AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾಂಗ ಪ್ರಯಾಣಿಕರಿಗೆ ವಿಮಾನಯಾನ ನಿರಾಕರಿಸುವಂತಿಲ್ಲ; ವಿಮಾನಯಾನ ಸಂಸ್ಥೆಗಳಿಗೆ ಡಿಜಿಸಿಎನಿಂದ ಸುತ್ತೋಲೆ

ನಾಗರಿಕ ವಿಮಾನಯಾನ ನಿಯಂತ್ರಕ DGCA ಇತ್ತೀಚೆಗೆ ವಿಮಾನಯಾನ ಸಂಸ್ಥೆಗಳಿಗೆ ಮಾರ್ಗಸೂಚಿಯೊಂದನ್ನು ಹೊರಡಿಸಿದ್ದು ದಿವ್ಯಾಂಗ ಪ್ರಯಾಣಿಕರಿಗೆ ವಿಮಾನಯಾನ ನಿರಾಕರಿಸುವಂತಿಲ್ಲ ಎಂದು ಹೇಳಿದೆ.

ದಿವ್ಯಾಂಗ ಪ್ರಯಾಣಿಕರಿಗೆ ವಿಮಾನಯಾನ ನಿರಾಕರಿಸುವಂತಿಲ್ಲ; ವಿಮಾನಯಾನ ಸಂಸ್ಥೆಗಳಿಗೆ ಡಿಜಿಸಿಎನಿಂದ ಸುತ್ತೋಲೆ
ಇಂಡಿಗೊ (ಸಾಂಧರ್ಬಿಕ ಚಿತ್ರ)
TV9 Web
| Edited By: |

Updated on:Jun 03, 2022 | 10:04 PM

Share

ನವದೆಹಲಿ: ನಾಗರಿಕ ವಿಮಾನಯಾನ ನಿಯಂತ್ರಕ (DGCA) ಇತ್ತೀಚೆಗೆ ವಿಮಾನಯಾನ ಸಂಸ್ಥೆಗಳಿಗೆ ಮಾರ್ಗಸೂಚಿಯೊಂದನ್ನು ಹೊರಡಿಸಿದೆ. ಮಾರ್ಗಸೂಚಿ ಪ್ರಕಾರ ವಿಮಾನಯಾನದ ಸಮಯದಲ್ಲಿ ದಿವ್ಯಾಂಗ (handicapped) ಪ್ರಯಾಣಿಕರ ಆರೋಗ್ಯವು ಹದಗೆಡುವ ಸಾಧ್ಯತೆಯಿದೆ ಎಂದು ವಿಮಾನಯಾನ ಸಂಸ್ಥೆಯು ಭಾವಿಸಿದರೆ, ವಿಮಾನ ನಿಲ್ದಾಣದಲ್ಲಿ ವೈದ್ಯರನ್ನು ಸಂಪರ್ಕಿಸಿ ಮತ್ತು ಫ್ಲೈಯರ್‌ಗೆ ಬೋರ್ಡಿಂಗ್​ನ್ನು ನಿರಾಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ಸೂಕ್ತವಾದ ಮಾಹಿತಿ ತೆಗೆದುಕೊಳ್ಳಬೇಕು ಎಂದು ಡಿಜಿಸಿಎ ಶುಕ್ರವಾರ ತಿಳಿಸಿದೆ.

ದಿವ್ಯಾಂಗ ಮಗುವೊಂದು ರಾಂಚಿ-ಹೈದರಾಬಾದ್​ಗೆ ಪ್ರಯಾಣಿಸಲು ಮುಂದಾಗಿದ್ದಾಗ ಇಂಡಿಗೋ (Indigo)  ವಿಮಾನಯಾನ ಸಂಸ್ಥೆ ಅವರನ್ನು ತೆಡೆದಿತ್ತು. ಹೀಗಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಇಂಡಿಗೋ ವಿಮಾನಯಾನ ಸಂಸ್ಥೆಗೆ ₹ 5 ಲಕ್ಷ ದಂಡ ವಿಧಿಸಿದೆ ಎಂದು ಹೇಳಿದೆ.

ಈ ಪ್ರಕರಣದ ನಂತರ ಡಿಜಿಸಿಎ  ಭವಿಷ್ಯದಲ್ಲಿ ಅಂತಹ ಸಂದರ್ಭಗಳನ್ನು ತಪ್ಪಿಸಲು ತನ್ನದೇ ಆದ ನಿಯಮಗಳನ್ನು ಮರುಪರಿಶೀಲಿಸುವುದಾಗಿ ಹೇಳಿದೆ, ಬೋರ್ಡಿಂಗ್ ನಿರಾಕರಿಸುವ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ಪ್ರಯಾಣಿಕರ ಆರೋಗ್ಯದ ಬಗ್ಗೆ ವಿಮಾನ ನಿಲ್ದಾಣದ ವೈದ್ಯರ ಲಿಖಿತ ಅಭಿಪ್ರಾಯವನ್ನು ವಿಮಾನಯಾನ ಸಂಸ್ಥೆಗಳು ಕಡ್ಡಾಯವಾಗಿ ತೆಗೆದುಕೊಳ್ಳುತ್ತದೆ.

ಶುಕ್ರವಾರ DGCA ಮಾರ್ಗಸೂಚಿ ಹೊರಡಿಸಿದ್ದು, “ವಿಮಾನಯಾನವು ದಿವ್ಯಾಂಗದ ಆಧಾರದ ಮೇಲೆ ಯಾವುದೇ ವ್ಯಕ್ತಿಯ ಸಾಗಣೆಯನ್ನು ನಿರಾಕರಿಸುವುದಿಲ್ಲ.” ಆದಾಗ್ಯೂ, ಅಂತಹ ಪ್ರಯಾಣಿಕನ ಆರೋಗ್ಯವು ವಿಮಾನದಲ್ಲಿ ಹದಗೆಡಬಹುದು ಎಂದು ವಿಮಾನಯಾನ ಸಂಸ್ಥೆಯು ಗ್ರಹಿಸಿದರೆ, ಹೇಳಲಾದ ಪ್ರಯಾಣಿಕರನ್ನು ವೈದ್ಯರು ಪರೀಕ್ಷಿಸಬೇಕಾಗುತ್ತದೆ. ಅವರು ವೈದ್ಯಕೀಯ ಸ್ಥಿತಿಯನ್ನು ಮತ್ತು ಪ್ರಯಾಣಿಕರು ಪ್ರಯಾಣಿಸಲು ಯೋಗ್ಯರಾಗಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ದಿಷ್ಟವಾಗಿ ತಿಳಿಸುತ್ತಾರೆ. ವೈದ್ಯಕೀಯ ಅಭಿಪ್ರಾಯವನ್ನು ಪಡೆದ ನಂತರ, ವಿಮಾನಯಾನ ಸಂಸ್ಥೆಯು ಸೂಕ್ತ ಕರೆಯನ್ನು ತೆಗೆದುಕೊಳ್ಳುತ್ತದೆ, ”ಎಂದು ಅದು ಉಲ್ಲೇಖಿಸಿದೆ.

ಜುಲೈ 2 ರೊಳಗೆ ಕರಡು ನಿಯಮಗಳ ಬಗ್ಗೆ ತಮ್ಮ ಅಭಿಪ್ರಯಾ ತಿಳಿಸಲು ನಿಯಂತ್ರಕರು ಸಾರ್ವಜನಿಕರನ್ನು ಕೇಳಿದ್ದಾರೆ. ನಂತರ ಅದು ಅಂತಿಮ ನಿಯಮಗಳನ್ನು ಹೊರಡಿಸುತ್ತದೆ.

ಘಟನೆಯ ನಂತರ ಇಂಡಿಗೋ ಸಿಇಒ ರೊನೊಜೋಯ್ ದತ್ತಾ ಅವರು ಮೇ 9 ರಂದು ವಿಷಾದ ವ್ಯಕ್ತಪಡಿಸಿದ್ದರು ಮತ್ತು ವಿಶೇಷ ಸಾಮರ್ಥ್ಯ ಹೊಂದಿರುವ ಮಗುವಿಗೆ ಎಲೆಕ್ಟ್ರಿಕ್ ಗಾಲಿಕುರ್ಚಿ ಖರೀದಿಸಲು ಮುಂದಾಗಿದ್ದರು. ಕಠಿಣ ಪರಿಸ್ಥಿತಿಯಲ್ಲಿ ಏರ್‌ಲೈನ್ ಸಿಬ್ಬಂದಿ ಅತ್ಯುತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ದತ್ತಾ ಹೇಳಿದ್ದರು.

ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಮೇ 9 ರಂದು ಟ್ವಿಟರ್‌ನಲ್ಲಿ ರಾಂಚಿ ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದರು.

Published On - 10:04 pm, Fri, 3 June 22

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ