AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಸ್ಟ್​ ಪೇಯ್ಡ್​! ಟೆಲಿಕಾಂ ಇಲಾಖೆಗೆ 8ಸಾವಿರ ಕೋಟಿ ಪಾತಿಸಿದ ಏರ್​ಟೆಲ್

ಟೆಲಿಕಾಂ ಇಲಾಖೆಗೆ ಏರ್‌ಟೆಲ್‌ ಕಂಪನಿ ಮತ್ತೆ 8,000 ಕೋಟಿ ರೂಪಾಯಿ ಪಾವತಿಸಿದೆ. ಫೆ.17ರಂದು 10 ಸಾವಿರ ಕೋಟಿ ಪಾವತಿ ಮಾಡಿತ್ತು. ತರಂಗಗುಚ್ಛದ ಬಳಕೆ, ಪರವಾನಗಿ ಶುಲ್ಕ ಸೇರಿದಂತೆ ಏರ್‌ಟೆಲ್‌ 35,586 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ದಂಡ ಪಾವತಿಸುವಂತೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ ಮೆಟ್ಟಿಲೇರಿತ್ತು. ಅಪಘಾತಕ್ಕೆ 8 ಮಂದಿ ಬಲಿ: ಸರ್ಕಾರಿ ಬಸ್​​, ಟ್ಯಾಂಕರ್​ ಹಾಗೂ ಟ್ಯಾಕ್ಸಿ ನಡುವೆ ಸರಣಿ ಅಪಘಾತ ಸಂಭವಿಸಿ 8 ಜನ ಮೃತಪಟ್ಟ ಘಟನೆ ಗುಜರಾತ್​ನ ತಾಪಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 24 […]

ಪೋಸ್ಟ್​ ಪೇಯ್ಡ್​! ಟೆಲಿಕಾಂ ಇಲಾಖೆಗೆ 8ಸಾವಿರ ಕೋಟಿ ಪಾತಿಸಿದ ಏರ್​ಟೆಲ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 03, 2020 | 12:13 PM

Share

ಟೆಲಿಕಾಂ ಇಲಾಖೆಗೆ ಏರ್‌ಟೆಲ್‌ ಕಂಪನಿ ಮತ್ತೆ 8,000 ಕೋಟಿ ರೂಪಾಯಿ ಪಾವತಿಸಿದೆ. ಫೆ.17ರಂದು 10 ಸಾವಿರ ಕೋಟಿ ಪಾವತಿ ಮಾಡಿತ್ತು. ತರಂಗಗುಚ್ಛದ ಬಳಕೆ, ಪರವಾನಗಿ ಶುಲ್ಕ ಸೇರಿದಂತೆ ಏರ್‌ಟೆಲ್‌ 35,586 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ದಂಡ ಪಾವತಿಸುವಂತೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ ಮೆಟ್ಟಿಲೇರಿತ್ತು.

ಅಪಘಾತಕ್ಕೆ 8 ಮಂದಿ ಬಲಿ: ಸರ್ಕಾರಿ ಬಸ್​​, ಟ್ಯಾಂಕರ್​ ಹಾಗೂ ಟ್ಯಾಕ್ಸಿ ನಡುವೆ ಸರಣಿ ಅಪಘಾತ ಸಂಭವಿಸಿ 8 ಜನ ಮೃತಪಟ್ಟ ಘಟನೆ ಗುಜರಾತ್​ನ ತಾಪಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 24 ಜನರಿಗೆ ಗಂಭೀರ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ. ಟ್ಯಾಂಕರ್ ಚಾಲರ ರಾಂಗ್ ಸೈಡ್ ಬಂದಿದ್ದು, ಘಟನೆ ಕಾರಣ ಎನ್ನಲಾಗಿದೆ.

‘ಕೇಂದ್ರ ಸರ್ಕಾರ ಪ್ರಯೋಜಿತ ನರಮೇಧ’ ದೆಹಲಿಯಲ್ಲಿನ ಹಿಂಸಾಚಾರ ಕೇಂದ್ರ ಸರ್ಕಾರ ಪ್ರಯೋಜಿತ ನರಮೇಧ ಅಂತಾ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಅಲ್ದೆ, ಕೋಲ್ಕತ್ತಾದಲ್ಲಿ ಗೋಲಿಮಾರೋ ಘೋಷಣೆ ಕೂಗಿದ್ದನ್ನು ಖಂಡಿಸಿದ ದೀದಿ, ಗುಜರಾತ್ ಮಾದರಿಯ ನರಮೇಧವನ್ನು ಪುನಾರವರ್ತಿಸಲಾಗುತ್ತಿದೆ ಅಂತಲೂ ಕಿಡಿಕಾರಿದ್ದಾರೆ.

‘ಕೊರೊನಾಗೆ ಗೋಮೂತ್ರ, ಸಗಣಿ ಮದ್ದು’ ಗೋಮೂತ್ರ, ಸಗಣಿಯಿಂದ ಕೊರೊನಾ ವೈರಸ್​ನ್ನ ಗುಣಪಡಿಸಬಹುದು ಅಂತಾ ಅಸ್ಸಾಂ ಬಿಜೆಪಿ ಶಾಸಕಿ ಹೇಳಿದ್ದಾರೆ. ಅಸ್ಸಾಂ ವಿಧಾನಸಭೆಯಲ್ಲಿ ಮಾತಾಡಿರೋ ಶಾಸಕಿ ಸುಮನ್ ಹರಿಪ್ರಿಯಾ, ಗೋ ಮೂತ್ರ ಸಿಂಪಡಿಸಿದ್ರೆ ಇಡೀ ಏರಿಯಾ ಶುದ್ಧವಾಗುತ್ತೆ ಅಂದಿದ್ದಾರೆ. ಸುಮನ್ ಹರಿಪ್ರಿಯಾ, ಸಿನಿಮಾ ನಿರ್ದೇಶಕಿ, ನಿರ್ಮಾಪಕಿಯೂ ಆಗಿದ್ದಾರೆ.

ಅಧಿಕಾರಿ ಕುಟುಂಬಕ್ಕೆ 1 ಕೋಟಿ ಪರಿಹಾರ: ದೆಹಲಿ ಹಿಂಸಾಚಾರ ವೇಳೆ ಹತ್ಯೆಗೀಡಾದ ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಕುಟುಂಬಕ್ಕೆ ಸಿಎಂ ಕೇಜ್ರಿವಾಲ್ ಪರಿಹಾರ ಘೋಷಿಸಿದ್ದಾರೆ. 1 ಕೋಟಿ ಪರಿಹಾರ ಕೊಡೋದಾಗಿ ಘೋಷಿಸಿದ್ದಲ್ದೇ, ಕುಟುಂಬದ ಒಬ್ರಿಗೆ ಸರ್ಕಾರಿ ಕೆಲಸದ ಭರವಸೆ ನೀಡಿದ್ದಾರೆ. ಕಳೆದ ವಾರ ಚಾಂದಬಾಗ್ ಮೋರಿಯಲ್ಲಿ ಅಧಿಕಾರಿಯ ಮೃತದೇಹ ಪತ್ತೆಯಾಗಿತ್ತು.

ಮಗನಿಗೆ ಬೈಕ್ ಕೊಟ್ಟ ಅಪ್ಪನಿಗೆ ಫೈನ್: ಒಡಿಶಾದ ಸಂಬಾಲ್ಪುರ್ ಜಿಲ್ಲೆಯ ಖೇತ್ರಾಜ್‌ಪುರ ಟ್ರಾಫಿಕ್ ಪೊಲೀಸರು ಅಪ್ರಾಪ್ತ ಮಗನಿಗೆ ಬೈಕ್‌ ನೀಡಿದ ತಂದೆಗೆ 43 ಸಾವಿರ ರೂಪಾಯಿ ದಂಡ ಹಾಕಿದ್ದಾರೆ. ಬಾಲಕ ಬರಿಸ್ ಸಿಂಗ್ ಅಪ್ಪ ಬಿಜಯ್ ಸಿಂಗ್ ಒಡೆತನದ ಸ್ಕೂಟರನ್ನು ಹೆಲ್ಮೆಟ್ ಧರಿಸದೆ ಓಡಿಸುತ್ತಿದ್ದ. ಈ ವೇಳೆ ದಾಖಲೆ ಕೇಳಿದಾಗ ಆತನ ಬಳಿ ಲೈಸೆನ್ಸ್ ಇಲ್ಲದಿರುವುದು ಕಂಡುಬಂದಿದೆ.

ಜಿ.ಎಸ್‌.ಟಿ ಸಂಗ್ರಹದಲ್ಲಿ ಹೆಚ್ಚಳ: ಆರ್ಥಿಕ ಸಂಕಷ್ಟದಿಂದ ನಲುಗಿ ಹೋಗಿರುವ ಕೇಂದ್ರ ಸರ್ಕಾರಕ್ಕೆ ಜಿ.ಎಸ್.ಟಿ ಸಂಗ್ರಹದಲ್ಲಿ ಹೆಚ್ಚಳವಾಗಿರುವುದು ಖುಷಿ ತರಿಸಿದೆ .ಫೆಬ್ರವರಿ ತಿಂಗಳಲ್ಲಿ ಸುಮಾರು 1.05 ಲಕ್ಷ ಕೋಟಿ ರೂ ಜೆಎಸ್‌ಟಿ ಸಂಗ್ರಹವಾಗಿದ್ದು, ಇದು ಕಳೆದ ವರ್ಷ ಫೆಬ್ರವರಿ ತಿಂಗಳಿನಲ್ಲಿ ಸಂಗ್ರಹಿಸಿದ್ದ ಜಿಎಸ್ಟಿ ಮೊತ್ತಕ್ಕಿಂತ ಶೇಕಡಾ 8.3%ರಷ್ಟಿದೆ.

Published On - 7:43 am, Tue, 3 March 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು