AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷಾಂತರ Airtel​ ಮೊಬೈಲ್​ ಗ್ರಾಹಕರ ಮಾಹಿತಿ ಸೋರಿಕೆ.. ಖಾಸಗಿ ಡೇಟಾ ಮಾರಾಟಕ್ಕೆ ಇಟ್ಟ ಹ್ಯಾಕರ್ಸ್​

ಲಕ್ಷಾಂತರ ಮಂದಿ ಏರ್​ಟೆಲ್ ಗ್ರಾಹಕರ ಫೋನ್​ ನಂಬರ್​ಗಳ​ ಜೊತೆಗೆ ಖಾಸಗಿ ಮಾಹಿತಿ ಸಹ ಸೋರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದಲ್ಲದೆ, ಏರ್​ಟೆಲ್​ ಗ್ರಾಹಕರ ವಿಳಾಸ, ಆಧಾರ್​ ಕಾರ್ಡ್​ ಮತ್ತು ಇತರೆ ಖಾಸಗಿ ಮಾಹಿತಿಯನ್ನು ಹ್ಯಾಕರ್​ಗಳು ಮಾರಾಟ ಮಾಡಲು ಯತ್ನಿಸಿದರು ಎಂಬ ಮಾಹಿತಿ ಸಹ ಸಿಕ್ಕಿದೆ.

ಲಕ್ಷಾಂತರ Airtel​ ಮೊಬೈಲ್​ ಗ್ರಾಹಕರ ಮಾಹಿತಿ ಸೋರಿಕೆ.. ಖಾಸಗಿ ಡೇಟಾ ಮಾರಾಟಕ್ಕೆ ಇಟ್ಟ ಹ್ಯಾಕರ್ಸ್​
ಪ್ರಾತಿನಿಧಿಕ ಚಿತ್ರ
Digi Tech Desk
| Edited By: |

Updated on:Apr 03, 2026 | 10:53 AM

Share

ದೆಹಲಿ: ಲಕ್ಷಾಂತರ ಮಂದಿ ಏರ್​ಟೆಲ್ ಗ್ರಾಹಕರ ಫೋನ್​ ನಂಬರ್​ಗಳ​ ಜೊತೆಗೆ ಖಾಸಗಿ ಮಾಹಿತಿ ಸಹ ಸೋರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದಲ್ಲದೆ, ಏರ್​ಟೆಲ್​ ಗ್ರಾಹಕರ ವಿಳಾಸ, ಆಧಾರ್​ ಕಾರ್ಡ್​ ಮತ್ತು ಇತರೆ ಖಾಸಗಿ ಮಾಹಿತಿಯನ್ನು ಹ್ಯಾಕರ್​ಗಳು ಮಾರಾಟ ಮಾಡಲು ಯತ್ನಿಸಿದರು ಎಂಬ ಮಾಹಿತಿ ಸಹ ಸಿಕ್ಕಿದೆ.

ರಾಜಶೇಖರ್​ ರಾಜಾಹಾರಿಯಾ ಎಂಬ ಇಂಟರ್​ನೆಟ್​ ಭದ್ರತಾ ಸಂಶೋಧಕ ಈ ಮಾಹಿತಿ ಸೋರಿಕೆಯನ್ನು ಮೊದಲು ಪತ್ತೆಹಚ್ಚಿದ್ದಾರೆ. ಅಂದ ಹಾಗೆ, ಗ್ರಾಹಕರ ಮಾಹಿತಿ ಕದ್ದ ಹ್ಯಾಕರ್​ಗಳು ಅದನ್ನು ಬಳಸಿ ಏರ್​ಟೆಲ್​ ಕಂಪನಿ ಬಳಿ ಸುಲಿಗೆ ಮಾಡಲು ಮುಂದಾಗಿದ್ದರಂತೆ. ಸುಮಾರು 3,500 ಬಿಟ್​ಕಾಯಿನ್​ಗಳಿಗೆ ಬೇಡಿಕೆ ಸಹ ಇಟ್ಟಿದ್ದರಂತೆ.

ಆದರೆ, ಕಂಪನಿ ಅವರ ಬೇಡಿಕೆಗಳನ್ನು ಒಪ್ಪದೆ ಇದ್ದಾಗ ಸಿಟ್ಟಿಗೆದ್ದ ಹ್ಯಾಕರ್​ ತಂಡ ಎಲ್ಲಾ ಮಾಹಿತಿಯನ್ನು ವೆಬ್​ಸೈಟ್​ ಒಂದರಲ್ಲಿ ಮಾರಲು ಮುಂದಾದರಂತೆ. ಸದ್ಯ, ಈ ವೆಬ್​ಸೈಟ್​ನ ತೆಗೆದುಹಾಕಲಾಗಿದೆ.

ಈ ನಡುವೆ, ಕೆಲ ಮೂಲಗಳ ಪ್ರಕಾರ ಮಾಹಿತಿ ಸೋರಿಕೆ, ಏರ್​ಟೆಲ್​ ಕಂಪನಿ ಕಡೆಯಿಂದ ನಡೆದಿಲ್ಲ ಬದಲಿಗೆ ಮೊಬೈಲ್​ ಗ್ರಾಹಕರ ಮೇಲೆ ನಿಗಾವಹಿಸುವ ಸರ್ಕಾರಿ ಏಜೆನ್ಸಿಗಳ ಮುಖಾಂತರ ಆಗಿದೆ ಎಂದು ಹೇಳಲಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ, ಸೋರಿಕೆಯಾದ ಎಲ್ಲಾ ಮಾಹಿತಿ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಏರ್​ಟೆಲ್​ ಗ್ರಾಹಕರಿಗೆ ಸೇರಿದ್ದು ಎಂದು ತಿಳಿದುಬಂದಿದೆ.

ಇನ್ನು, ಈ ಕುರಿತು ಏರ್​ಟೆಲ್​ ಸಂಸ್ಥೆ ಪ್ರತಿಕ್ರಿಯಿಸಿದ್ದು ನಮ್ಮ ಕಂಪನಿ, ಗ್ರಾಹಕರ ಖಾಸಗಿ ಮಾಹಿತಿಯನ್ನು ಸುರಕ್ಷಿತವಾಗಿ ಇರಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಈ ಪ್ರಕರಣದಲ್ಲಿ ಸಹ ನಮ್ಮ ಕಡೆಯಿಂದ ಯಾವುದೇ ಮಾಹಿತಿ ಸೋರಿಕೆಯಾಗಿಲ್ಲ ಎಂದು ಹೇಳಿದೆ. ಜೊತೆಗೆ, ಈ ಬಗ್ಗೆ ಸೂಕ್ತ ಅಧಿಕಾರಿಗಳಿಗೆ ಮಾಹಿತಿ ಸಹ ನೀಡಿದ್ದೇವೆ ಎಂದು ಹೇಳಿದೆ.

Published On - 10:27 pm, Tue, 2 February 21

Follow Us
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ