣಗಳ ಮಾಲಿನ್ಯದ ಸಾಂದ್ರತೆ ಮತ್ತು ಹೆಚ್ಚಿನ ಜನಸಂಖ್ಯೆಯಿಂದಾಗಿ ವಾಯು ಮಾಲಿನ್ಯದ ಮೇಲಿನ ಆರೋಗ್ಯದ ಹೊರೆಯನ್ನು ಎದುರಿಸುತ್ತಿದೆ” ಎಂದು ವರದಿ ಹೇಳಿದೆ. 2013ರಿಂದ ಪ್ರಪಂಚದ ಮಾಲಿನ್ಯದಲ್ಲಿ ಸುಮಾರು ಶೇ. 44ರಷ್ಟು ಹೆಚ್ಚಳ ಉಂಟಾಗಿದೆ. 1998ರಿಂದ ಭಾರತದಲ್ಲಿ ಸರಾಸರಿ ವಾರ್ಷಿಕ ಮಾಲಿನ್ಯವು ಶೇ. 61.4ರಷ್ಟು ಹೆಚ್ಚಾಗಿದೆ. ಇದು ಸರಾಸರಿ ಜೀವಿತಾವಧಿಯಲ್ಲಿ 2.1 ವರ್ಷಗಳ ಇಳಿಕೆಗೆ ಕಾರಣವಾಗುತ್ತದೆ.

ಕಳೆದ ಎರಡು ದಶಕಗಳಲ್ಲಿ ಕೈಗಾರಿಕೀಕರಣ, ಆರ್ಥಿಕ ಅಭಿವೃದ್ಧಿ ಮತ್ತು ಜನಸಂಖ್ಯೆಯ ಬೆಳವಣಿಗೆಯಿಂದಾಗಿ ಭಾರತದಲ್ಲಿ ವಾಯು ಮಾಲಿನ್ಯದ ಹೆಚ್ಚಳವಾಗಿದೆ. 2019ರಲ್ಲಿ ಭಾರತ ಸರ್ಕಾರವು ಮಾಲಿನ್ಯದ ಮೇಲೆ ಯುದ್ಧವನ್ನು ಘೋಷಿಸಿತ್ತು. 2024ರ ವೇಳೆಗೆ 2017ರ ವಾಯುಮಾಲಿನ್ಯದ ಮಟ್ಟವನ್ನು ಶೇ. 20ರಿಂದ 30ರಷ್ಟು ಕಡಿಮೆ ಮಾಡುವ ಗುರಿಯೊಂದಿಗೆ ರಾಷ್ಟ್ರೀಯ ಶುದ್ಧ ಗಾಳಿ ಕಾರ್ಯಕ್ರಮವನ್ನು (NCAP) ಪ್ರಾರಂಭಿಸಿತ್ತು. ಅಂದಿನಿಂದ ಭಾರತವು ಯುರೋಪಿಯನ್ ಯೂನಿಯನ್ (EU) ಮಾನದಂಡಗಳಿಗೆ ಸಮನಾದ ಇಂಧನ ಹೊರಸೂಸುವಿಕೆಯ ಮಾನದಂಡಗಳನ್ನು ಅಳವಡಿಸಿಕೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:08 pm, Tue, 14 June 22

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ