ನವೆಂಬರ್ 5 ರಂದು ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಮತ್ತಷ್ಟು ಹದಗೆಡುವ ಸಾಧ್ಯತೆ

Air quality in Delhi ನವೆಂಬರ್ 5 ರಂದು, ಗಾಳಿಯ ಗುಣಮಟ್ಟವು 'ಅತ್ಯಂತ ಕಳಪೆ' ವಿಭಾಗದಲ್ಲೇ ಇರಲಿದ್ದು ದೀಪಾವಳಿ ದಿನದಂದು ಪಟಾಕಿ ಹೊಡೆದರೆ ಅದು ಮತ್ತಷ್ಟು ಹದಗೆಡಬಹುದು ಎಂದು ಮುನ್ಸೂಚನೆ ತಿಳಿಸಿದೆ.

ನವೆಂಬರ್ 5 ರಂದು ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಮತ್ತಷ್ಟು ಹದಗೆಡುವ ಸಾಧ್ಯತೆ
ದೆಹಲಿಯಲ್ಲಿ ಹದಗೆಟ್ಟ ಗಾಳಿ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Nov 04, 2021 | 2:38 PM

ದೆಹಲಿ: ದೆಹಲಿಯಲ್ಲಿನ ಗಾಳಿಯ ಗುಣಮಟ್ಟವು ಹದಗೆಟ್ಟಿದ್ದು ಮತ್ತು ಗುರುವಾರದಂದು ‘ಅತ್ಯಂತ ಕಳಪೆ’ ಯಾಗಲಿದೆ ಎಂದು ದೆಹಲಿ ಏರ್ ಕ್ವಾಲಿಟಿ ಅರ್ಲಿ ವಾರ್ನಿಂಗ್ ಸಿಸ್ಟಮ್ (Air Quality Early Warning System) ಹೊರಡಿಸಿದ ಪ್ರಕಟಣೆ ಹೇಳಿದೆ. ನವೆಂಬರ್ 5 ರಂದು, ಗಾಳಿಯ ಗುಣಮಟ್ಟವು ‘ಅತ್ಯಂತ ಕಳಪೆ’ ವಿಭಾಗದಲ್ಲೇ ಇರಲಿದ್ದು ದೀಪಾವಳಿ ದಿನದಂದು ಪಟಾಕಿ ಹೊಡೆದರೆ ಅದು ಮತ್ತಷ್ಟು ಹದಗೆಡಬಹುದು ಎಂದು ಮುನ್ಸೂಚನೆ ತಿಳಿಸಿದೆ. ಎಕ್ಯುಐ(AQI) ಕಳೆದ ಎರಡು ದಿನಗಳಿಂದ ‘ಅತ್ಯಂತ ಕಳಪೆ’ ವರ್ಗದ ಕೆಳಮಟ್ಟದಲ್ಲಿಯೇ ಉಳಿದಿದೆ. 301 ರಿಂದ 400 ರವರೆಗಿನ AQI ಅನ್ನು ‘ಅತ್ಯಂತ ಕಳಪೆ’ ಎಂದು ಪರಿಗಣಿಸಲಾಗುತ್ತದೆ.

ಗುರುವಾರದ ಗಾಳಿಯ ದಿಕ್ಕು ಬೇರೆ ಬೇರೆ ದಿಕ್ಕುಗಳಿಂದ ಆಗಿರಬಹುದು, ಆದರೆ ಶುಕ್ರವಾರದ ದಿಕ್ಕು ದೆಹಲಿಯ ವಾಯುವ್ಯದಿಂದ ಆಗಿರಬಹುದು ಮತ್ತು ಸುಡುವ ಬೆಳೆ ತ್ಯಾಜ್ಯಗಳ ಮಾಲಿನ್ಯದಿಂದಾಗಿ ಇದು ನಗರದಲ್ಲಿ ಪಿಎಂ 2.5 ಮಟ್ಟಕ್ಕೆ ಹೆಚ್ಚಿಸಬಹುದು. ಕಡಿಮೆ ಗಾಳಿಯ ವೇಗವು ಮಾಲಿನ್ಯಕಾರಕಗಳ ಪ್ರಸರಣವನ್ನು ಇಲ್ಲಿಯವರೆಗೆ ಕಷ್ಟಕರವಾಗಿಸಿದೆ, ಆದರೆ ನವೆಂಬರ್ 6 ರಂದು ಬಲವಾದ ಗಾಳಿಯನ್ನು ನಿರೀಕ್ಷಿಸಲಾಗಿದೆ.

ಏತನ್ಮಧ್ಯೆ, ಗುರುವಾರ ಕನಿಷ್ಠ ತಾಪಮಾನವು 15 ಡಿಗ್ರಿ ಸೆಲ್ಸಿಯಸ್‌ನಲ್ಲಿ ನಿಲ್ಲುವ ಸಾಧ್ಯತೆಯಿದೆ, ಗರಿಷ್ಠ 29 ಡಿಗ್ರಿ ಸೆಲ್ಸಿಯಸ್ ಇರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಸ್ಪಷ್ಟವಾದ ಆಕಾಶವು ದಿನದ ಮುನ್ಸೂಚನೆಯಲ್ಲಿದೆ. ಕಳೆದ 24 ಗಂಟೆಗಳಲ್ಲಿ ದಾಖಲಾದ ಕನಿಷ್ಠ ತಾಪಮಾನವು 15 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಗರಿಷ್ಠ ತಾಪಮಾನವು 29.9 ಡಿಗ್ರಿ ಸೆಲ್ಸಿಯಸ್ ಆಗಿದೆ, ಇದು ಸಾಮಾನ್ಯಕ್ಕಿಂತ ಕಡಿಮೆಯಾಗಿದೆ.

ಇದನ್ನೂ ಓದಿ: ಸಾರ್ವಜನಿಕ ಹಣವನ್ನು ಮೊದಲು ಕಬರಿಸ್ತಾನ್​​ಗಳಿಗೆ ಖರ್ಚು ಮಾಡಲಾಗುತ್ತಿತ್ತು, ಈಗ ದೇವಸ್ಥಾನಗಳಿಗೆ ಖರ್ಚು ಮಾಡಲಾಗಿದೆ: ಯೋಗಿ ಆದಿತ್ಯನಾಥ

Published On - 2:38 pm, Thu, 4 November 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ