AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷಾರ್ಥ ಸಂಚಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಯುದ್ಧನೌಕೆ ವಿಕ್ರಾಂತ್​; ದೇಶಕ್ಕಿದು ಐತಿಹಾಸಿಕ ದಿನ

Vikrant: ಯುದ್ಧನೌಕೆಯ ಐದು ದಿನಗಳ ಪ್ರಯೋಗದ ನಂತರ ನಾವೀಗ ಕೊಚ್ಚಿಗೆ ವಾಪಸ್​ ಆಗುತ್ತಿದ್ದೇವೆ. ನಮಗೀಗ ಸಂಪೂರ್ಣ ತೃಪ್ತಿಯಿದೆಎಂದು ಉಪ ನೌಕಾ ಸೇನಾಪತಿ ಎ.ಕೆ.ಚಾವ್ಲಾ ತಿಳಿಸಿದ್ದಾರೆ.

ಪರೀಕ್ಷಾರ್ಥ ಸಂಚಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಯುದ್ಧನೌಕೆ ವಿಕ್ರಾಂತ್​; ದೇಶಕ್ಕಿದು ಐತಿಹಾಸಿಕ ದಿನ
ವಿಕ್ರಾಂತ್​ ಯುದ್ಧ ನೌಕೆ
TV9 Web
| Edited By: |

Updated on:Aug 09, 2021 | 1:01 PM

Share

ಭಾರತದ ಮೊದಲ ದೇಶೀಯ ವಿಮಾನ ವಾಹಕ ಯುದ್ಧನೌಕೆ (Indigenous Aircraft Carrier (IAC) ವಿಕ್ರಾಂತ್ (Vikrant)​​ ಐದು ದಿನಗಳ ಪರೀಕ್ಷಾರ್ಥ ಸಂಚಾರ ಮುಗಿಸಿ ಹಿಂದಿರುಗಿದೆ. 40,000 ಟನ್​ ಯುದ್ಧನೌಕೆಯ ಕಾರ್ಯಕ್ಷಮತೆಯನ್ನು ಪರೀಕ್ಷೆ ಮಾಡಲು, ಐದು ದಿನಗಳ ಸಮುದ್ರ ಪ್ರಯೋಗ (Sea Trial) ಕಳೆದ ಬುಧವಾರದಿಂದ ಪ್ರಾರಂಭವಾಗಿತ್ತು. ಅಂದಾಜು 23 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಈ ವಿಕ್ರಾಂತ್​ ಯುದ್ಧನೌಕೆ (Vikrant Aircraft Carrier)ಯನ್ನು ತಯಾರಿಸಲಾಗಿದೆ. ಈ ಸ್ವದೇಶಿ ನಿರ್ಮಿತ ವಿಮಾನ ವಾಹಕ ಯುದ್ಧನೌಕೆ ಮುಂದಿನ ವರ್ಷ ಆಗಸ್ಟ್​​ನಿಂದ ಭಾರತೀಯ ನೌಕಾಪಡೆಯನ್ನು ಸೇರಲಿದೆ.

ಈ ಯುದ್ಧ ನೌಕೆಯೀಗ ಯಶಸ್ವಿಯಾಗಿ ಪರೀಕ್ಷಾರ್ಥ ಸಂಚಾರವನ್ನು ಪೂರ್ಣಗೊಳಿಸಿದೆ. ಇದು ಭಾರತದ ಪಾಲಿಗೆ ಐತಿಹಾಸಿಕ ದಿನ ಎಂದು ಉಪ ನೌಕಾ ಸೇನಾಪತಿ ಎ.ಕೆ.ಚಾವ್ಲಾ ತಿಳಿಸಿದ್ದಾರೆ. ಯುದ್ಧನೌಕೆಯ ಐದು ದಿನಗಳ ಪ್ರಯೋಗದ ನಂತರ ನಾವೀಗ ಕೊಚ್ಚಿಗೆ ವಾಪಸ್​ ಆಗುತ್ತಿದ್ದೇವೆ. ನಮಗೀಗ ಸಂಪೂರ್ಣ ತೃಪ್ತಿಯಿದೆ. ಇಡೀ ತಂಡದ ಶ್ರಮದಿಂದ ಇಂಥದ್ದೊಂದು ಮಹತ್ವದ ಕಾರ್ಯ ಸಾಧಿಸಲು ಸಾಧ್ಯವಾಗಿದೆ ಎಂದು ಎ.ಕೆ.ಚಾವ್ಲಾ ತಿಳಿಸಿದ್ದಾರೆ.

ಯುದ್ಧ ನೌಕೆಯ ಸಿಸ್ಟಂ ಪ್ಯಾರಾಮೀಟರ್​ಗಳು ತೃಪ್ತಿದಾಯಕವಾಗಿ ಕೆಲಸ ಮಾಡುತ್ತಿವೆ. ನೌಕೆಯ ಒಟ್ಟಾರೆ ಕಾರ್ಯಕ್ಷಮತೆ, ಹಲ್, ವಿದ್ಯುತ್​ ಉತ್ಪಾದನೆ, ಪೂರೈಕೆ ಸೇರಿ ಎಲ್ಲ ವಿಭಾಗಗಳನ್ನೂ ಪ್ರಯೋಗ ಹಂತದಲ್ಲಿ ಪರೀಕ್ಷಿಸಲಾಗಿದೆ ಎಂದು ನೌಕಾಪಡೆ ಮಾಹಿತಿ ನೀಡಿದೆ. ಈ ಯುದ್ಧನೌಕೆ 262 ಮೀಟರ್​ ಉದ್ದವಾಗಿದ್ದು, 62 ಮೀಟರ್​ ಅಗಲವಾಗಿದೆ. 59 ಮೀಟರ್​ ಎತ್ತರವಿದೆ. ಒಟ್ಟಾರೆ 14 ಡೆಕ್​ಗಳಿವೆ.

ಇದನ್ನೂ ಓದಿ: ಬಿಗ್ ಬಾಸ್​ ಗೆದ್ದ ಮಂಜುಗೆ ವೆಲ್​ಕಮ್​ ಹೇಗಿತ್ತು? ಇಲ್ಲಿದೆ ವಿಡಿಯೋ

Senior Citizens Fixed Deposits: ಹಿರಿಯ ನಾಗರಿಕರಿಗೆ ಶೇ 7.25ರ ತನಕ ಬಡ್ಡಿ ದರ ನೀಡುವ ಟಾಪ್ 5 ಬ್ಯಾಂಕ್​ಗಳಿವು

Published On - 12:54 pm, Mon, 9 August 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ