Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷಾಂತರ Airtel​ ಮೊಬೈಲ್​ ಗ್ರಾಹಕರ ಮಾಹಿತಿ ಸೋರಿಕೆ.. ಖಾಸಗಿ ಡೇಟಾ ಮಾರಾಟಕ್ಕೆ ಇಟ್ಟ ಹ್ಯಾಕರ್ಸ್​

ಲಕ್ಷಾಂತರ ಮಂದಿ ಏರ್​ಟೆಲ್ ಗ್ರಾಹಕರ ಫೋನ್​ ನಂಬರ್​ಗಳ​ ಜೊತೆಗೆ ಖಾಸಗಿ ಮಾಹಿತಿ ಸಹ ಸೋರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದಲ್ಲದೆ, ಏರ್​ಟೆಲ್​ ಗ್ರಾಹಕರ ವಿಳಾಸ, ಆಧಾರ್​ ಕಾರ್ಡ್​ ಮತ್ತು ಇತರೆ ಖಾಸಗಿ ಮಾಹಿತಿಯನ್ನು ಹ್ಯಾಕರ್​ಗಳು ಮಾರಾಟ ಮಾಡಲು ಯತ್ನಿಸಿದರು ಎಂಬ ಮಾಹಿತಿ ಸಹ ಸಿಕ್ಕಿದೆ.

ಲಕ್ಷಾಂತರ Airtel​ ಮೊಬೈಲ್​ ಗ್ರಾಹಕರ ಮಾಹಿತಿ ಸೋರಿಕೆ.. ಖಾಸಗಿ ಡೇಟಾ ಮಾರಾಟಕ್ಕೆ ಇಟ್ಟ ಹ್ಯಾಕರ್ಸ್​
ಪ್ರಾತಿನಿಧಿಕ ಚಿತ್ರ
Follow us
KUSHAL V
|

Updated on: Feb 02, 2021 | 10:27 PM

ದೆಹಲಿ: ಲಕ್ಷಾಂತರ ಮಂದಿ ಏರ್​ಟೆಲ್ ಗ್ರಾಹಕರ ಫೋನ್​ ನಂಬರ್​ಗಳ​ ಜೊತೆಗೆ ಖಾಸಗಿ ಮಾಹಿತಿ ಸಹ ಸೋರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದಲ್ಲದೆ, ಏರ್​ಟೆಲ್​ ಗ್ರಾಹಕರ ವಿಳಾಸ, ಆಧಾರ್​ ಕಾರ್ಡ್​ ಮತ್ತು ಇತರೆ ಖಾಸಗಿ ಮಾಹಿತಿಯನ್ನು ಹ್ಯಾಕರ್​ಗಳು ಮಾರಾಟ ಮಾಡಲು ಯತ್ನಿಸಿದರು ಎಂಬ ಮಾಹಿತಿ ಸಹ ಸಿಕ್ಕಿದೆ.

ರಾಜಶೇಖರ್​ ರಾಜಾಹಾರಿಯಾ ಎಂಬ ಇಂಟರ್​ನೆಟ್​ ಭದ್ರತಾ ಸಂಶೋಧಕ ಈ ಮಾಹಿತಿ ಸೋರಿಕೆಯನ್ನು ಮೊದಲು ಪತ್ತೆಹಚ್ಚಿದ್ದಾರೆ. ಅಂದ ಹಾಗೆ, ಗ್ರಾಹಕರ ಮಾಹಿತಿ ಕದ್ದ ಹ್ಯಾಕರ್​ಗಳು ಅದನ್ನು ಬಳಸಿ ಏರ್​ಟೆಲ್​ ಕಂಪನಿ ಬಳಿ ಸುಲಿಗೆ ಮಾಡಲು ಮುಂದಾಗಿದ್ದರಂತೆ. ಸುಮಾರು 3,500 ಬಿಟ್​ಕಾಯಿನ್​ಗಳಿಗೆ ಬೇಡಿಕೆ ಸಹ ಇಟ್ಟಿದ್ದರಂತೆ.

ಆದರೆ, ಕಂಪನಿ ಅವರ ಬೇಡಿಕೆಗಳನ್ನು ಒಪ್ಪದೆ ಇದ್ದಾಗ ಸಿಟ್ಟಿಗೆದ್ದ ಹ್ಯಾಕರ್​ ತಂಡ ಎಲ್ಲಾ ಮಾಹಿತಿಯನ್ನು ವೆಬ್​ಸೈಟ್​ ಒಂದರಲ್ಲಿ ಮಾರಲು ಮುಂದಾದರಂತೆ. ಸದ್ಯ, ಈ ವೆಬ್​ಸೈಟ್​ನ ತೆಗೆದುಹಾಕಲಾಗಿದೆ.

ಈ ನಡುವೆ, ಕೆಲ ಮೂಲಗಳ ಪ್ರಕಾರ ಮಾಹಿತಿ ಸೋರಿಕೆ, ಏರ್​ಟೆಲ್​ ಕಂಪನಿ ಕಡೆಯಿಂದ ನಡೆದಿಲ್ಲ ಬದಲಿಗೆ ಮೊಬೈಲ್​ ಗ್ರಾಹಕರ ಮೇಲೆ ನಿಗಾವಹಿಸುವ ಸರ್ಕಾರಿ ಏಜೆನ್ಸಿಗಳ ಮುಖಾಂತರ ಆಗಿದೆ ಎಂದು ಹೇಳಲಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ, ಸೋರಿಕೆಯಾದ ಎಲ್ಲಾ ಮಾಹಿತಿ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಏರ್​ಟೆಲ್​ ಗ್ರಾಹಕರಿಗೆ ಸೇರಿದ್ದು ಎಂದು ತಿಳಿದುಬಂದಿದೆ.

ಇನ್ನು, ಈ ಕುರಿತು ಏರ್​ಟೆಲ್​ ಸಂಸ್ಥೆ ಪ್ರತಿಕ್ರಿಯಿಸಿದ್ದು ನಮ್ಮ ಕಂಪನಿ, ಗ್ರಾಹಕರ ಖಾಸಗಿ ಮಾಹಿತಿಯನ್ನು ಸುರಕ್ಷಿತವಾಗಿ ಇರಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಈ ಪ್ರಕರಣದಲ್ಲಿ ಸಹ ನಮ್ಮ ಕಡೆಯಿಂದ ಯಾವುದೇ ಮಾಹಿತಿ ಸೋರಿಕೆಯಾಗಿಲ್ಲ ಎಂದು ಹೇಳಿದೆ. ಜೊತೆಗೆ, ಈ ಬಗ್ಗೆ ಸೂಕ್ತ ಅಧಿಕಾರಿಗಳಿಗೆ ಮಾಹಿತಿ ಸಹ ನೀಡಿದ್ದೇವೆ ಎಂದು ಹೇಳಿದೆ.

ಆಧಾರ್​ಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ!

ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ