AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷಾರ್ಥ ಸಂಚಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಯುದ್ಧನೌಕೆ ವಿಕ್ರಾಂತ್​; ದೇಶಕ್ಕಿದು ಐತಿಹಾಸಿಕ ದಿನ

Vikrant: ಯುದ್ಧನೌಕೆಯ ಐದು ದಿನಗಳ ಪ್ರಯೋಗದ ನಂತರ ನಾವೀಗ ಕೊಚ್ಚಿಗೆ ವಾಪಸ್​ ಆಗುತ್ತಿದ್ದೇವೆ. ನಮಗೀಗ ಸಂಪೂರ್ಣ ತೃಪ್ತಿಯಿದೆಎಂದು ಉಪ ನೌಕಾ ಸೇನಾಪತಿ ಎ.ಕೆ.ಚಾವ್ಲಾ ತಿಳಿಸಿದ್ದಾರೆ.

ಪರೀಕ್ಷಾರ್ಥ ಸಂಚಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಯುದ್ಧನೌಕೆ ವಿಕ್ರಾಂತ್​; ದೇಶಕ್ಕಿದು ಐತಿಹಾಸಿಕ ದಿನ
ವಿಕ್ರಾಂತ್​ ಯುದ್ಧ ನೌಕೆ
TV9 Web
| Edited By: |

Updated on:Aug 09, 2021 | 1:01 PM

Share

ಭಾರತದ ಮೊದಲ ದೇಶೀಯ ವಿಮಾನ ವಾಹಕ ಯುದ್ಧನೌಕೆ (Indigenous Aircraft Carrier (IAC) ವಿಕ್ರಾಂತ್ (Vikrant)​​ ಐದು ದಿನಗಳ ಪರೀಕ್ಷಾರ್ಥ ಸಂಚಾರ ಮುಗಿಸಿ ಹಿಂದಿರುಗಿದೆ. 40,000 ಟನ್​ ಯುದ್ಧನೌಕೆಯ ಕಾರ್ಯಕ್ಷಮತೆಯನ್ನು ಪರೀಕ್ಷೆ ಮಾಡಲು, ಐದು ದಿನಗಳ ಸಮುದ್ರ ಪ್ರಯೋಗ (Sea Trial) ಕಳೆದ ಬುಧವಾರದಿಂದ ಪ್ರಾರಂಭವಾಗಿತ್ತು. ಅಂದಾಜು 23 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಈ ವಿಕ್ರಾಂತ್​ ಯುದ್ಧನೌಕೆ (Vikrant Aircraft Carrier)ಯನ್ನು ತಯಾರಿಸಲಾಗಿದೆ. ಈ ಸ್ವದೇಶಿ ನಿರ್ಮಿತ ವಿಮಾನ ವಾಹಕ ಯುದ್ಧನೌಕೆ ಮುಂದಿನ ವರ್ಷ ಆಗಸ್ಟ್​​ನಿಂದ ಭಾರತೀಯ ನೌಕಾಪಡೆಯನ್ನು ಸೇರಲಿದೆ.

ಈ ಯುದ್ಧ ನೌಕೆಯೀಗ ಯಶಸ್ವಿಯಾಗಿ ಪರೀಕ್ಷಾರ್ಥ ಸಂಚಾರವನ್ನು ಪೂರ್ಣಗೊಳಿಸಿದೆ. ಇದು ಭಾರತದ ಪಾಲಿಗೆ ಐತಿಹಾಸಿಕ ದಿನ ಎಂದು ಉಪ ನೌಕಾ ಸೇನಾಪತಿ ಎ.ಕೆ.ಚಾವ್ಲಾ ತಿಳಿಸಿದ್ದಾರೆ. ಯುದ್ಧನೌಕೆಯ ಐದು ದಿನಗಳ ಪ್ರಯೋಗದ ನಂತರ ನಾವೀಗ ಕೊಚ್ಚಿಗೆ ವಾಪಸ್​ ಆಗುತ್ತಿದ್ದೇವೆ. ನಮಗೀಗ ಸಂಪೂರ್ಣ ತೃಪ್ತಿಯಿದೆ. ಇಡೀ ತಂಡದ ಶ್ರಮದಿಂದ ಇಂಥದ್ದೊಂದು ಮಹತ್ವದ ಕಾರ್ಯ ಸಾಧಿಸಲು ಸಾಧ್ಯವಾಗಿದೆ ಎಂದು ಎ.ಕೆ.ಚಾವ್ಲಾ ತಿಳಿಸಿದ್ದಾರೆ.

ಯುದ್ಧ ನೌಕೆಯ ಸಿಸ್ಟಂ ಪ್ಯಾರಾಮೀಟರ್​ಗಳು ತೃಪ್ತಿದಾಯಕವಾಗಿ ಕೆಲಸ ಮಾಡುತ್ತಿವೆ. ನೌಕೆಯ ಒಟ್ಟಾರೆ ಕಾರ್ಯಕ್ಷಮತೆ, ಹಲ್, ವಿದ್ಯುತ್​ ಉತ್ಪಾದನೆ, ಪೂರೈಕೆ ಸೇರಿ ಎಲ್ಲ ವಿಭಾಗಗಳನ್ನೂ ಪ್ರಯೋಗ ಹಂತದಲ್ಲಿ ಪರೀಕ್ಷಿಸಲಾಗಿದೆ ಎಂದು ನೌಕಾಪಡೆ ಮಾಹಿತಿ ನೀಡಿದೆ. ಈ ಯುದ್ಧನೌಕೆ 262 ಮೀಟರ್​ ಉದ್ದವಾಗಿದ್ದು, 62 ಮೀಟರ್​ ಅಗಲವಾಗಿದೆ. 59 ಮೀಟರ್​ ಎತ್ತರವಿದೆ. ಒಟ್ಟಾರೆ 14 ಡೆಕ್​ಗಳಿವೆ.

ಇದನ್ನೂ ಓದಿ: ಬಿಗ್ ಬಾಸ್​ ಗೆದ್ದ ಮಂಜುಗೆ ವೆಲ್​ಕಮ್​ ಹೇಗಿತ್ತು? ಇಲ್ಲಿದೆ ವಿಡಿಯೋ

Senior Citizens Fixed Deposits: ಹಿರಿಯ ನಾಗರಿಕರಿಗೆ ಶೇ 7.25ರ ತನಕ ಬಡ್ಡಿ ದರ ನೀಡುವ ಟಾಪ್ 5 ಬ್ಯಾಂಕ್​ಗಳಿವು

Published On - 12:54 pm, Mon, 9 August 21

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್