AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷಾರ್ಥ ಸಂಚಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಯುದ್ಧನೌಕೆ ವಿಕ್ರಾಂತ್​; ದೇಶಕ್ಕಿದು ಐತಿಹಾಸಿಕ ದಿನ

Vikrant: ಯುದ್ಧನೌಕೆಯ ಐದು ದಿನಗಳ ಪ್ರಯೋಗದ ನಂತರ ನಾವೀಗ ಕೊಚ್ಚಿಗೆ ವಾಪಸ್​ ಆಗುತ್ತಿದ್ದೇವೆ. ನಮಗೀಗ ಸಂಪೂರ್ಣ ತೃಪ್ತಿಯಿದೆಎಂದು ಉಪ ನೌಕಾ ಸೇನಾಪತಿ ಎ.ಕೆ.ಚಾವ್ಲಾ ತಿಳಿಸಿದ್ದಾರೆ.

ಪರೀಕ್ಷಾರ್ಥ ಸಂಚಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಯುದ್ಧನೌಕೆ ವಿಕ್ರಾಂತ್​; ದೇಶಕ್ಕಿದು ಐತಿಹಾಸಿಕ ದಿನ
ವಿಕ್ರಾಂತ್​ ಯುದ್ಧ ನೌಕೆ
TV9 Web
| Updated By: Lakshmi Hegde|

Updated on:Aug 09, 2021 | 1:01 PM

Share

ಭಾರತದ ಮೊದಲ ದೇಶೀಯ ವಿಮಾನ ವಾಹಕ ಯುದ್ಧನೌಕೆ (Indigenous Aircraft Carrier (IAC) ವಿಕ್ರಾಂತ್ (Vikrant)​​ ಐದು ದಿನಗಳ ಪರೀಕ್ಷಾರ್ಥ ಸಂಚಾರ ಮುಗಿಸಿ ಹಿಂದಿರುಗಿದೆ. 40,000 ಟನ್​ ಯುದ್ಧನೌಕೆಯ ಕಾರ್ಯಕ್ಷಮತೆಯನ್ನು ಪರೀಕ್ಷೆ ಮಾಡಲು, ಐದು ದಿನಗಳ ಸಮುದ್ರ ಪ್ರಯೋಗ (Sea Trial) ಕಳೆದ ಬುಧವಾರದಿಂದ ಪ್ರಾರಂಭವಾಗಿತ್ತು. ಅಂದಾಜು 23 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಈ ವಿಕ್ರಾಂತ್​ ಯುದ್ಧನೌಕೆ (Vikrant Aircraft Carrier)ಯನ್ನು ತಯಾರಿಸಲಾಗಿದೆ. ಈ ಸ್ವದೇಶಿ ನಿರ್ಮಿತ ವಿಮಾನ ವಾಹಕ ಯುದ್ಧನೌಕೆ ಮುಂದಿನ ವರ್ಷ ಆಗಸ್ಟ್​​ನಿಂದ ಭಾರತೀಯ ನೌಕಾಪಡೆಯನ್ನು ಸೇರಲಿದೆ.

ಈ ಯುದ್ಧ ನೌಕೆಯೀಗ ಯಶಸ್ವಿಯಾಗಿ ಪರೀಕ್ಷಾರ್ಥ ಸಂಚಾರವನ್ನು ಪೂರ್ಣಗೊಳಿಸಿದೆ. ಇದು ಭಾರತದ ಪಾಲಿಗೆ ಐತಿಹಾಸಿಕ ದಿನ ಎಂದು ಉಪ ನೌಕಾ ಸೇನಾಪತಿ ಎ.ಕೆ.ಚಾವ್ಲಾ ತಿಳಿಸಿದ್ದಾರೆ. ಯುದ್ಧನೌಕೆಯ ಐದು ದಿನಗಳ ಪ್ರಯೋಗದ ನಂತರ ನಾವೀಗ ಕೊಚ್ಚಿಗೆ ವಾಪಸ್​ ಆಗುತ್ತಿದ್ದೇವೆ. ನಮಗೀಗ ಸಂಪೂರ್ಣ ತೃಪ್ತಿಯಿದೆ. ಇಡೀ ತಂಡದ ಶ್ರಮದಿಂದ ಇಂಥದ್ದೊಂದು ಮಹತ್ವದ ಕಾರ್ಯ ಸಾಧಿಸಲು ಸಾಧ್ಯವಾಗಿದೆ ಎಂದು ಎ.ಕೆ.ಚಾವ್ಲಾ ತಿಳಿಸಿದ್ದಾರೆ.

ಯುದ್ಧ ನೌಕೆಯ ಸಿಸ್ಟಂ ಪ್ಯಾರಾಮೀಟರ್​ಗಳು ತೃಪ್ತಿದಾಯಕವಾಗಿ ಕೆಲಸ ಮಾಡುತ್ತಿವೆ. ನೌಕೆಯ ಒಟ್ಟಾರೆ ಕಾರ್ಯಕ್ಷಮತೆ, ಹಲ್, ವಿದ್ಯುತ್​ ಉತ್ಪಾದನೆ, ಪೂರೈಕೆ ಸೇರಿ ಎಲ್ಲ ವಿಭಾಗಗಳನ್ನೂ ಪ್ರಯೋಗ ಹಂತದಲ್ಲಿ ಪರೀಕ್ಷಿಸಲಾಗಿದೆ ಎಂದು ನೌಕಾಪಡೆ ಮಾಹಿತಿ ನೀಡಿದೆ. ಈ ಯುದ್ಧನೌಕೆ 262 ಮೀಟರ್​ ಉದ್ದವಾಗಿದ್ದು, 62 ಮೀಟರ್​ ಅಗಲವಾಗಿದೆ. 59 ಮೀಟರ್​ ಎತ್ತರವಿದೆ. ಒಟ್ಟಾರೆ 14 ಡೆಕ್​ಗಳಿವೆ.

ಇದನ್ನೂ ಓದಿ: ಬಿಗ್ ಬಾಸ್​ ಗೆದ್ದ ಮಂಜುಗೆ ವೆಲ್​ಕಮ್​ ಹೇಗಿತ್ತು? ಇಲ್ಲಿದೆ ವಿಡಿಯೋ

Senior Citizens Fixed Deposits: ಹಿರಿಯ ನಾಗರಿಕರಿಗೆ ಶೇ 7.25ರ ತನಕ ಬಡ್ಡಿ ದರ ನೀಡುವ ಟಾಪ್ 5 ಬ್ಯಾಂಕ್​ಗಳಿವು

Published On - 12:54 pm, Mon, 9 August 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ