AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷಾಂತರ Airtel​ ಮೊಬೈಲ್​ ಗ್ರಾಹಕರ ಮಾಹಿತಿ ಸೋರಿಕೆ.. ಖಾಸಗಿ ಡೇಟಾ ಮಾರಾಟಕ್ಕೆ ಇಟ್ಟ ಹ್ಯಾಕರ್ಸ್​

ಲಕ್ಷಾಂತರ ಮಂದಿ ಏರ್​ಟೆಲ್ ಗ್ರಾಹಕರ ಫೋನ್​ ನಂಬರ್​ಗಳ​ ಜೊತೆಗೆ ಖಾಸಗಿ ಮಾಹಿತಿ ಸಹ ಸೋರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದಲ್ಲದೆ, ಏರ್​ಟೆಲ್​ ಗ್ರಾಹಕರ ವಿಳಾಸ, ಆಧಾರ್​ ಕಾರ್ಡ್​ ಮತ್ತು ಇತರೆ ಖಾಸಗಿ ಮಾಹಿತಿಯನ್ನು ಹ್ಯಾಕರ್​ಗಳು ಮಾರಾಟ ಮಾಡಲು ಯತ್ನಿಸಿದರು ಎಂಬ ಮಾಹಿತಿ ಸಹ ಸಿಕ್ಕಿದೆ.

ಲಕ್ಷಾಂತರ Airtel​ ಮೊಬೈಲ್​ ಗ್ರಾಹಕರ ಮಾಹಿತಿ ಸೋರಿಕೆ.. ಖಾಸಗಿ ಡೇಟಾ ಮಾರಾಟಕ್ಕೆ ಇಟ್ಟ ಹ್ಯಾಕರ್ಸ್​
ಪ್ರಾತಿನಿಧಿಕ ಚಿತ್ರ
KUSHAL V
|

Updated on: Feb 02, 2021 | 10:27 PM

Share

ದೆಹಲಿ: ಲಕ್ಷಾಂತರ ಮಂದಿ ಏರ್​ಟೆಲ್ ಗ್ರಾಹಕರ ಫೋನ್​ ನಂಬರ್​ಗಳ​ ಜೊತೆಗೆ ಖಾಸಗಿ ಮಾಹಿತಿ ಸಹ ಸೋರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದಲ್ಲದೆ, ಏರ್​ಟೆಲ್​ ಗ್ರಾಹಕರ ವಿಳಾಸ, ಆಧಾರ್​ ಕಾರ್ಡ್​ ಮತ್ತು ಇತರೆ ಖಾಸಗಿ ಮಾಹಿತಿಯನ್ನು ಹ್ಯಾಕರ್​ಗಳು ಮಾರಾಟ ಮಾಡಲು ಯತ್ನಿಸಿದರು ಎಂಬ ಮಾಹಿತಿ ಸಹ ಸಿಕ್ಕಿದೆ.

ರಾಜಶೇಖರ್​ ರಾಜಾಹಾರಿಯಾ ಎಂಬ ಇಂಟರ್​ನೆಟ್​ ಭದ್ರತಾ ಸಂಶೋಧಕ ಈ ಮಾಹಿತಿ ಸೋರಿಕೆಯನ್ನು ಮೊದಲು ಪತ್ತೆಹಚ್ಚಿದ್ದಾರೆ. ಅಂದ ಹಾಗೆ, ಗ್ರಾಹಕರ ಮಾಹಿತಿ ಕದ್ದ ಹ್ಯಾಕರ್​ಗಳು ಅದನ್ನು ಬಳಸಿ ಏರ್​ಟೆಲ್​ ಕಂಪನಿ ಬಳಿ ಸುಲಿಗೆ ಮಾಡಲು ಮುಂದಾಗಿದ್ದರಂತೆ. ಸುಮಾರು 3,500 ಬಿಟ್​ಕಾಯಿನ್​ಗಳಿಗೆ ಬೇಡಿಕೆ ಸಹ ಇಟ್ಟಿದ್ದರಂತೆ.

ಆದರೆ, ಕಂಪನಿ ಅವರ ಬೇಡಿಕೆಗಳನ್ನು ಒಪ್ಪದೆ ಇದ್ದಾಗ ಸಿಟ್ಟಿಗೆದ್ದ ಹ್ಯಾಕರ್​ ತಂಡ ಎಲ್ಲಾ ಮಾಹಿತಿಯನ್ನು ವೆಬ್​ಸೈಟ್​ ಒಂದರಲ್ಲಿ ಮಾರಲು ಮುಂದಾದರಂತೆ. ಸದ್ಯ, ಈ ವೆಬ್​ಸೈಟ್​ನ ತೆಗೆದುಹಾಕಲಾಗಿದೆ.

ಈ ನಡುವೆ, ಕೆಲ ಮೂಲಗಳ ಪ್ರಕಾರ ಮಾಹಿತಿ ಸೋರಿಕೆ, ಏರ್​ಟೆಲ್​ ಕಂಪನಿ ಕಡೆಯಿಂದ ನಡೆದಿಲ್ಲ ಬದಲಿಗೆ ಮೊಬೈಲ್​ ಗ್ರಾಹಕರ ಮೇಲೆ ನಿಗಾವಹಿಸುವ ಸರ್ಕಾರಿ ಏಜೆನ್ಸಿಗಳ ಮುಖಾಂತರ ಆಗಿದೆ ಎಂದು ಹೇಳಲಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ, ಸೋರಿಕೆಯಾದ ಎಲ್ಲಾ ಮಾಹಿತಿ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಏರ್​ಟೆಲ್​ ಗ್ರಾಹಕರಿಗೆ ಸೇರಿದ್ದು ಎಂದು ತಿಳಿದುಬಂದಿದೆ.

ಇನ್ನು, ಈ ಕುರಿತು ಏರ್​ಟೆಲ್​ ಸಂಸ್ಥೆ ಪ್ರತಿಕ್ರಿಯಿಸಿದ್ದು ನಮ್ಮ ಕಂಪನಿ, ಗ್ರಾಹಕರ ಖಾಸಗಿ ಮಾಹಿತಿಯನ್ನು ಸುರಕ್ಷಿತವಾಗಿ ಇರಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಈ ಪ್ರಕರಣದಲ್ಲಿ ಸಹ ನಮ್ಮ ಕಡೆಯಿಂದ ಯಾವುದೇ ಮಾಹಿತಿ ಸೋರಿಕೆಯಾಗಿಲ್ಲ ಎಂದು ಹೇಳಿದೆ. ಜೊತೆಗೆ, ಈ ಬಗ್ಗೆ ಸೂಕ್ತ ಅಧಿಕಾರಿಗಳಿಗೆ ಮಾಹಿತಿ ಸಹ ನೀಡಿದ್ದೇವೆ ಎಂದು ಹೇಳಿದೆ.

ಆಧಾರ್​ಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ!

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು