AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷಾಂತರ Airtel​ ಮೊಬೈಲ್​ ಗ್ರಾಹಕರ ಮಾಹಿತಿ ಸೋರಿಕೆ.. ಖಾಸಗಿ ಡೇಟಾ ಮಾರಾಟಕ್ಕೆ ಇಟ್ಟ ಹ್ಯಾಕರ್ಸ್​

ಲಕ್ಷಾಂತರ ಮಂದಿ ಏರ್​ಟೆಲ್ ಗ್ರಾಹಕರ ಫೋನ್​ ನಂಬರ್​ಗಳ​ ಜೊತೆಗೆ ಖಾಸಗಿ ಮಾಹಿತಿ ಸಹ ಸೋರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದಲ್ಲದೆ, ಏರ್​ಟೆಲ್​ ಗ್ರಾಹಕರ ವಿಳಾಸ, ಆಧಾರ್​ ಕಾರ್ಡ್​ ಮತ್ತು ಇತರೆ ಖಾಸಗಿ ಮಾಹಿತಿಯನ್ನು ಹ್ಯಾಕರ್​ಗಳು ಮಾರಾಟ ಮಾಡಲು ಯತ್ನಿಸಿದರು ಎಂಬ ಮಾಹಿತಿ ಸಹ ಸಿಕ್ಕಿದೆ.

ಲಕ್ಷಾಂತರ Airtel​ ಮೊಬೈಲ್​ ಗ್ರಾಹಕರ ಮಾಹಿತಿ ಸೋರಿಕೆ.. ಖಾಸಗಿ ಡೇಟಾ ಮಾರಾಟಕ್ಕೆ ಇಟ್ಟ ಹ್ಯಾಕರ್ಸ್​
ಪ್ರಾತಿನಿಧಿಕ ಚಿತ್ರ
Digi Tech Desk
| Edited By: |

Updated on:Apr 03, 2026 | 10:53 AM

Share

ದೆಹಲಿ: ಲಕ್ಷಾಂತರ ಮಂದಿ ಏರ್​ಟೆಲ್ ಗ್ರಾಹಕರ ಫೋನ್​ ನಂಬರ್​ಗಳ​ ಜೊತೆಗೆ ಖಾಸಗಿ ಮಾಹಿತಿ ಸಹ ಸೋರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದಲ್ಲದೆ, ಏರ್​ಟೆಲ್​ ಗ್ರಾಹಕರ ವಿಳಾಸ, ಆಧಾರ್​ ಕಾರ್ಡ್​ ಮತ್ತು ಇತರೆ ಖಾಸಗಿ ಮಾಹಿತಿಯನ್ನು ಹ್ಯಾಕರ್​ಗಳು ಮಾರಾಟ ಮಾಡಲು ಯತ್ನಿಸಿದರು ಎಂಬ ಮಾಹಿತಿ ಸಹ ಸಿಕ್ಕಿದೆ.

ರಾಜಶೇಖರ್​ ರಾಜಾಹಾರಿಯಾ ಎಂಬ ಇಂಟರ್​ನೆಟ್​ ಭದ್ರತಾ ಸಂಶೋಧಕ ಈ ಮಾಹಿತಿ ಸೋರಿಕೆಯನ್ನು ಮೊದಲು ಪತ್ತೆಹಚ್ಚಿದ್ದಾರೆ. ಅಂದ ಹಾಗೆ, ಗ್ರಾಹಕರ ಮಾಹಿತಿ ಕದ್ದ ಹ್ಯಾಕರ್​ಗಳು ಅದನ್ನು ಬಳಸಿ ಏರ್​ಟೆಲ್​ ಕಂಪನಿ ಬಳಿ ಸುಲಿಗೆ ಮಾಡಲು ಮುಂದಾಗಿದ್ದರಂತೆ. ಸುಮಾರು 3,500 ಬಿಟ್​ಕಾಯಿನ್​ಗಳಿಗೆ ಬೇಡಿಕೆ ಸಹ ಇಟ್ಟಿದ್ದರಂತೆ.

ಆದರೆ, ಕಂಪನಿ ಅವರ ಬೇಡಿಕೆಗಳನ್ನು ಒಪ್ಪದೆ ಇದ್ದಾಗ ಸಿಟ್ಟಿಗೆದ್ದ ಹ್ಯಾಕರ್​ ತಂಡ ಎಲ್ಲಾ ಮಾಹಿತಿಯನ್ನು ವೆಬ್​ಸೈಟ್​ ಒಂದರಲ್ಲಿ ಮಾರಲು ಮುಂದಾದರಂತೆ. ಸದ್ಯ, ಈ ವೆಬ್​ಸೈಟ್​ನ ತೆಗೆದುಹಾಕಲಾಗಿದೆ.

ಈ ನಡುವೆ, ಕೆಲ ಮೂಲಗಳ ಪ್ರಕಾರ ಮಾಹಿತಿ ಸೋರಿಕೆ, ಏರ್​ಟೆಲ್​ ಕಂಪನಿ ಕಡೆಯಿಂದ ನಡೆದಿಲ್ಲ ಬದಲಿಗೆ ಮೊಬೈಲ್​ ಗ್ರಾಹಕರ ಮೇಲೆ ನಿಗಾವಹಿಸುವ ಸರ್ಕಾರಿ ಏಜೆನ್ಸಿಗಳ ಮುಖಾಂತರ ಆಗಿದೆ ಎಂದು ಹೇಳಲಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ, ಸೋರಿಕೆಯಾದ ಎಲ್ಲಾ ಮಾಹಿತಿ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಏರ್​ಟೆಲ್​ ಗ್ರಾಹಕರಿಗೆ ಸೇರಿದ್ದು ಎಂದು ತಿಳಿದುಬಂದಿದೆ.

ಇನ್ನು, ಈ ಕುರಿತು ಏರ್​ಟೆಲ್​ ಸಂಸ್ಥೆ ಪ್ರತಿಕ್ರಿಯಿಸಿದ್ದು ನಮ್ಮ ಕಂಪನಿ, ಗ್ರಾಹಕರ ಖಾಸಗಿ ಮಾಹಿತಿಯನ್ನು ಸುರಕ್ಷಿತವಾಗಿ ಇರಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಈ ಪ್ರಕರಣದಲ್ಲಿ ಸಹ ನಮ್ಮ ಕಡೆಯಿಂದ ಯಾವುದೇ ಮಾಹಿತಿ ಸೋರಿಕೆಯಾಗಿಲ್ಲ ಎಂದು ಹೇಳಿದೆ. ಜೊತೆಗೆ, ಈ ಬಗ್ಗೆ ಸೂಕ್ತ ಅಧಿಕಾರಿಗಳಿಗೆ ಮಾಹಿತಿ ಸಹ ನೀಡಿದ್ದೇವೆ ಎಂದು ಹೇಳಿದೆ.

Published On - 10:27 pm, Tue, 2 February 21

Follow Us
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು