AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಿತ್ ದೋವಲ್ ನಿವಾಸದ ಭದ್ರತೆ ಕರ್ತವ್ಯದಲ್ಲಿ ವೈಫಲ್ಯ; ಮೂವರು ಕಮಾಂಡೋಗಳನ್ನು ವಜಾ ಮಾಡಿದ ಕೇಂದ್ರ

Ajit Doval ಫೆಬ್ರವರಿ 2022 ರಲ್ಲಿ ಅಜಿತ್ ದೋವಲ್ ಅವರ ನಿವಾಸದ ಆವರಣದೊಳಗೆ ವ್ಯಕ್ತಿಯೊಬ್ಬರು ಪ್ರವೇಶಿಸಲು ಪ್ರಯತ್ನಿಸಿದ್ದು ಭದ್ರತಾ ಉಲ್ಲಂಘನೆ ವರದಿಯಾಗಿತ್ತು.

ಅಜಿತ್ ದೋವಲ್ ನಿವಾಸದ ಭದ್ರತೆ ಕರ್ತವ್ಯದಲ್ಲಿ ವೈಫಲ್ಯ; ಮೂವರು ಕಮಾಂಡೋಗಳನ್ನು ವಜಾ ಮಾಡಿದ ಕೇಂದ್ರ
ಅಜಿತ್ ದೋವಲ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 17, 2022 | 8:28 PM

Share

ಈ ವರ್ಷದ ಫೆಬ್ರವರಿಯಲ್ಲಿ ಸಂಭವಿಸಿದ ಭದ್ರತಾ ಉಲ್ಲಂಘನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ (Ajit Doval) ಅವರ ಭದ್ರತೆಯಲ್ಲಿ ನಿಯೋಜಿತರಾಗಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಮೂವರು ಕಮಾಂಡೋಗಳನ್ನು ಕೇಂದ್ರ ಸರ್ಕಾರ ವಜಾಗೊಳಿಸಿದೆ. ಮೂಲಗಳ ಪ್ರಕಾರ, ಎನ್‌ಎಸ್‌ಎ ದೋವಲ್‌ ಅವರ ವಿಐಪಿ ಭದ್ರತೆಗೆ ಸಂಬಂಧಿಸಿದ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಮತ್ತು ಕಮಾಂಡೆಂಟ್ ಶ್ರೇಣಿಯ ಅಧಿಕಾರಿಯನ್ನು ಸರ್ಕಾರ ವರ್ಗಾವಣೆ ಮಾಡಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಫೆಬ್ರವರಿ 2022 ರಲ್ಲಿ ಅಜಿತ್ ದೋವಲ್ ಅವರ ನಿವಾಸದ ಆವರಣದೊಳಗೆ ವ್ಯಕ್ತಿಯೊಬ್ಬರು ಪ್ರವೇಶಿಸಲು ಪ್ರಯತ್ನಿಸಿದ್ದು ಭದ್ರತಾ ಉಲ್ಲಂಘನೆ ವರದಿಯಾಗಿತ್ತು. ಆ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ತಡೆದಿದ್ದು ನಂತರ ದೆಹಲಿ ಪೊಲೀಸರು ಬಂಧಿಸಿದ್ದರು. ವ್ಯಕ್ತಿಯೊಬ್ಬರು ಕೆಂಪು ಬಣ್ಣದ ಎಸ್‌ಯುವಿ ಚಲಾಯಿಸಿ ಬಂದಿದ್ದು ದೋವಲ್‌ರ ಹೈ-ಸೆಕ್ಯುರಿಟಿ ಸೆಂಟ್ರಲ್ ದೆಹಲಿ ನಿವಾಸದ ಗೇಟ್ ಮೂಲಕ ಪ್ರವೇಶಿಸಲು ಪ್ರಯತ್ನಿಸಿದೆ ಎಂದು ಮೂಲಗಳು ಇಂಡಿಯಾ ಟುಡೇಗೆ ತಿಳಿಸಿವೆ.

ಎನ್‌ಎಸ್‌ಎ ದೋವಲ್ ಅವರ ಮನೆಯನ್ನು ಕಾವಲು ಕಾಯುತ್ತಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿ ಕಾರನ್ನು ತಡೆದು ಆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮೂಲಗಳ ಪ್ರಕಾರ ಶಂತನು ರೆಡ್ಡಿ ಎಂದು ಗುರುತಿಸಲಾದ ವ್ಯಕ್ತಿ ತನ್ನ ದೇಹದಲ್ಲಿ ಚಿಪ್ ಇದೆ. ಇದನ್ನು ಹೊರಗಿನಿಂದ ನಿಯಂತ್ರಿಸಲಾಗುತ್ತಿದೆ ಎಂದು ಹೇಳಿಕೊಂಡಿದ್ದಾನೆ. ಆದರೆ, ಎಂಆರ್‌ಐ ಸ್ಕ್ಯಾನ್‌ನಲ್ಲಿ ಯಾವುದೇ ಚಿಪ್ ಪತ್ತೆಯಾಗಿಲ್ಲ.

ಈ ವ್ಯಕ್ತಿ ಬೆಂಗಳೂರಿನವನಾಗಿದ್ದು ಮಾನಸಿಕ ಅಸ್ವಸ್ಥನಾಗಿದ್ದ. ಕಾರನ್ನು ನೋಯ್ಡಾದಿಂದ ಬಾಡಿಗೆಗೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಐಎಸ್ಎಫ್ ಕಮಾಂಡೋಗಳ ಉನ್ನತ ಝೆಡ್ ಪ್ಲಸ್ ಕೆಟಗರಿ ಭದ್ರತೆ ದೋವಲ್ ಅವರಿಗಿದ್ದು ಘಟನೆ ನಡೆದಾಗ ಅವರು ಮನೆಯಲ್ಲೇ ಇದ್ದರು.

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು