ಪರೀಕ್ಷಾರ್ಥ ಸಂಚಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಯುದ್ಧನೌಕೆ ವಿಕ್ರಾಂತ್​; ದೇಶಕ್ಕಿದು ಐತಿಹಾಸಿಕ ದಿನ

Vikrant: ಯುದ್ಧನೌಕೆಯ ಐದು ದಿನಗಳ ಪ್ರಯೋಗದ ನಂತರ ನಾವೀಗ ಕೊಚ್ಚಿಗೆ ವಾಪಸ್​ ಆಗುತ್ತಿದ್ದೇವೆ. ನಮಗೀಗ ಸಂಪೂರ್ಣ ತೃಪ್ತಿಯಿದೆಎಂದು ಉಪ ನೌಕಾ ಸೇನಾಪತಿ ಎ.ಕೆ.ಚಾವ್ಲಾ ತಿಳಿಸಿದ್ದಾರೆ.

ಪರೀಕ್ಷಾರ್ಥ ಸಂಚಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಯುದ್ಧನೌಕೆ ವಿಕ್ರಾಂತ್​; ದೇಶಕ್ಕಿದು ಐತಿಹಾಸಿಕ ದಿನ
ವಿಕ್ರಾಂತ್​ ಯುದ್ಧ ನೌಕೆ
Follow us
| Updated By: Lakshmi Hegde

Updated on:Aug 09, 2021 | 1:01 PM

ಭಾರತದ ಮೊದಲ ದೇಶೀಯ ವಿಮಾನ ವಾಹಕ ಯುದ್ಧನೌಕೆ (Indigenous Aircraft Carrier (IAC) ವಿಕ್ರಾಂತ್ (Vikrant)​​ ಐದು ದಿನಗಳ ಪರೀಕ್ಷಾರ್ಥ ಸಂಚಾರ ಮುಗಿಸಿ ಹಿಂದಿರುಗಿದೆ. 40,000 ಟನ್​ ಯುದ್ಧನೌಕೆಯ ಕಾರ್ಯಕ್ಷಮತೆಯನ್ನು ಪರೀಕ್ಷೆ ಮಾಡಲು, ಐದು ದಿನಗಳ ಸಮುದ್ರ ಪ್ರಯೋಗ (Sea Trial) ಕಳೆದ ಬುಧವಾರದಿಂದ ಪ್ರಾರಂಭವಾಗಿತ್ತು. ಅಂದಾಜು 23 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಈ ವಿಕ್ರಾಂತ್​ ಯುದ್ಧನೌಕೆ (Vikrant Aircraft Carrier)ಯನ್ನು ತಯಾರಿಸಲಾಗಿದೆ. ಈ ಸ್ವದೇಶಿ ನಿರ್ಮಿತ ವಿಮಾನ ವಾಹಕ ಯುದ್ಧನೌಕೆ ಮುಂದಿನ ವರ್ಷ ಆಗಸ್ಟ್​​ನಿಂದ ಭಾರತೀಯ ನೌಕಾಪಡೆಯನ್ನು ಸೇರಲಿದೆ.

ಈ ಯುದ್ಧ ನೌಕೆಯೀಗ ಯಶಸ್ವಿಯಾಗಿ ಪರೀಕ್ಷಾರ್ಥ ಸಂಚಾರವನ್ನು ಪೂರ್ಣಗೊಳಿಸಿದೆ. ಇದು ಭಾರತದ ಪಾಲಿಗೆ ಐತಿಹಾಸಿಕ ದಿನ ಎಂದು ಉಪ ನೌಕಾ ಸೇನಾಪತಿ ಎ.ಕೆ.ಚಾವ್ಲಾ ತಿಳಿಸಿದ್ದಾರೆ. ಯುದ್ಧನೌಕೆಯ ಐದು ದಿನಗಳ ಪ್ರಯೋಗದ ನಂತರ ನಾವೀಗ ಕೊಚ್ಚಿಗೆ ವಾಪಸ್​ ಆಗುತ್ತಿದ್ದೇವೆ. ನಮಗೀಗ ಸಂಪೂರ್ಣ ತೃಪ್ತಿಯಿದೆ. ಇಡೀ ತಂಡದ ಶ್ರಮದಿಂದ ಇಂಥದ್ದೊಂದು ಮಹತ್ವದ ಕಾರ್ಯ ಸಾಧಿಸಲು ಸಾಧ್ಯವಾಗಿದೆ ಎಂದು ಎ.ಕೆ.ಚಾವ್ಲಾ ತಿಳಿಸಿದ್ದಾರೆ.

ಯುದ್ಧ ನೌಕೆಯ ಸಿಸ್ಟಂ ಪ್ಯಾರಾಮೀಟರ್​ಗಳು ತೃಪ್ತಿದಾಯಕವಾಗಿ ಕೆಲಸ ಮಾಡುತ್ತಿವೆ. ನೌಕೆಯ ಒಟ್ಟಾರೆ ಕಾರ್ಯಕ್ಷಮತೆ, ಹಲ್, ವಿದ್ಯುತ್​ ಉತ್ಪಾದನೆ, ಪೂರೈಕೆ ಸೇರಿ ಎಲ್ಲ ವಿಭಾಗಗಳನ್ನೂ ಪ್ರಯೋಗ ಹಂತದಲ್ಲಿ ಪರೀಕ್ಷಿಸಲಾಗಿದೆ ಎಂದು ನೌಕಾಪಡೆ ಮಾಹಿತಿ ನೀಡಿದೆ. ಈ ಯುದ್ಧನೌಕೆ 262 ಮೀಟರ್​ ಉದ್ದವಾಗಿದ್ದು, 62 ಮೀಟರ್​ ಅಗಲವಾಗಿದೆ. 59 ಮೀಟರ್​ ಎತ್ತರವಿದೆ. ಒಟ್ಟಾರೆ 14 ಡೆಕ್​ಗಳಿವೆ.

ಇದನ್ನೂ ಓದಿ: ಬಿಗ್ ಬಾಸ್​ ಗೆದ್ದ ಮಂಜುಗೆ ವೆಲ್​ಕಮ್​ ಹೇಗಿತ್ತು? ಇಲ್ಲಿದೆ ವಿಡಿಯೋ

Senior Citizens Fixed Deposits: ಹಿರಿಯ ನಾಗರಿಕರಿಗೆ ಶೇ 7.25ರ ತನಕ ಬಡ್ಡಿ ದರ ನೀಡುವ ಟಾಪ್ 5 ಬ್ಯಾಂಕ್​ಗಳಿವು

Published On - 12:54 pm, Mon, 9 August 21

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ